Belagavi traffic police uses solar cap

Solar Cap: ಬೆಳಗಾವಿ ಬಿಸಿಲಿಗೆ ಪೊಲೀಸ್ ಹೈಟೆಕ್ ಮೊರೆ: ಸೋಲಾರ್ ಟೋಪಿ ಧರಿಸಿ ಟ್ರಾಫಿಕ್ ಸಿಬ್ಬಂದಿ ಕರ್ತವ್ಯ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ಸಾರ್ವಜನಿಕರು ಹೈರಾಣಾಗಿದ್ದಾರೆ. ಕಳೆದ 15 ದಿನಗಳಿಂದ ಇಲ್ಲಿನ ತಾಪಮಾನ 36 ರಿಂದ 39 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಇಂತಹ ಸುಡುವ ಬಿಸಿಲಿನಲ್ಲಿ ರಸ್ತೆಯ ಮಧ್ಯೆ ನಿಂತು ದಣಿವರಿಯದೆ ಕೆಲಸ ಮಾಡುವ ಸಂಚಾರಿ ಪೊಲೀಸರ ಕಷ್ಟ ಹೇಳತೀರದು. ಆದರೆ, ಬೆಳಗಾವಿಯ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಈ ಬಿಸಿಲಿನಿಂದ ಪಾರಾಗಲು ಕಂಡುಕೊಂಡಿರುವ ‘ಸೋಲಾರ್ ಕ್ಯಾಪ್’ (Solar Cap) ಉಪಾಯ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಟೋಪಿ ಮೇಲೆ ಸೋಲಾರ್‌…

Read More
FIR on people who tried to grabbing BDA land by fake documents

BDA: ಬಿಡಿಎ ಆಸ್ತಿ ಗುಳುಂ ಮಾಡಲು ಸ್ಕೆಚ್; 160 ಕೋಟಿ ಮೌಲ್ಯದ ಭೂ ಹಗರಣ ಬಯಲು

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (BDA) ಸೇರಿದ ಸುಮಾರು 160 ಕೋಟಿ ರೂಪಾಯಿ ಮೌಲ್ಯದ ಜಮೀನನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಯತ್ನಿಸಿದ ದೊಡ್ಡ ಜಾಲವೊಂದನ್ನು ಬಿಡಿಎ ವಿಚಕ್ಷಣಾ ದಳ ಭೇದಿಸಿದೆ. ಈ ಸಂಬಂಧ ಬೆಂಗಳೂರು ದಕ್ಷಿಣದ ಕೊತ್ತನೂರಿನ ನಿವಾಸಿಗಳಾದ ಲಕ್ಷ್ಮೀನಾರಾಯಣ, ಮಾರುತಿ ಕುಮಾರ್ ಸೇರಿದಂತೆ ಐವರ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ (FIR) ದಾಖಲಾಗಿವೆ. ಪ್ರಕರಣದ ಹಿನ್ನೆಲೆ ಕೊತ್ತನೂರಿನ ಸರ್ವೆ ನಂಬರ್ 177/1 ಮತ್ತು 176/1ರಲ್ಲಿರುವ 10 ಗುಂಟೆ ಬೆಲೆಬಾಳುವ ಆಸ್ತಿಯೇ…

Read More
KSRTC and BMTC strike on may 20

KSRTC: ಸಾರಿಗೆ ಸಮರ: ಮೇ 20 ರಿಂದ ರಾಜ್ಯಾದ್ಯಂತ ನೌಕರರ ಮುಷ್ಕರ

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ (KSRTC) ನಡುವಿನ ವೇತನ ಜಟಾಪಟಿ ಈಗ ಮುಷ್ಕರದ ಹಂತಕ್ಕೆ ಬಂದು ತಲುಪಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮೇ 20ರಿಂದ ಕೆಲಸ ನಿಲ್ಲಿಸಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರ ಸಂಘಟನೆಗಳು ನಿರ್ಧರಿಸಿವೆ. ಇದರಿಂದಾಗಿ ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಮಾತುಕತೆ ವಿಫಲ, ಮುಷ್ಕರ ಅನಿವಾರ್ಯ: ಸರ್ಕಾರದೊಂದಿಗೆ ನಡೆಸಿದ ಸಂಧಾನ ಸಭೆಗಳು ಯಶಸ್ವಿಯಾಗದ ಹಿನ್ನೆಲೆಯಲ್ಲಿ ನೌಕರರ ಜಂಟಿ ಕ್ರಿಯಾ…

