TOP NEWS
Double Celebration sandalwood actress Harshika Poonacha and Bhuvan Ponnanna Blessed With a Baby Boy on Krishna Janmashtami

Sandalwood: ಸ್ಯಾಂಡಲ್‌ವುಡ್ ಕ್ಯೂಟ್ ಕಪಲ್ ಮನೆಗೆ ಪುಟ್ಟ ಕೃಷ್ಣನ ಆಗಮನ: ಗಂಡು ಮಗುವಿಗೆ ಜನ್ಮ ನೀಡಿದ ಹರ್ಪಿಕಾ ಪೂಣಚ್ಚ

ಬೆಂಗಳೂರು: ಸ್ಯಾಂಡಲ್‌ವುಡ್‌ನ (Sandalwood) ಜನಪ್ರಿಯ ಹಾಗೂ ಮಾದರಿ ದಂಪತಿಗಳಲ್ಲೊಬ್ಬರಾದ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ತಮ್ಮ ಕೌಟುಂಬಿಕ ಜೀವನದ ಮತ್ತೊಂದು ಸುಂದರ ಹಂತಕ್ಕೆ ಕಾಲಿಟ್ಟಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ದಿನದಂದು ಈ ದಂಪತಿ ತಮ್ಮ ಎರಡನೇ ಮಗುವನ್ನು (ಗಂಡು ಮಗು) ಪ್ರೀತಿಯಿಂದ ಜಗತ್ತಿಗೆ ಸ್ವಾಗತಿಸಿದ್ದಾರೆ. ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತವಾಗಿ ಹಂಚಿಕೊಂಡಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಖುಷಿಯ ಕ್ಷಣ ಹಂಚಿಕೊಂಡ ಜೋಡಿ ಸಾಮಾಜಿಕ ಜಾಲತಾಣದಲ್ಲಿ ಪುಟ್ಟ ಕಂದನ…

Read More
Aerial Inspection CM D K. Shivakumar Reviews Severe Drought Situation in North Karnataka

DK Shivakumar: ಉತ್ತರ ಕರ್ನಾಟಕದ 3 ಜಿಲ್ಲೆಗಳಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ವೈಮಾನಿಕ ಸಮೀಕ್ಷೆ: ಬರದ ಭೀಕರತೆ ಪರಿಶೀಲನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಭಾವದಿಂದಾಗಿ ಎದುರಾಗಿರುವ ಭೀಕರ ಬರಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಇಂದು ತೀವ್ರ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು. ಬಾಗಲಕೋಟೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿಮಾನದ ಮೂಲಕ ಸಂಚರಿಸಿದ ಅವರು, ಬೆಳೆ ಹಾನಿ ಹಾಗೂ ಕುಡಿಯುವ ನೀರಿನ ಸ್ಥಿತಿಗತಿಯನ್ನು ಖುದ್ದಾಗಿ ವೀಕ್ಷಿಸಿದರು. ಸಾರ್ವಜನಿಕರ ನೆರವಿಗೆ ಸರ್ಕಾರ ಬದ್ಧ ಸಮೀಕ್ಷೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರವು ಬರದ ಭೀಕರತೆಯನ್ನು ಅತ್ಯಂತ…

Read More
No More Discussions on Personal Life Actor Duniya Vijay Speaks Out on Family and Son Controversy

Duniya Vijay: ನಾನು ವಿಷಕಂಠ, ಎಲ್ಲವನ್ನೂ ನುಂಗಿಕೊಳ್ಳುತ್ತೇನೆ: ಕುಟುಂಬದ ವಿವಾದಗಳ ಬಗ್ಗೆ ಮೌನ ಮುರಿದ ದುನಿಯಾ ವಿಜಯ್

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ‘ದುನಿಯಾ’ ವಿಯ್ ತಮ್ಮ (Duniya Vijay) ಸಾಂಸಾರಿಕ ಜೀವನ ಹಾಗೂ ಕುಟುಂಬದಲ್ಲಿ ಉಂಟಾಗಿರುವ ಇತ್ತೀಚಿನ ವಿದ್ಯಮಾನಗಳ ಕುರಿತು ಮಾಧ್ಯಮಗಳ ಮುಂದೆ ಮುಕ್ತವಾಗಿ ಮಾತನಾಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಚಲನಚಿತ್ರವೊಂದರ ಹಾಡು ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ, ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಅತ್ಯಂತ ತಾಳ್ಮೆಯಿಂದ ಹಾಗೂ ಗಂಭೀರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಬಹಿರಂಗವಾಗಿ ಚರ್ಚಿಸಲು ನಾನು ಬಯಸುವುದಿಲ್ಲ ತಮ್ಮ ಕುಟುಂಬದ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ವಿಜಯ್, “ಸಾಂಸಾರಿಕ ಬದುಕಿನಲ್ಲಿ ಎದುರಾಗಿರುವ ಪ್ರತಿಯೊಂದು ವಿಚಾರದ ಕುರಿತು ನಾನು…

Read More
Karnataka Turns to Artificial Rain 28 52 Crore Cloud Seeding Drive Flagged Off

