Congress MLC Abdul jabbar clash

Congress: ಕಾಂಗ್ರೆಸ್‌ನಲ್ಲಿ ಹೆಚ್ಚಾದ ಆಂತರಿಕ ಬಂಡಾಯ, ಸವಾಲು ಹಾಕಿದ ಅಬ್ದುಲ್ ಜಬ್ಬಾರ್

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ಈಗ ಕಾಂಗ್ರೆಸ್‌ನ (Congress) ಆಂತರಿಕ ಬಂಡಾಯಕ್ಕೆ ವೇದಿಕೆಯಾಗಿದೆ. ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ (MLC) ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಆದರೆ ಈ ಅಮಾನತು ಆದೇಶಕ್ಕೆ ಜಬ್ಬಾರ್ ಕಿಂಚಿತ್ತೂ ಬಗ್ಗದೆ, ಉಲ್ಟಾ ಪಕ್ಷದ ನಾಯಕತ್ವದ ವಿರುದ್ಧವೇ ಗುಡುಗಿದ್ದಾರೆ. “ದಾಖಲೆ ಇದ್ದರೆ ಬಿಡುಗಡೆ ಮಾಡಿ”: ತಮ್ಮ ವಿರುದ್ಧದ ಶಿಸ್ತು ಕ್ರಮಕ್ಕೆ ಕೆಂಡಾಮಂಡಲವಾಗಿರುವ ಅಬ್ದುಲ್…

Read More
Apollo Mysuru climbathan for world health day

Apollo: ವಿಶ್ವ ಆರೋಗ್ಯ ದಿನ ಹಿನ್ನಲೆ, ಯಶಸ್ವಿಯಾಗಿ ನಡೆದ

ಮೈಸೂರು: ವಿಶ್ವ ಆರೋಗ್ಯ ದಿನದ ಅಂಗವಾಗಿ ಅಪೋಲೊ ಆಸ್ಪತ್ರೆಯು ಚಾಮುಂಡಿ ಬೆಟ್ಟದಲ್ಲಿ “ಹಂತ ಹಂತವಾಗಿ – 1001 ಹಂತಗಳು” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ‘ಅಪೋಲೊ ಕ್ಲೈಂಬಥಾನ್ 4.0’ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. (Apollo) ಎಲ್ಲಾ ವಯೋಮಾನದ ಫಿಟ್ನೆಸ್ ಆಸಕ್ತರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವು ಬೆಳಗ್ಗೆ 6:15ಕ್ಕೆ ಗಣ್ಯರ ಆಗಮನದಿಂದೊಂದಿಗೆ ಪ್ರಾರಂಭಯಿತು. ಬಳಿಕ ಜುಂಬಾ ವಾರ್ಮ್-ಅಪ್ ಕಾರ್ಯಕ್ರಮ ನಡೆಯಿತು. ನಂತರ 6:30ಕ್ಕೆ ಕ್ಲೈಂಬಥಾನ್ಗೆ ಅಧಿಕೃತ ಚಾಲನೆ ನೀಡಲಾಯಿತು. 1001 ಮೆಟ್ಟಿಲುಗಳನ್ನು ದೃಢಸಂಕಲ್ಪದೊಂದಿಗೆ ಏರಿ, ಅಂತಿಮ ಗುರಿ ತಲುಪಿದವರಿಗೆ ಪದಕಗಳನ್ನು…

Read More
CM Siddaramaiah announces 5 lakh compensation

CM Siddaramaiah: ಹುಲಿಕಲ್‌ ಘಾಟ್‌ ಮಣ್ಣು ಕುಸಿತ, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ

ಬೆಂಗಳೂರು: ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಸಮಯದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವಿಗೀಡಾಗಿರುವ ಘಟನೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ಬಹಳ ದುಃಖವಾಯಿತು ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ಅವರು, ನನಗೆ ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ‌ ದುಃಖವಾಯಿತು. ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು…

Read More
davangere and bagalkote by election voting percentage information

By Election: ದಾವಣಗೆರೆ-ಬಾಗಲಕೋಟೆ ಉಪಚುನಾವಣೆ, ಮತದಾರರಿಂದ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (By Election) ಮತದಾನ ಪ್ರಕ್ರಿಯೆ ಅತ್ಯಂತ ಬಿರುಸಿನಿಂದ ಸಾಗುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನದಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಮಧ್ಯಾಹ್ನ 3 ಗಂಟೆಯ ವೇಳೆಗೆ ಬಾಗಲಕೋಟೆಯಲ್ಲಿ ಶೇ. 54.82 ಹಾಗೂ ದಾವಣಗೆರೆಯಲ್ಲಿ ಶೇ. 49.66 ರಷ್ಟು ದಾಖಲೆ ಪ್ರಮಾಣದ ಮತದಾನವಾಗಿದೆ. ಆರಂಭದಲ್ಲಿ ಮಂದಗತಿಯಲ್ಲಿದ್ದ ಪ್ರಕ್ರಿಯೆಯು ಮಧ್ಯಾಹ್ನವಾಗುತ್ತಿದ್ದಂತೆ ವೇಗ ಪಡೆದುಕೊಂಡಿದ್ದು, ಮತದಾರರು ಬಿಸಿಲನ್ನೂ ಲೆಕ್ಕಿಸದೆ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿದ್ದಾರೆ….

