TOP NEWS
Disaster may strike Karnataka after Belagavi RSS meet Congress leader BK Hariprasad explosive claim

BK Hariprasad: ಆರ್‌ಎಸ್‌ಎಸ್ ಸಭೆ ಬೆನ್ನಲ್ಲೇ ಅಹಿತಕರ ಘಟನೆ ಭೀತಿ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ!

ಬೆಂಗಳೂರು: ಕುಂದಾನಗರಿ ಬೆಳಗಾವಿಯಲ್ಲಿ ಇಂದು (ಶುಕ್ರವಾರ) ಆರಂಭವಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಮುಖ ವಾರ್ಷಿಕ ಸಭೆಯ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ (BK Hariprasad) ತೀವ್ರ ಕಳವಳಕಾರಿ ಮತ್ತು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಗಡಿ ಜಿಲ್ಲೆಯಲ್ಲಿ ಸಂಘ ಪರಿವಾರ ಸಭೆ ನಡೆಸುತ್ತಿರುವುದರ ಹಿಂದೆ ಹತ್ತಾರು ಅನುಮಾನಗಳಿದ್ದು, ಈ ಸಭೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಇತಿಹಾಸ ಕೆದಕಿ ಆರ್‌ಎಸ್‌ಎಸ್…

Read More
Vatal Nagaraj leads unique Crowbar March against GBA over demolition drive

GBA: ಬಡ ವ್ಯಾಪಾರಿಗಳ ಅಂಗಡಿಗಳ ಮೇಲೆ ಜೆಸಿಬಿ ದಾಳಿ: ಜಿಬಿಎ ದರ್ಪದ ವಿರುದ್ಧ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ!

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಫುಟ್‌ಪಾತ್ ಬದಿಯ ಸಣ್ಣ ಮತ್ತು ಬಡ ವ್ಯಾಪಾರಿಗಳ ಅಂಗಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುತ್ತಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಕ್ರಮದ ವಿರುದ್ಧ ಕನ್ನಡ ಚಳವಳಿ ವಾಟಾಳ್ ಪಕ್ಷವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ದಬ್ಬಾಳಿಕೆಯನ್ನು ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಹಳೇ ಬಿಬಿಎಂಪಿ ಕಚೇರಿ ಬಳಿ ಇರುವ ಜಿಬಿಎ ಕಚೇರಿ ಮುಂಭಾಗದಲ್ಲಿ ಬೃಹತ್ ‘ಗುದ್ದಲಿ ಮೆರವಣಿಗೆ’ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು. ಸರ್ಕಾರದ ವಿರುದ್ಧ ಕಿಡಿಕಾರಿದ ವಾಟಾಳ್‌…

Read More
Be aware that people are observing us DK Shivakumar tells party workers and leaders

DK Shivakumar: ಜನ ನಮ್ಮನ್ನು ಗಮನಿಸುತ್ತಿದ್ದಾರೆ ಎಂಬ ಎಚ್ಚರದಲ್ಲಿ ಕೆಲಸ ಮಾಡಿ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ನಾವು ಎರಡು ಕಣ್ಣಲ್ಲಿ ನೂರು ಜನರನ್ನು ನೋಡಿದರೆ, ನೂರು ಜನರ ಇನ್ನೂರು ಕಣ್ಣುಗಳು ನಮ್ಮನ್ನು ಗಮನಿಸುತ್ತಿರುತ್ತವೆ, ಹಾಗಾಗಿ ಎಚ್ಚರದಲ್ಲಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಸಲಹೆ ನೀಡಿದ್ದಾರೆ. ಅಧಿಕಾರಿಗಳು ಮೈ ಮರೆಯಬಾರದು ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಆರಂಭದಲ್ಲಿಯೇ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನ ಕೊಟ್ಟಿದ್ದು, ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನಾದೇಶಕ್ಕಾಗಿ ಜನರ ಬಳಿಕೆ…

Read More
Rain update Heavy rains to recede in Karnataka dry weather expected from July 11

Rain Update: ವೀಕೆಂಡ್‌ನಿಂದ ರಾಜ್ಯಾದ್ಯಂತ ಮಳೆರಾಯ ಮಂಕು: ಜುಲೈ 11ರಿಂದ ಒಣಹವೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗವನ್ನು ಬೆಚ್ಚಿಬೀಳಿಸಿದ್ದ ಭಾರಿ ಮಳೆಗೆ ಸದ್ಯದಲ್ಲೇ (Rain Update) ಬಿಡುವು ಸಿಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮುಂದುವರಿದಿರುವ ವರುಣನ ಆರ್ಭಟ ಇನ್ನು ಕೇವಲ ಎರಡು ದಿನಗಳು ಮಾತ್ರ ಇರಲಿದ್ದು, ಆ ಬಳಿಕ ಮಳೆಯ ತೀವ್ರತೆ ತಗ್ಗಲಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಡಾ. ಲತಾ ಮುನ್ಸೂಚನೆ ನೀಡಿದ್ದಾರೆ. ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಮತ್ತು ಮಲೆನಾಡು ಪ್ರಾಂತ್ಯದ ಒಟ್ಟು…

