BK Hariprasad: ಆರ್ಎಸ್ಎಸ್ ಸಭೆ ಬೆನ್ನಲ್ಲೇ ಅಹಿತಕರ ಘಟನೆ ಭೀತಿ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ!
ಬೆಂಗಳೂರು: ಕುಂದಾನಗರಿ ಬೆಳಗಾವಿಯಲ್ಲಿ ಇಂದು (ಶುಕ್ರವಾರ) ಆರಂಭವಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಮುಖ ವಾರ್ಷಿಕ ಸಭೆಯ ಬೆನ್ನಲ್ಲೇ, ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ (BK Hariprasad) ತೀವ್ರ ಕಳವಳಕಾರಿ ಮತ್ತು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಗಡಿ ಜಿಲ್ಲೆಯಲ್ಲಿ ಸಂಘ ಪರಿವಾರ ಸಭೆ ನಡೆಸುತ್ತಿರುವುದರ ಹಿಂದೆ ಹತ್ತಾರು ಅನುಮಾನಗಳಿದ್ದು, ಈ ಸಭೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಇತಿಹಾಸ ಕೆದಕಿ ಆರ್ಎಸ್ಎಸ್…