Read More
Second puc result announced

PUC Result: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಹೀಗೆ ಚೆಕ್‌ ಮಾಡಿ

ಬೆಂಗಳೂರು: 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ (PUC Result) ಇಂದು ಹೊರಬಿದ್ದಿದ್ದು, ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದೆ. ಆನ್‌ಲೈನ್‌ನಲ್ಲಿ ಈಗಾಗಲೇ ಫಲಿತಾಂಶ ಲಭ್ಯವಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕೃತ ವಿವರಗಳನ್ನು ನೀಡಲಿದ್ದಾರೆ. ರಿಸಲ್ಟ್‌ ನೋಡೋದು ಹೇಗೆ? ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಮೂಲಕ ತಮ್ಮ ಫಲಿತಾಂಶವನ್ನು ಸುಲಭವಾಗಿ…

Read More
Demand for induction stove increased in bengaluru

Bengaluru: ರಾಜಧಾನಿಯಲ್ಲಿ ಗ್ಯಾಸ್‌ ಸಂಕಷ್ಟ, ಇಂಡಕ್ಷನ್‌ ಸ್ಟವ್‌ ಹಿಂದೆ ಬಿದ್ದ ಜನ

ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಕಾರ್ಮೋಡ ಇದೀಗ ಬೆಂಗಳೂರಿನ (Bengaluru) ಅಡುಗೆ ಮನೆಗಳಿಗೂ ತಟ್ಟಿದೆ. ಜಾಗತಿಕವಾಗಿ ಅನಿಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಿಗುವುದು ಕಷ್ಟವಾಗಬಹುದು ಎಂಬ ಭೀತಿ ಶುರುವಾಗಿದೆ. ಈ ಕಾರಣದಿಂದಾಗಿ ರಾಜಧಾನಿಯ ಜನ ಸಾಮಾನ್ಯರು ಹಾಗೂ ಹೋಟೆಲ್ ಮಾಲೀಕರು ಅಡುಗೆ ಅನಿಲಕ್ಕೆ ಪರ್ಯಾಯವಾಗಿ ವಿದ್ಯುತ್ ಚಾಲಿತ ಇಂಡಕ್ಷನ್ ಸ್ಟವ್‌ಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಸ್ಟಾರ್‌ ಹೋಟೆಲ್‌ಗಳಿಂದಲೂ ಬೇಡಿಕೆ ನಗರದಲ್ಲಿ ಇಂಡಕ್ಷನ್ ಒಲೆಗಳಿಗೆ ಹಿಂದೆಂದೂ ಇಲ್ಲದಂತಹ ಬೇಡಿಕೆ ಕಂಡುಬರುತ್ತಿದೆ. ಈ…

Read More
Siraguppa man destroy road which connects village

SIRAGUPPA: ದ್ವೇಷದಿಂದ ರಸ್ತೆ ಅಗೆದ ಭೂಪ, ರೋಗಿಯನ್ನ ಹೆಗಲ ಮೇಲೆ ಹೊತ್ತು ಸಾಗಿದ ಹಳ್ಳಿಗರು

ಸಿರಗುಪ್ಪ: ಹಳ್ಳಿಗಳಲ್ಲಿ ಜಮೀನು ವ್ಯಾಜ್ಯಗಳು ದಿನದಿಂದ ದಿನಕ್ಕೆ ವಿಕೋಪಕ್ಕೆ ಹೋಗುತ್ತಿರುವುದಕ್ಕೆ ಸಾಕ್ಷಿಯಾದ ಭೀಕರ ಘಟನೆಯೊಂದು ಸಿರಗುಪ್ಪ (Siraguppa) ತಾಲೂಕಿನ ಬಗ್ಗೂರು ಗ್ರಾಮದಲ್ಲಿ ನಡೆದಿದೆ. ರಸ್ತೆಯನ್ನೇ ಅಗೆದ ಭೂಪ ರಸ್ತೆ ವಿಚಾರವಾಗಿ ನಡೆದ ಜಗಳದ ಹಿನ್ನೆಲೆಯಲ್ಲಿ ಜಮೀನು ಮಾಲೀಕನೊಬ್ಬ ಸಾರ್ವಜನಿಕರು ಓಡಾಡುವ ದಾರಿಯನ್ನೇ ಜೆಸಿಬಿ ಮೂಲಕ ಅಗೆದು ಹಾಕಿದ್ದಾನೆ. ಇದರಿಂದಾಗಿ ಗ್ರಾಮದ ಬಾಲಕಿಯೊಬ್ಬಳು ತೀವ್ರ ಅನಾರೋಗ್ಯಕ್ಕೆ ತುತ್ತಾದಾಗ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಬರಲು ಸಾಧ್ಯವಾಗದೆ, ಗ್ರಾಮಸ್ಥರು ಬಾಲಕಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಅಗೆದ ರಸ್ತೆಯಲ್ಲೇ ನಡೆದು ಸಾಗಿಸಬೇಕಾದ…

Read More