TOP NEWS
Protest rally to oppose Nuclear power plant in sagara taluk besur village

Sagara: ಅಣುವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ವಿರೋಧಿಸಿ ನಾಳೆ ಪ್ರತಿಭಟನೆ

ಶಿವಮೊಗ್ಗ: ಸಾಗರ (Sagara) ತಾಲ್ಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ದೇಶವನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಜನಹೋರಾಟ ವೇದಿಕೆವತಿಯಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಅಣುಸ್ಥಾವರದಿಂದ ಅಲ್ಲಿನ ಜನರ ಬದುಕಿಗೆ ಮಾರಕವಾಗುವುದು ಬೇಡ ಎಂದು ಜನ ಆಗ್ರಹ ಮಾಡಿದ್ದಾರೆ, ಎಲ್ಲಿ ಪ್ರತಿಭಟನೆ?ನಾಳೆ ಬೆಳಿಗ್ಗೆ 10-30ಕ್ಕೆ ಸಾಗರದ ಶಿವಪ್ಪ ನಾಯ್ಕ ವೃತ್ತದಿಂದ ಈ ಪ್ರತಿಭಟನೆ ರ್ಯಾಲಿ ಪ್ರಾರಂಭ ಮಾಡಲು ನಿರ್ಧಾರ…

Read More
Vande Mataram to get National Anthem Status

Vande Mataram: ಇನ್ನು ಮುಂದೆ ‘ವಂದೇ ಮಾತರಂ’ಗೂ ರಾಷ್ಟ್ರಗೀತೆಯಷ್ಟೇ ಗೌರವ: ಕೇಂದ್ರ ಸರ್ಕಾರದಿಂದ ಕಾನೂನು ತಿದ್ದುಪಡಿ

ನವದೆಹಲಿ: ಭಾರತದ ಸ್ವಾತಂತ್ರ್ಯ ಚಳವಳಿಯ ಪ್ರೇರಕ ಶಕ್ತಿಯಾಗಿದ್ದ ‘ವಂದೇ ಮಾತರಂ’ (Vande Mataram) ಗೀತೆಗೆ ಸಾಂವಿಧಾನಿಕವಾಗಿ ಅತ್ಯುನ್ನತ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು, ಈ ಗೀತೆಯನ್ನು ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೆ ಸಮಾನವಾಗಿ ಪರಿಗಣಿಸುವ ಪ್ರಸ್ತಾವನೆಗೆ ಅಸ್ತು ಎಂದಿದೆ. ಅವಮಾನಿಸಿದರೆ ಕಠಿಣ ಶಿಕ್ಷೆ: ಬಂಕಿಮಚಂದ್ರ ಚಟರ್ಜಿ ಅವರು ಈ ಗೀತೆಯನ್ನು ರಚಿಸಿ 150 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ….

Read More
shashi tharoor praises amit shah and modi

Shashi Tharoor: ಬಿಜೆಪಿಯ ಚುನಾವಣಾ ತಂತ್ರಗಾರಿಕೆಗೆ ಶಶಿ ತರೂರ್ ಮೆಚ್ಚುಗೆ: ಕಾಂಗ್ರೆಸ್‌ನಲ್ಲಿ ಆತ್ಮಾವಲೋಕನಕ್ಕೆ ಕರೆ!

ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ದಾಖಲಿಸಿರುವ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಕಾರ್ಯವೈಖರಿಯನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್ (Shashi Tharoor) ಶ್ಲಾಘಿಸಿದ್ದಾರೆ. ಎದುರಾಳಿ ಪಕ್ಷದ ಯಶಸ್ವಿ ಮ್ಯಾನೇಜ್‌ಮೆಂಟ್ ಕುರಿತು ಅವರು ನೀಡಿರುವ ಈ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ವೃತ್ತಿಪರ ಸಂಘಟನೆಗೆ ಸಂದ ಜಯ: ಬಿಜೆಪಿಯ ಚುನಾವಣಾ ನಿರ್ವಹಣೆಯ ಬಗ್ಗೆ ಮಾತನಾಡಿದ ತರೂರ್, “ನರೇಂದ್ರ ಮೋದಿ ಮತ್ತು ಅಮಿತ್…

Read More
santosh lad accuse election commission

Santosh Lad: ಇದು ಜನರ ಗೆಲುವಲ್ಲ, ಚುನಾವಣಾ ಆಯೋಗದ ಕೈಚಳಕ: ಬಿಜೆಪಿ ವಿರುದ್ಧ ಸಚಿವ ಸಂತೋಷ್ ಲಾಡ್ ಕಿಡಿ!

ಬೆಂಗಳೂರು: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅನಿರೀಕ್ಷಿತವಾಗಿ ಜಯಭೇರಿ ಬಾರಿಸಿರುವುದಕ್ಕೆ ಸಚಿವ ಸಂತೋಷ್ ಲಾಡ್ (Santosh Lad) ಅವರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಗೆಲುವಿನ ಹಿಂದೆ ಮತದಾರರ ಬೆಂಬಲಕ್ಕಿಂತ ಹೆಚ್ಚಾಗಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ಪಾತ್ರವೇ ದೊಡ್ಡದಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಆಯುಕ್ತರೇ ‘ಮ್ಯಾನ್ ಆಫ್ ದಿ ಮ್ಯಾಚ್’: ಅಸ್ಸಾಂ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಲಾಡ್, “ಅಲ್ಲಿನ ಗೆಲುವಿಗೆ ಜ್ಞಾನೇಶ್ ಕುಮಾರ್…

