TOP NEWS
Mysuru Silk factory wont be closed says minister Venkatesh

Mysuru Silk: ಮೈಸೂರಿನ ರೇಷ್ಮೆ ಸೀರೆ ಉತ್ಪಾದನಾ ಘಟಕವನ್ನು  ಮುಚ್ಚುವುದಿಲ್ಲ: ಕೆ ವೆಂಕಟೇಶ್‌

ಬೆಂಗಳೂರು: ಮೈಸೂರಿನ ರೇಷ್ಮೆ ಸೀರೆ ಉತ್ಪಾದನಾ (Mysuru Silk) ಘಟಕವನ್ನು  ಮುಚ್ಚುವುದಿಲ್ಲ ಎಂದು  ರೇಷ್ಮೆ  ಸಚಿವ ಕೆ. ವೆಂಕಟೇಶ್ ವಿಧಾನಸಭೆಯಲ್ಲಿಂದು ಸ್ಪಷ್ಟಪಡಿಸಿದ್ದಾರೆ. ಶಾಸಕ  ಟಿ.ಎಸ್. ಶ್ರೀವತ್ಸ ಪ್ರಶ್ನೆಗೆ ಉತ್ತರಿಸಿದ ಸಚಿವರು,  ಕೆಲ ಅಧಿಕಾರಿಗಳು ರೇಷ್ಮೆ ಸೀರೆ ಉತ್ಪಾದನಾ ಘಟಕದ ಬಗ್ಗೆ ಮುಖ್ಯಮಂತ್ರಿಗಳಿಗೆ ತಪ್ಪು ಮಾಹಿತಿ ನೀಡಿ, ರೇಷ್ಮೆ ಘಟಕದ ಜಾಗವನ್ನು ಕ್ರೀಡಾಂಗಣ ನಿರ್ಮಾಣಕ್ಕೆ ಮನವಿ ಮಾಡಿದ್ದರು. ತಪ್ಪನ್ನು ಸರಿಪಡಿಸಲಾಗಿದ್ದು, ಘಟಕ  ಕಾರ್ಯನಿರ್ವಹಿಸಲಿದೆ. ಈ ಬಗ್ಗೆ ಆತಂಕ ಬೇಡ ಎಂದು ಹೇಳಿದರು. ದಿನಕ್ಕೆ 400 ಸೀರೆಗಳ ಉತ್ಪಾದನೆ ಈ…

Read More
DK Shivakumar talks about government development programs

DK Shivakumar; ಸರ್ಕಾರದ ಕೆಲಸಗಳನ್ನ ಹಾಡಿ ಹೊಗಳಿದ ಡಿಕೆ ಶಿವಕುಮಾರ್

ಕಲಬುರಗಿ: ಜಿಲ್ಲೆಯ ಸಮಗ್ರ ಪ್ರಗತಿಗೆ ಕಳೆದ 2 ವರ್ಷಗಳಲ್ಲಿ ಸರ್ಕಾರ 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಅನುದಾನ ನೀಡಿದ್ದು, ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಬಡವರಿಗೆ 2 ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬೆಣ್ಣೆ ತೊರ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆ ಕಲಬುರಗಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 365 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಣ್ಣೆ ತೊರ ಜಲಾಶಯಕ್ಕೆ ನೀರು…

Read More
Cheluvaraya Swamy on making farmers into businessmen

Cheluvaraya Swamy: ರೈತರನ್ನು ಉದ್ಯಮಿಗಳನ್ನಾಗಿ ಮಾಡಲಾಗುತ್ತೆ: ಚಲುವರಾಯಸ್ವಾಮಿ

ಮಂಡ್ಯ: ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕಿಸುವ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ (Cheluvaraya Swamy) ಹೇಳಿದ್ದಾರೆ.  ಮಂಡ್ಯ ಕೃಷಿ ಪ್ರಧಾನ ಜಿಲ್ಲೆ ಮಂಡ್ಯ ನಗರದಲ್ಲಿಂದು ವಿವಿಧ ಇಲಾಖೆಗಳ ವತಿಯಿಂದ ಏರ್ಪಡಿಸಲಾಗಿದ್ದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಇಲ್ಲಿನ ಕೃಷಿ ರಂಗಕ್ಕೆ ಹೆಚ್ಚಿನ ಬಲ ತುಂಬಲು ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು…