Cloud Seeding: ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಮೋಡ ಬಿತ್ತನೆಗೆ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮೋಡ ಬಿತ್ತನೆ’ ಕಾರ್ಯಕ್ರಮಕ್ಕೆ (Cloud Seeding) ಇಂದು ನಗರದ ಎಚ್.ಎ.ಎಲ್ (HAL) ವಿಮಾನ ನಿಲ್ದಾಣದಲ್ಲಿ ಜಲಸಂಪನ್ಮೂಲ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಮೋಡ ಬಿತ್ತನೆಗಾಗಿಯೇ ಸಿದ್ಧಗೊಂಡಿರುವ ವಿಶೇಷ ಲಘು ವಿಮಾನಕ್ಕೆ ರಾಷ್ಟ್ರಧ್ವಜ ಹಾಗೂ ನಾಡಧ್ವಜ ತೋರುವ ಮೂಲಕ ಚಾಲನೆ ನೀಡಿದ ಸಚಿವರು, ಯೋಜನೆ ಯಶಸ್ವಿಯಾಗಿ ರಾಜ್ಯದಲ್ಲಿ ನೀರಿನ ಹಾಹಾಕಾರ ಕಡಿಮೆಯಾಗಲಿ ಎಂದು…

Read More
KPSC Recruitment Fraud CID Investigation Exposes Direct Connections Between Accused and 50 Politicians

KPSC: ಬೆಂಗಳೂರಿನ ವಿಲ್ಲಾಗಳಲ್ಲಿ ಪರೀಕ್ಷೆ ಬರೆಸಿದ್ದ ಕಿಂಗ್‌ಪಿನ್: ಸಿಐಡಿ ವಿಚಾರಣೆಯಲ್ಲಿ ಕಳಚಿದ ಬಸವರಾಜ್ ಕನ್ನಾಳೆ ಮುಖವಾಡ

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಮುಖ್ಯ ಆರೋಪಿ ಬಸವರಾಜ್ ಕನ್ನಾಳೆಯನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆ ತೀವ್ರಗೊಳಿಸಿದ್ದು, ಕನ್ನಾಳೆ ಹೊಂದಿದ್ದ ದೈತ್ಯ ರಾಜಕೀಯ ಸಂಪರ್ಕ ಜಾಲ ತನಿಖಾಧಿಕಾರಿಗಳನ್ನು ಬೆಚ್ಚಿಬೀಳಿಸಿದೆ. ಉಜ್ಬೇಕಿಸ್ತಾನಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾದ ಈತನ ಮೊಬೈಲ್ ಮತ್ತು ಸಿಡಿಆರ್ (ಕರೆ ವಿವರ) ಪರಿಶೀಲಿಸಿದಾಗ, ರಾಜ್ಯದ ಸಚಿವರು, ಸಂಸದರು ಹಾಗೂ ಶಾಸಕರು (KPSC) ಸೇರಿದಂತೆ 50ಕ್ಕೂ ಹೆಚ್ಚು ಪ್ರಭಾವಿ ರಾಜಕಾರಣಿಗಳ ನೇರ ಸಂಪರ್ಕವಿರುವುದು ಬಹಿರಂಗವಾಗಿದೆ….

Read More
R G Kar Medical College Case Co Accused Trapped in Bengaluru for Conspiring Hurried Cremation west Bengal

West Bengal: ಆರ್.ಜಿ. ಕರ್ ವೈದ್ಯೆ ಹತ್ಯೆ ಪ್ರಕರಣ: ಸಾಕ್ಷ್ಯ ನಾಶಕ್ಕೆ ಸಂಚು ರೂಪಿಸಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ!

ಕೋಲ್ಕತ್ತಾ/ಬೆಂಗಳೂರು: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಶಿಫಾರಸು ಮಾಡಲ್ಪಟ್ಟ ಸ್ನಾತಕೋತ್ತರ ವೈದ್ಯೆಯ (West Bengal) ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಪ್ರಮುಖ ಕಾರ್ಯಾಚರಣೆ ನಡೆಸಿದ್ದಾರೆ. ಸಂತ್ರಸ್ತೆಯ ಮೃತದೇಹವನ್ನು ಅವಸರ-ಅವಸರವಾಗಿ ದಹನ ಮಾಡಿ ಪುರಾವೆ ನಾಶಪಡಿಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಪಾನಿಹಾಟಿ ಪುರಸಭೆಯ ಮಾಜಿ ಅಧ್ಯಕ್ಷ ಸೋಮನಾಥ್ ಡೇ ಅವರನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊನೆಗೂ ಬಂಧಿಸಲಾಗಿದೆ. ಪಶ್ಚಿಮ ಬಂಗಾಳದ…

Read More
Police Extortion Busted Lokayukta Arrests Constable Red Handed Over 20000 Bribe Demand

Lokayukta: ಕಲಬುರಗಿಯಲ್ಲಿ ಲೋಕಾಯುಕ್ತ ಭರ್ಜರಿ ಬೇಟೆ: ₹20 ಸಾವಿರ ಲಂಚ ಪಡೆಯುತ್ತಿದ್ದ ಕಾನ್‌ಸ್ಟೇಬಲ್ ರೆಡ್‌ಹ್ಯಾಂಡ್ ಲಾಕ್

ಕಲಬುರಗಿ: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರ ಜಿಲ್ಲೆ (Lokayukta) ಕಲಬುರಗಿಯಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್‌ ಒಬ್ಬರು ಬಲೆಗೆ ಬಿದ್ದಿದ್ದಾರೆ. 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಪೊಲೀಸ್ ಬ್ರಹ್ಮಪುರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಪರಶುರಾಮ್ ಎಂಬುವವರು ₹20,000 ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಠಾಣೆಯ ಹಿಂಭಾಗದಲ್ಲೇ ಹಣ ಸ್ವೀಕರಿಸುತ್ತಿದ್ದಾಗ ಈ ದಾಳಿ ನಡೆದಿದೆ. ಇದೇ ಪ್ರಕರಣದಲ್ಲಿ…

Read More