Read More
Priyank Kharge direct dare to BJP Show me one leaders son who is a full time RSS worker

Priyank Kharge: ಒಬ್ಬ ಬಿಜೆಪಿ ನಾಯಕನ ಮಗನಾದ್ರೂ ಆರ್‌ಎಸ್‌ಎಸ್ ಫುಲ್ ಟೈಮ್ ಪ್ರಚಾರಕನಾಗಿದ್ದಾನಾ?: ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

ಬೆಂಗಳೂರು: ಬಿಜೆಪಿ ನಾಯಕರ ಮಕ್ಕಳು ಆರ್‌ಎಸ್‌ಎಸ್‌ನಲ್ಲಿ ಪೂರ್ಣಾವಧಿ ಪ್ರಚಾರಕರಾಗಿ ಕೆಲಸ ಮಾಡುತ್ತಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೊಲೆ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾದವರಿಗೆ ಸಂಘ ಪರಿವಾರದವರು ನೆರವು ನೀಡುತ್ತಿಲ್ಲ ಎಂದು ಹಿಂದೂ ಸಂಘಟನೆಗಳೇ ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ತಾವೂ ಮೊದಲಿನಿಂದಲೂ ಇದೇ ಮಾತನ್ನು ಹೇಳುತ್ತಿರುವುದಾಗಿ ನೆನಪಿಸಿದರು. ಧರ್ಮ ರಕ್ಷಣೆ ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಬಡವರ ಮಕ್ಕಳನ್ನು ಮಾತ್ರ ಮುಂಚೂಣಿಗೆ ಬಿಡಲಾಗುತ್ತಿದೆ ಎಂದು ಅವರು ಆಕ್ರೋಶ…

Read More
No Govt Interference in SIT Process Dr G Parameshwara

SIR: ಎಸ್‌ಐಆರ್‌ನಲ್ಲಿ ಸರ್ಕಾರದ ಕೈವಾಡವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ!

ತುಮಕೂರು: ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಸಂಪೂರ್ಣವಾಗಿ ಭಾರತೀಯ ಚುನಾವಣಾ ಆಯೋಗದ (ECI) ನಿಯಮಾವಳಿಗಳ ಪ್ರಕಾರವೇ ನಡೆಯುತ್ತಿದ್ದು, ಇದರಲ್ಲಿ ಸರ್ಕಾರದ ಯಾವುದೇ ರೀತಿಯ ಹಸ್ತಕ್ಷೇಪವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಗೊಂದಲ, ಬಿಎಲ್‌ಒಗಳ ಕರ್ತವ್ಯ ಲೋಪ ಹಾಗೂ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿವಾದದ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು. ವಿರೋಧ ಪಕ್ಷದ ಆರೋಪಕ್ಕೆ ತಿರುಗೇಟು ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು,…

Read More
KRS Inflow Rises, But Farmers Take Up 'Whip Protest' For Irrigation Water

KRS: ವರುಣನ ಕೃಪೆಯಿಂದ ಜಲಾಶಯಗಳಿಗೆ ಜೀವಕಳೆ: ಕೆಆರ್‌ಎಸ್ ಒಳಹರಿವು ಹೆಚ್ಚಿದ್ರೂ ನೀರಿಗಾಗಿ ರೈತರ ‘ಚಾವಟಿ ಚಳುವಳಿ’!

ಮಂಡ್ಯ/ಶ್ರೀರಂಗಪಟ್ಟಣ: ರಾಜ್ಯದಾದ್ಯಂತ ತೀವ್ರ ಕಾಯುವಿಕೆಯ ನಂತರ ಮುಂಗಾರು ಮಳೆ ಬಿರುಸುಗೊಂಡಿದ್ದು, ಬತ್ತಿ ಹೋಗಿದ್ದ ಜಲಾಶಯಗಳಿಗೆ ಹೊಸ ಜೀವಕಳೆ ಬಂದಿದೆ. ಹಳೆ ಮೈಸೂರು ಭಾಗದ ಜೀವನಾಡಿ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಬರುತ್ತಿರುವ ನೀರಿನ ಪ್ರಮಾಣದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ಕಳೆದ ಆರು ತಿಂಗಳಿನಿಂದ ಕುಸಿದಿದ್ದ ಒಳಹರಿವು ಇದೀಗ 5,734 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಕಳೆದ ಎರಡು ದಿನಗಳಲ್ಲಿ ಸುರಿದ ಮಳೆಯಿಂದಾಗಿ ಡ್ಯಾಂ ನೀರಿನ ಮಟ್ಟ 82.45 ಅಡಿಗೆ ತಲುಪಿದ್ದು, ಸದ್ಯ ಕುಡಿಯುವ ನೀರು ಹಾಗೂ ನಾಲೆಗಳಿಗಾಗಿ 777 ಕ್ಯೂಸೆಕ್ ನೀರನ್ನು…

Read More