TOP NEWS
HK Patil inaugurated lakkundi 5 temple and well

HK Patil: ಲಕ್ಕುಂಡಿಯಲ್ಲಿ ಪಂಚ ದೇವಾಲಯ ಅನಾವರಣ ಮಾಡಿದ ಎಚ್‌ಕೆ ಪಾಟೀಲ್

ಗದಗ: ಜಿಲ್ಲೆಯ ಐತಿಹಾಸಿಕ ತಾಣವಾಗಿರುವ ಲಕ್ಕುಂಡಿಯ ಪಂಚ ದೇವಾಲಯ ಮತ್ತು ಪಂಚ ಬಾವಿಗಳನ್ನು ಲಕ್ಕುಂಡಿಯಲ್ಲಿ ನಿನ್ನೆ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ (HK Patil) ಅನಾವರಣಗೊಳಿಸಿದರು.  ಪ್ರವಾಸೋದ್ಯಮ ಇಲಾಖೆ, ಪ್ರಾಚ್ಯ ವಸ್ತು ಇಲಾಖೆ ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ   ಶಾಸಕರಾದ ಸಿ.ಸಿ. ಪಾಟೀಲ್, ಎಸ್.ವಿ. ಸಂಕನೂರ,  ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಲಕ್ಕುಂಡಿ ಪ್ರಾಧಿಕಾರ ಸದಸ್ಯ ಸಿದ್ದಲಿಂಗೇಶ್ ಪಾಟೀಲ್ ಉಪಸ್ಥಿತರಿದ್ದರು.  ಗತ ವೈಭವ ಮರಳಿ ತರಲು ನಿರ್ಧಾರ…

Read More
pralhad joshi post on Karnataka government using ballot paper

Pralhad Joshi: ಮತಪತ್ರ ಬಳಕೆ ವಿರೋಧಿಸಿದ ಬಿಜೆಪಿ, ಪ್ರಲ್ಹಾದ್  ಜೋಷಿ ಹೇಳಿದ್ದೇನು?

ಬೆಂಗಳೂರು: ಚುನಾವಣೆಗಳಲ್ಲಿ ವಿದ್ಯುನ್ಮಾನ  ಮತಯಂತ್ರ- ಇವಿಎಂ ಬದಲು ಮತಪತ್ರಕ್ಕೆ ಮಣೆಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಆಧುನಿಕತೆ, ತಂತ್ರಜ್ಞಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್  ಜೋಷಿ (Pralhad Joshi) ಹೇಳಿದ್ದಾರೆ.  ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಜೋಷಿ ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಹ ಮತಪತ್ರ ಬಳಕೆಗೆ ನಿರ್ಧರಿಸಿರುವುದು ಪ್ರಗತಿಯ ವಿರುದ್ಧದ ನಿಲುವಾಗಿದೆ ಎಂದು ತಿಳಿಸಿದ್ದಾರೆ.  ಇಡೀ ದೇಶವೇ …

Read More
V Somanna about union budget 2026

V Somanna: ರಾಜ್ಯದ ತೆರಿಗೆ ಪಾಲಿನಲ್ಲಿ ಕಡಿತ ಆಗಿಲ್ಲ: ವಿ ಸೋಮಣ್ಣ

ಬೆಳಗಾವಿ: ಇತ್ತೀಚಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2026ನೇ ಸಾಲಿನ ಬಜೆಟ್ ನಲ್ಲಿ ರಾಜ್ಯದ ತೆರಿಗೆ ಪಾಲಿನಲ್ಲಿ ಕಡಿತಗೊಳಿಸಲಾಗಿಲ್ಲ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ (V Somanna) ತಿಳಿಸಿದ್ದಾರೆ.  ಹೆಚ್ಚು ನೀಡಲಾಗಿದೆ ಎಂದ ಸಂಸದರು 15ನೆಯ ಹಣಕಾಸಿನ ಆಯೋಗಕ್ಕಿಂತ ಹೆಚ್ಚಿಗೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊದಲು ಇದ್ದ ಶೇಕಡ 3.5 ರಷ್ಟಿದ್ದ ತೆರಿಗೆ ಪಾಲನ್ನು 16ನೇ ಹಣಕಾಸಿನ ಆಯೋಗದಲ್ಲಿ…

Read More
Lakkundi mp Gaddigoudar visits to place

Lakkundi: ಲಕ್ಕುಂಡಿ ಉತ್ಖನನಕ್ಕೆ ಕೇಂದ್ರದ ಸಹಕಾರ, ಸಂಸದ ಗದ್ದಿಗೌಡರ್‌ ಹೇಳಿದ್ದೇನು?

