From may 1s st many changes in LPG cylinder booking

LPG: ಮೇ 1ರಿಂದ ಜಾರಿಯಾಗಲಿವೆ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ನ ಹೊಸ ನಿಯಮಗಳು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಜಾಗತಿಕ ತೈಲ ಪೂರೈಕೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಮೇ 1ರಿಂದ ಎಲ್‌ಪಿಜಿ (LPG) ಸಿಲಿಂಡರ್ ಬುಕ್ಕಿಂಗ್ ಮತ್ತು ವಿತರಣಾ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಜಾರಿಗೆ ತರಲು ತೈಲ ಕಂಪನಿಗಳು ನಿರ್ಧರಿಸಿವೆ. ಕಳ್ಳಸಂತೆಯನ್ನು ತಡೆಗಟ್ಟಿ, ಪಾರದರ್ಶಕತೆಯನ್ನು ಹೆಚ್ಚಿಸುವುದು ಈ ಹೊಸ ನಿಯಮಗಳ ಮುಖ್ಯ ಉದ್ದೇಶವಾಗಿದೆ. ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಹೊಸ ನಿರ್ಬಂಧ ಇನ್ಮುಂದೆ ಗ್ರಾಹಕರು ಇಷ್ಟಬಂದಾಗ ಸಿಲಿಂಡರ್ ಬುಕ್ ಮಾಡುವಂತಿಲ್ಲ. ನಗರ ಪ್ರದೇಶದ ಗ್ರಾಹಕರು ಒಂದು ಸಿಲಿಂಡರ್ ಪಡೆದ 20 ರಿಂದ 25 ದಿನಗಳ…

Read More
Rahul Gandhi fun incidents with collage students

Rahul Gandhi: ಜೀವನದಲ್ಲಿ ಅತಿದೊಡ್ಡ ರಿಸ್ಕ್ ಯಾವುದು?”: ರಾಹುಲ್ ಗಾಂಧಿಗೆ ವಿದ್ಯಾರ್ಥಿನಿ ನೀಡಿದ ಅಚ್ಚರಿಯ ಉತ್ತರ!

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಗಾರ್ಗಿ ಕಾಲೇಜಿಗೆ ಭೇಟಿ ನೀಡಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ವಿದ್ಯಾರ್ಥಿನಿಯರೊಂದಿಗೆ ನಡೆಸಿದ ಸಂವಾದದ ವೇಳೆ ನಡೆದ ತಮಾಷೆಯ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಾಷೆಯ ಉತ್ತರ ನೀಡಿದ ವಿದ್ಯಾರ್ಥಿನಿ ಸಂವಾದದ ಮಧ್ಯೆ ರಾಹುಲ್ ಗಾಂಧಿ ಅವರು ವಿದ್ಯಾರ್ಥಿನಿಯೊಬ್ಬರನ್ನು ಉದ್ದೇಶಿಸಿ, “ನಿಮ್ಮ ಜೀವನದಲ್ಲಿ ನೀವು ಮಾಡಿದ ಅತ್ಯಂತ ಅಪಾಯಕಾರಿ (ರಿಸ್ಕ್) ಕೆಲಸ ಯಾವುದು?” ಎಂದು ಪ್ರಶ್ನಿಸಿದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ವಿದ್ಯಾರ್ಥಿನಿ, “ಕಾಂಗ್ರೆಸ್ ಪಕ್ಷಕ್ಕೆ…

Read More
cooker bomb blast case 10 years jail for accused but victim is unhappy

Cooker Bomb Case: ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ; ಶಿಕ್ಷೆ ಸಾಕಾಗದು ಎಂದ ಸಂತ್ರಸ್ತ ಆಟೋ ಚಾಲಕ

