TOP NEWS
Strict action will be taken on illegal cylinder supply says KH Muniyappa

KH Muniyappa: ಅನಧಿಕೃತ ಸಿಲಿಂಡರ್ ಮಾರಾಟದ ವಿರುದ್ಧ ಕ್ರಮ: ಕೆಎಚ್‌ ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಎದುರಾಗಿರುವ ಹಿನ್ನಲೆಯಲ್ಲಿ ಕಾಳಸಂತೆಯಲ್ಲಿ ಅನಧಿಕೃತ  ಸಿಲಿಂಡರ್  ಮಾರಾಟ ಮಾಡುವವರ ವಿರುದ್ಧ ನಿಗಾ ವಹಿಸುವಂತೆ , ಪೊಲೀಸ್ ಅಧಿಕಾರಿಗಳಿಗೆ  ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದ್ದಾರೆ. ವಾಣಿಜ್ಯಾತ್ಮಕ  ಅಡುಗೆ ಅನಿಲ ಪೂರೈಕೆಗೆ ಸೂಚನೆ ಶೂನ್ಯ ವೇಳೆಯಲ್ಲಿ  , ಸದಸ್ಯರಾದ  ಎಂ. ನಾಗರಾಜ್  ಮತ್ತು ಐವಾನ್ ಡಿಸೋಜಾ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ತೈಲ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ….

Read More
State government meetings with Doctors succeed

Doctors: ವೈದ್ಯಾಧಿಕಾರಿಗಳ ಜೊತೆಗಿನ ಸಂಧಾನ ಸಭೆ ಯಶಸ್ವಿ

ಬೆಂಗಳೂರು: ರಾಜ್ಯ ಸರ್ಕಾರ ವೈದ್ಯಾಧಿಕಾರಿಗಳ (Doctors) ಸಂಘದೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ವಿಧಾನಸೌಧದಲ್ಲಿಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ವೈದ್ಯರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂದ್‌ ವಾಪಾಸ್‌ ಪಡೆಯಲು ಸೂಚನೆ ವೈದ್ಯರ ಸಂಘದ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ವೈದ್ಯರು ಕರೆ ನೀಡಿರುವ ಬಂದ್ ವಾಪಸ್ ಪಡೆಯಬೇಕು ಎಂದು ಸೂಚಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ವೈದ್ಯರ ಸಂಘ ಲಿಖಿತ ರೂಪದಲ್ಲಿ ಆದೇಶ ಬಂದ ಬಳಿಕ ತೀರ್ಮಾನ ತಿಳಿಸುವುದಾಗಿ ಸ್ಪಷ್ಟಪಡಿಸಿದೆ….

Read More
DK Shivakumar slams central government for raising gas price

DK Shivakumar: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ, ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 60 ರೂಪಾಯಿಗೆ ಏರಿಸಿರುವುದನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಖಂಡನೆ ಮಾಡಿದ್ದಾರೆ. ಬಿಜೆಪಿ ಸಂಸದರ ಧ್ಬನಿ ಎತ್ತಬೇಕು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ  ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಧ್ವನಿ ಎತ್ತುವಂತೆ ಆಗ್ರಹಿಸಿದ್ದಾರೆ. ಹೋಟೆಲ್ ಹಾಗೂ ಇತರ ಉದ್ದಿಮೆಗಳು ತೀವ್ರ ತೊಂದರೆಗೊಳಗಾಗಿದ್ದು, ಕೋಟ್ಯಂತರ ಮಹಿಳೆಯರ ಮೇಲೆ ಪರಿಣಾಮ ಬೀರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ- ಸಂಸದರಿಗೆ ಡಿಕೆಶಿ ಔತಣಕೂಟ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ…

Read More
15 thousand teachers post will be filled says minister Madhu Bangarappa

Madhu Bangarappa: 15 ಸಾವಿರ ಶಿಕ್ಷಕರ ಹುದ್ದೆ ನೇಮಕ: ಮಧು ಬಂಗಾರಪ್ಪ

ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. ಖಾಲಿ ಹುದ್ದೆ ಭರ್ತಿಗೆ ಕ್ರಮ  ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಹೆಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದರು. ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಅತಿಥಿ ಶಿಕ್ಷಕರನ್ನು…

Read More
Minister K Venkatesh about appointing veterinary doctor

K Venkatesh: 400 ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಕ್ರಮ: ಸಚಿವ ವೆಂಕಟೇಶ್‌

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 400 ಪಶುವೈದ್ಯಾಧಿಕಾರಿಗಳ ನೇರ ನೇಮಕಾತಿ ಮುಖಾಂತರ ಹಾಗೂ ಹೆಚ್ಚುವರಿಯಾಗಿ 400 ಪಶುವೈದ್ಯಾಧಿಕಾರಿಗಳ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ (K Venkatesh) ತಿಳಿಸಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನೇಮಕ  ವಿಧಾನಸಭೆಯಲ್ಲಿಂದು ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶುವೈದ್ಯಕೀಯ ಪರೀಕ್ಷಕರ 300 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆ ಹಂತದಲ್ಲಿದೆ…

Read More
Empty posts in universities will be filled soon says MC Sudhakar

MC Sudhakar: ವಿಶ್ವವಿದ್ಯಾಲಯದ ಖಾಲಿ ಹುದ್ದೆಗಳ ಶೀಘ್ರ ಭರ್ತಿ: ಎಂ.ಸಿ. ಸುಧಾಕರ್

ಬೆಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 1 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ (MC Sudhakar) ತಿಳಿಸಿದ್ದಾರೆ. 1 ಸಾವಿರ ಹುದ್ದೆ ಭರ್ತಿಗೆ ಬಜೆಟ್‌ ಆದೇಶ  ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 3 ಸಾವಿರ ಹುದ್ದೆಗಳ ಪೈಕಿ 1 ಸಾವಿರ ಭರ್ತಿ ಮಾಡಲು ಬಜೆಟ್‌ನಲ್ಲಿ ಮಂಜೂರಾತಿ ದೊರೆತಿದೆ. ಆಯಾ…

Read More
Dinesh Gundu Rao talks about medicine supply

Dinesh Gundu Rao: 890 ವಿಧದ ಔಷಧಿಗಳ ಖರೀದಿಗೆ 880 ಕೋಟಿ ವೆಚ್ಚ: ದಿನೇಶ್‌ ಗುಂಡೂರಾವ್‌

ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆ ಹಾಗೂ ಇತರ ಸರ್ಕಾರಿ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು ಸುಮಾರು 880 ಕೋಟಿ ರೂಪಾಯಿ ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ. ಪಾರದರ್ಶಕ ಟೆಂಡರ್  ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಡಾ. ಧನಂಜಯ ಸರ್ಜಿ ಹಾಗೂ ಪ್ರತಾಪಸಿಂಹ ನಾಯಕ್ ಕೆ. ಅವರ…

Read More