ಗದಗ: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಲಕ್ಕುಂಡಿ (Lakkundi) ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ  ಕಾರ್ಯವನ್ನು ಇಂದು ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್  ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೇಂದ್ರದ ನೆರವಿನ ಭರವಸೆ ನೀಡಿದ ಸಂಸದರು ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಚಾಲುಕ್ಯರು ಮತ್ತು ವಿಜಯನಗರ ಅರಸರು ತಮ್ಮ ಆಳ್ವಿಕೆಯ ಸಂದರ್ಭದಲ್ಲಿ  ಲಕ್ಕುಂಡಿ ಪರಿಸರದಲ್ಲಿ ನೂರಾರು ದೇವಾಲಯಗಳನ್ನು ಮತ್ತು ಕಲ್ಯಾಣಿಗಳನ್ನು ನಿರ್ಮಿಸಿರುವುದು ಇತಿಹಾಸಗಳಿಂದ ತಿಳಿದು ಬರುತ್ತದೆ. ಭೂಮಿಯಲ್ಲಿ ಹುದಗಿರುವ ವಿಶ್ವ ಪ್ರಸಿದ್ಧ ಸ್ಮಾರಕಗಳನ್ನು ಜಗತ್ತಿಗೆ ಪರಿಚಯಿಸುವ…

Read More
mla Suresh Kumar slams bk hariprasad over astrologer kamalakar bhatt matter

Suresh Kumar: ಬಿಕೆ ಹರಿಪ್ರಸಾದ್‌ಗೆ ಟಾಂಗ್‌ ಕೊಟ್ಟ ಸುರೇಶ್‌ ಕುಮಾರ್‌, ಬೌದ್ಧಿಕ ದಿವಾಳಿತನ ಎಂದ ಶಾಸಕ

ಉತ್ತರ ಕನ್ನಡ: ಸಿದ್ದಾಪುರದ ವಸಂತ್‌ ನಾಯ್ಕ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ (Suresh Kumar) ಅವರು ಕಿಡಿಕಾರಿದ್ದಾರೆ. ಸುರೇಶ್‌ ಕುಮಾರ್‌ ವಿರುದ್ಧ ಆರೋಪ ಮಾಡಿದ್ದ ಹರಿಪ್ರಸಾದ್‌ ವಸಂತ್‌ ನಾಯ್ಕ್‌ ಕೊಲೆ ಪ್ರಕರಣದಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್‌ ಭಟ್‌ ಅವರನ್ನ ಬಂಧನ ಮಾಡಲಾಗಿದೆ. ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದ ಹರಿಪ್ರಸಾದ್ ಅವರು, ಈ ಜ್ಯೋತಿಷಿ ಕಮಲಾಕರ್‌ ಭಟ್‌ ಅವರನ್ನ ಬೆಳೆಸಿದ್ದು ಶಾಸಕ…

Read More
BY Vijayendra and r ashok asking for timmapura resignation

BY Vijayendra: ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಒತ್ತಾಯ, ರಾಹೋರಾತ್ರಿ ಧರಣಿ ಮಾಡಿದ ಪ್ರತಿಪಕ್ಷಗಳು

ಬೆಂಗಳೂರು :  ಅಬಕಾರಿ ಇಲಾಖೆಯಲ್ಲಿ 6 ಕೋಟಿ ರೂಪಾಯಿ ಹಗರಣ ನಡೆದಿದ್ದು, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹ ಮಾಡಿದ್ದಾರೆ.    ಹೋರಾಟ ಮುಂದುವರೆಸಲಾಗುತ್ತೆ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡದಿದ್ದರೆ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರತಿ ತಿಂಗಳು ಕೋಟಿ ವಸೂಲಿ ಮಾಡಿದ್ದಾರೆ ಈ ಸಮಯದಲ್ಲಿ ಮಾತನಾಡಿದಪ್ರತಿಪಕ್ಷ ನಾಯಕ ಆರ್.ಅಶೋಕ, ಅಬಕಾರಿ ಸಚಿವರು ಪ್ರತಿ ತಿಂಗಳು ಕೋಟಿ ಕೋಟಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇನ್ನು…

Read More
BJP petitions for Naseer Ahmed suspension

Naseer Ahmed: ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ, ನಜೀರ್‌ ಅಹ್ಮದ್‌ ಅಮಾನತಿಗೆ ಬಿಜೆಪಿ ಒತ್ತಾಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯ ನಸೀರ್ ಅಹ್ಮದ್ (Naseer Ahmed) ಅವರನ್ನು ತಕ್ಷಣವೇ ಸದನದಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ವಿಧಾನ ಪರಿಷತ್ತಿನಲ್ಲಿ ಇಂದು ವಿಪಕ್ಷ ಬಿಜೆಪಿ ಧರಣಿ ನಡೆಸಿತು.  ಸ್ಪಷ್ಟನೆ ನೀಡಿದ ಅಹ್ಮದ್‌ ನಸೀರ್ ಅಹ್ಮದ್ ಮಾತನಾಡಿ, ಪ್ರಧಾನಿ ಮೋದಿಯವರು ಇಲ್ಲ ಎಂದರೆ ದೇಶ ಇಲ್ಲ ಎಂದು ಬಿಜೆಪಿ ಸದಸ್ಯರು ಹೇಳಿದ್ದರು. ಹೀಗಾಗಿ ನಾನು ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾಗಿ ಸ್ಪಷ್ಟನೆ ನೀಡಿ, ತಾವು ಆಡಿದ ಮಾತಿಗೆ ವಿಷಾದ ವ್ಯಕ್ತಪಡಿಸಿದರು. …

Read More