Read More
dk shivakumar political statement increased curiosity

DK Shivakumar: ಹೈಕಮಾಂಡ್ ತೀರ್ಮಾನವೇ ನಮಗೆ ಪ್ರಸಾದ: ನಾಯಕತ್ವ ಬದಲಾವಣೆ ಚರ್ಚೆಗೆ ಡಿಕೆಶಿ ಮಾರ್ಮಿಕ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಸಂಚಲನ ಮತ್ತೆ ಶುರುವಾಗಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಏನೇ ಆದೇಶ ನೀಡಿದರೂ ನಮಗದು ಪ್ರಸಾದ ಇದ್ದಂತೆ,” ಎಂದು ಹೇಳುವ ಮೂಲಕ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

Read More
Education state government ordered to upgrade 23 high schools to pu collage

Education: ರಾಜ್ಯದ 23 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಮುಂದಾಗಿರುವ ಸರ್ಕಾರ, ಪ್ರಸಕ್ತ ಸಾಲಿನ ಬಜೆಟ್ ಭರವಸೆಯಂತೆ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 23 ಸರ್ಕಾರಿ ಪ್ರೌಢಶಾಲೆಗಳನ್ನು (Education) ಪದವಿ ಪೂರ್ವ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಿ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶಕರು ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇನ್ನು ಹತ್ತಿರವಾಗಲಿದೆ. ಈ ಹೊಸ ಕಾಲೇಜುಗಳು 2026-27ನೇ ಶೈಕ್ಷಣಿಕ ಸಾಲಿನಿಂದ ಅಧಿಕೃತವಾಗಿ ಬಾಗಿಲು ತೆರೆಯಲಿವೆ….

Read More
Be prepare for rainy season cm Siddaramaiah orders to GBA

CM Siddaramaiah: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ, ಇಂಜಿನಿಯರ್ ಅಮಾನತಿಗೆ ಸೂಚನೆ

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು. ಜಿಬಿಎ ಅಧಿಕಾರಿಗಳ ಸಭೆ ಮಾಡಿದ ಸಿಎಂ ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ಜಿಬಿಎ ಆಯುಕ್ತರುಗಳ ಸಭೆ ಜರುಗಿತು. ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ…

Read More
remove road side shops which is near to compounds says dk shivakumar

DK Shivakumar: ಕಾಂಪೌಂಡ್ ಪಕ್ಕ ಇರುವ ಬೀದಿ ವ್ಯಾಪಾರಿಗಳ ತೆರವಿಗೆ ಸೂಚನೆ

ಬೆಂಗಳೂರು: ಇಡೀ ಬೆಂಗಳೂರಿನಾದ್ಯಂತ ಅಪಾಯಕಾರಿಯಾಗಿರುವ ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಎಂದು ಸೂಚನೆ ನೀಡಲಾಗಿದೆ. ಇಂತಹ ಪ್ರದೇಶಗಳನ್ನು ಗುರುತಿಸಿ ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದರು. ಈ ಘಟನೆ ಆಗಬಾರದಿತ್ತು ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆಯೇ ಎಂದು ಕೇಳಿದಾಗ, “ಈ ದುರ್ಘಟನೆ ಸಂಭವಿಸಬಾರದಿತ್ತು, ಆದರೂ ಸಂಭವಿಸಿದೆ ಯಾವ ಅಧಿಕಾರಿಗಳ ನಿರ್ಲಕ್ಷ್ಯ ಎಂದು…

Read More