Read More
high court gives stay to state primary school association election procedure

High Court: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್

ಬೆಂಗಳೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೈಕೋರ್ಟ್ (High Court) ತಡೆಯಾಜ್ಞೆ ನೀಡಿದೆ. ಕೆಳ ಹಂತದ ನ್ಯಾಯಾಲಯ ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದ ಹೈಕೋರ್ಟ್‌ನ ಏಕಸದಸ್ಯ ಪೀಠವು, ಸದ್ಯಕ್ಕೆ ಯಾವುದೇ ಚುನಾವಣಾ ಚಟುವಟಿಕೆ ನಡೆಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇದರಿಂದಾಗಿ ಹಾಲಿ ಪದಾಧಿಕಾರಿಗಳಿಗೆ ಭಾರಿ ಹಿನ್ನಡೆಯಾಗಿದೆ. ಗಂಭೀರ ಸ್ವರೂಪದ ಅಕ್ರಮಗಳ ಆರೋಪ: ಸಂಘದ ಹಾಲಿ ಅಧ್ಯಕ್ಷ ಚಂದ್ರಶೇಖರ್ ನುಗ್ಲಿ ಮತ್ತು ಕಾರ್ಯದರ್ಶಿ ಚೇತನ್ ನುಗ್ಲಿ ಅವರು ಚುನಾವಣೆಯಲ್ಲಿ ಗೆಲ್ಲುವ…

Read More
vijay may resign to east Tiruchirappalli

Vijay: ಪೆರಂಬೂರು ಉಳಿಸಿಕೊಂಡು ತಿರುಚಿ ಕ್ಷೇತ್ರಕ್ಕೆ ವಿಜಯ್ ವಿದಾಯ? ಜಯಲಲಿತಾ ಹಾದಿಯಲ್ಲಿ ‘ದಳಪತಿ’ ಪಯಣ!

ಚೆನ್ನೈ: ತಮಿಳುನಾಡಿನ ಚುನಾವಣಾ ಅಖಾಡದಲ್ಲಿ ದ್ರಾವಿಡ ಪಕ್ಷಗಳ ದಶಕಗಳ ಆಧಿಪತ್ಯವನ್ನು ಅಲುಗಾಡಿಸಿರುವ ನಟ ವಿಜಯ್, (Vijay) ಈಗ ಆಡಳಿತಾತ್ಮಕ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಮೂಲಗಳ ಪ್ರಕಾರ, ತಾವು ಗೆದ್ದಿರುವ ಎರಡು ಕ್ಷೇತ್ರಗಳ ಪೈಕಿ ಪೆರಂಬೂರು ಕ್ಷೇತ್ರವನ್ನು ತಮ್ಮ ಬಳಿಯೇ ಉಳಿಸಿಕೊಂಡು, ತಿರುಚಿ (ಪೂರ್ವ) ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಅವರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಪೆರಂಬೂರು ಆಯ್ಕೆಗೆ ಕಾರಣವೇನು? ರಾಜಧಾನಿ ಚೆನ್ನೈಗೆ ಹತ್ತಿರವಿರುವ ಪೆರಂಬೂರು ಕ್ಷೇತ್ರವನ್ನು ಆಯ್ದುಕೊಳ್ಳುವ ಮೂಲಕ, ಆಡಳಿತಾತ್ಮಕ ಕೆಲಸಗಳನ್ನು ಮತ್ತು ಕ್ಷೇತ್ರದ ಜವಾಬ್ದಾರಿಗಳನ್ನು ಸಮರ್ಥವಾಗಿ…

Read More
panchamasali peetha controversy prohibitory order imposed

Panchamasali: ಪಂಚಮಸಾಲಿ ಪೀಠದಲ್ಲಿ ಲೆಕ್ಕದ ಸಂಘರ್ಷ: ಜಿಲ್ಲಾಡಳಿತದಿಂದ ನಿಷೇಧಾಜ್ಞೆ

ದಾವಣಗೆರೆ: ಹರಿಹರದ ಪಂಚಮಸಾಲಿ (Panchamasali) ಮಠದಲ್ಲಿ ವಚನಾನಂದ ಶ್ರೀಗಳ ಬೆಂಬಲಿಗರು ಹಾಗೂ ಟ್ರಸ್ಟ್ ಪದಾಧಿಕಾರಿಗಳ ನಡುವಿನ ಭಿನ್ನಮತ ತಾರಕಕ್ಕೇರಿದೆ. ಮಠದ ಒಳಜಗಳ ಬೀದಿ ರಂಪಾಟವಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಮಠದ ಆವರಣದಲ್ಲಿ ಒಂದು ತಿಂಗಳ ಕಾಲ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿ ಮಾಡಿದೆ. ಸಭೆ-ಸಮಾರಂಭಗಳಿಗೆ ಬ್ರೇಕ್: ಮಾರ್ಚ್ ತಿಂಗಳಿನಿಂದಲೂ ಮಠದ ಎರಡು ಬಣಗಳ ನಡುವೆ ಸಂಘರ್ಷ ನಡೆಯುತ್ತಿದ್ದು, ಪರಸ್ಪರ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗಿವೆ. ಮಠದ ಆವರಣದಲ್ಲಿ ನಡೆಯುವ ಸಭೆಗಳು ಸಾರ್ವಜನಿಕ ಶಾಂತಿಗೆ ಧಕ್ಕೆ ತರುತ್ತಿರುವುದರಿಂದ, ಮೇ 1 ರಿಂದ…

Read More