Read More
Good News for Dakshina kannada people regarding elephant issue

Good News: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೆ ಕಾರ್ಯಪಡೆ ಆರಂಭ

ದಕ್ಷಿಣ ಕನ್ನಡ: ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಆನೆ ಕಾರ್ಯಪಡೆಯನ್ನು ರಚನೆ ಮಾಡಿ ರಾಜ್ಯ ಸರ್ಕಾರ (Good News) ಮಹತ್ವದ ಆದೇಶ ಹೊರಡಿಸಿದೆ. ಕಾಡಂಚಿನ ಜನವಸತಿ, ಕೃಷಿ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ.  ಯಾರೆಲ್ಲಾ ಇರಲಿದ್ದಾರೆ ಈ ಕಾರ್ಯಪಡೆಯಲ್ಲಿ? ಈ ಕಾರ್ಯಪಡೆಯಲ್ಲಿ ಒಬ್ಬರು ಉಪ ವಲಯ ಅರಣ್ಯಾಧಿಕಾರಿ, ಇಬ್ಬರು ಗಸ್ತು ಅರಣ್ಯ ಪಾಲಕರು, 25 ವಾಹನ ಚಾಲಕರು ಅಥವಾ ತತ್ಸಮಾನ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಈ ಆನೆ ಕಾರ್ಯಪಡೆಯ ಕೇಂದ್ರ ಸ್ಥಾನವು ಸುಳ್ಯ…

Read More
Bengaluru Karaga commissioner checks preparation

Karaga: ಬೆಂಗಳೂರು ಕರಗಾಗೆ ದಿನಗಣನೆ, ಆಯುಕ್ತರಿಂದ ಸ್ಥಳ ಪರಿಶೀಲನೆ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ (Karaga) ಮಹೋತ್ಸವದ ಅಂಗವಾಗಿ ಧರ್ಮರಾಯಸ್ವಾಮಿ ದೇವಸ್ಥಾನದ ಪೂರ್ವಸಿದ್ಧತೆಗಳ ಬಗ್ಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ನೇತೃತ್ವದಲ್ಲಿಂದು ದೇವಸ್ಥಾನದ ಸುತ್ತಲಿನ ಸ್ಥಳ ಪರಿಶೀಲನೆ ನಡೆಯಿತು. ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ  ಆಯುಕ್ತರು ದೇವಸ್ಥಾನ ಆಡಳಿತ ಮಂಡಳಿಯವರೊಂದಿಗೆ ಹಾಗೂ ಸಂಬಂಧಪಟ್ಟ ನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವತಿಯಿಂದ ಕೈಗೊಳ್ಳಬೇಕಾದ, ಕರಗ ಹಾದುಹೋಗುವ ಸ್ಥಳಗಳಲ್ಲಿ ರಸ್ತೆ ದುರಸ್ತಿ, ಒಳಚರಂಡಿಗಳ ಮ್ಯಾನ್‌ಹೋಲ್‌ಗಳ ದುರಸ್ತಿ, ರಸ್ತೆ ಗುಂಡಿ…

Read More
BY Vijayendra warns state government over employment issue

BY Vijayendra: ಸರ್ಕಾರ ಸಂಪೂರ್ಣ ವಿಫಲವಾಗಿದೆ, ಬಿವೈ ವಿಜಯೇಂದ್ರ

ಬೆಂಗಳೂರು: ಒಳಮೀಸಲಾತಿಯನ್ನು ಪರಿಗಣಿಸಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.  ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ನ್ಯಾಯಾಲಯದ ಕುಂಟುನೆಪ ಹೇಳಬಾರದು. ಉದ್ಯೋಗ ಸೃಷ್ಟಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು,” ಎಂದು ಎಚ್ಚರಿಕೆ ನೀಡಿದ್ದಾರೆ.  ಸರ್ಕಾರ ಸಂಪೂರ್ಣ ವಿಫಲ ಸರ್ಕಾರ ಇದುವರೆಗೆ ಅತಿಥಿ ಉಪನ್ಯಾಸಕರ ಯಾವುದೇ ಭರವಸೆ ಈಡೇರಿಸಿಲ್ಲ. ಶೀಘ್ರವೇ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹೋರಾಟ ಆರಂಭಿಸಲಿದ್ದಾರೆ ಎಂದು…

Read More
V Somanna inaugurated railway bridge

V Somanna: ರೈಲ್ವೆ ಕೆಳ ಸೇತುವೆ ಲೋಕಾರ್ಪಣೆ ಮಾಡಿದ ವಿ ಸೋಮಣ್ಣ

ತುಮಕೂರು:  ಜಿಲ್ಲೆಯ ಗುಬ್ಬಿ ತಾಲೂಕಿನ ವಿವಿಧೆಡೆ ನೂತನವಾಗಿ ನಿರ್ಮಿಸಿದ ರೈಲ್ವೆ ಕೆಳ ಸೇತುವೆಯನ್ನು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ಇಂದು ಲೋಕಾರ್ಪಣೆ ಮಾಡಿದರು.  ರೈಲ್ವೆ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪ್ರವೀಣ್ ಕಾತರಕಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.  ಬಳಿಕ ವಿ. ಸೋಮಣ್ಣ, ರಾಜ್ಯದಲ್ಲಿ 52 ಸಾವಿರ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಮೌಲ್ಯದ ರೈಲ್ವೆ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ. ಇನ್ನೂ 50 ಸಾವಿರ ಕೋಟಿ ರೂಪಾಯಿ ಅನುದಾನ ದೊರೆಯುವ…

Read More