ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳ ಪ್ರಸಕ್ತ ಸಾಲಿನ ಆಯವ್ಯಯದ ಪೂರ್ವಭಾವಿ ಸಿದ್ಧತೆ ಕುರಿತು ಬೆಂಗಳೂರಿನ ಶಾಸಕರ ಜತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಭೆ ನಡೆಸಿದ್ದಾರೆ.
ಯಾರೆಲ್ಲಾ ಸಭೆಯಲ್ಲಿ ಭಾಗವಹಿಸಿದ್ದರು?
ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ಸಂಸದರು, ಶಾಸಕರು ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್, ವಿಶೇಷ ಆಯುಕ್ತ ಮುನೀಶ್ ಮೌದ್ಗೀಲ್, ಉಪಮುಖ್ಯಮಂತ್ರಿ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಭಾಗವಹಿಸಿದ್ದರು.
ಇದನ್ನೂ ಓದಿ: ಮೈಸೂರಿನ ಅಪೋಲೊ ಬಿಜಿಎಸ್ ಆಸ್ಪತ್ರೆಯಿಂದ ಹೊಸ ಮೈಲಿಗಲ್ಲು ಸ್ಥಾಪನೆ