ಮಂಗಳೂರು: 2022ರ ನವೆಂಬರ್ 19ರಂದು ನಡೆದಿದ್ದ ಬಹುಚರ್ಚಿತ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Cooker Bomb Case) ಪ್ರಕರಣದ ಅಪರಾಧಿ ಮೊಹಮ್ಮದ್ ಶಾರಿಕ್‌ಗೆ ಎನ್‌ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ವಾಸದ ಶಿಕ್ಷೆಯನ್ನು ವಿಧಿಸಿದೆ. ಈ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಸ್ಫೋಟದ ಸಂತ್ರಸ್ತ ಆಟೋ ಚಾಲಕ ಪುರುಷೋತ್ತಮ ಪೂಜಾರಿ, ಈ ಶಿಕ್ಷೆಯ ಪ್ರಮಾಣ ತೃಪ್ತಿದಾಯಕವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೀವಾವಾಧಿ ಶಿಕ್ಷೆ ಆಗಬೇಕಿತ್ತು ಅಪರಾಧಿಗೆ ಶಿಕ್ಷೆಯಾಗಿರುವುದು ಒಳ್ಳೆಯದೇ ಆದರೂ, ಇಂತಹ ಕೃತ್ಯಗಳು ಮರುಕಳಿಸದಂತೆ ನೋಡಿಕೊಳ್ಳಲು…

Read More
Sanjay Dutt apologises after Sarke Chunar Teri Sarke row

Sanjay Dutt: ಕೆಡಿ ಸಿನಿಮಾ ಹಾಡಿನ ವಿವಾದ, ಕ್ಷಮೆ ಕೇಳಿದ ಸಂಜತ್‌ ದತ್

ನವದೆಹಲಿ: ಕನ್ನಡದ ಪ್ಯಾನ್ ಇಂಡಿಯಾ ಚಿತ್ರ ‘ಕೆಡಿ: ದಿ ಡೆವಿಲ್’ನ ‘ಸರ್ಕೆ ಚುನರ್ ತೇರಿ ಸರ್ಕೆ’ ಹಾಡಿನಲ್ಲಿ ಮಹಿಳೆಯರನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಮತ್ತು ಅಶ್ಲೀಲ ಸಾಹಿತ್ಯವಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉಂಟಾಗಿದ್ದ ವಿವಾದಕ್ಕೆ ಸಂಬಂಧಿಸಿದಂತೆ, ನಟ ಸಂಜಯ್ ದತ್ (Sanjay Dutt) ಅವರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ಲಿಖಿತ ಕ್ಷಮಾಪಣೆ ಸಲ್ಲಿಸಿದ್ದಾರೆ. ಈ ಹಾಡು ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಹಿಳೆಯರ ಅಸಭ್ಯ ಚಿತ್ರಣವಿದೆ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ, ಆಯೋಗವು…

Read More
salim dola deported to india from turkey

Salim Dola: ಡ್ರಗ್ ಮಾಫಿಯಾ ಡಾನ್ ಸಲೀಂ ಡೋಲಾ ಭಾರತಕ್ಕೆ ಗಡಿಪಾರು: ಅಮಿತ್ ಶಾ ಮೆಚ್ಚುಗೆ

ನವದೆಹಲಿ: ಅಂಡರ್‌ವರ್ಲ್ಡ್ ಡಾನ್ ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಹಾಗೂ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಜಾಲದ ಪ್ರಮುಖ ಕಿಂಗ್‌ಪಿನ್ ಮೊಹಮ್ಮದ್ ಸಲೀಂ ಡೋಲಾನನ್ನು (Salim Dola) ಟರ್ಕಿಯಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ. ಮಂಗಳವಾರ ಮುಂಜಾನೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದು ಇಳಿದ 59 ವರ್ಷದ ಈತನನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಮಿತ್‌ ಶಾ ಪ್ರತಿಕ್ರಿಯೆ ಸಲೀಂ ಡೋಲಾ ದಸ್ತಗಿರಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್…

Read More
Crime Hyderabad clinic face case over stray dog blood trade

Crime: ಚಿಕಿತ್ಸೆಯ ಹೆಸರಲ್ಲಿ ನಾಯಿಗಳ ರಕ್ತದ ದಂಧೆ; ಆಸ್ಪತ್ರೆಯ ಅಮಾನವೀಯ ಕೃತ್ಯ ಬಯಲು

ಹೈದರಾಬಾದ್: ಚಿಕಿತ್ಸೆಯ ನೆಪದಲ್ಲಿ ಬೀದಿ ನಾಯಿಗಳನ್ನು ಹಿಡಿದು ತಂದು, ಅವುಗಳ ರಕ್ತವನ್ನು (Crime) ಬಲವಂತವಾಗಿ ತೆಗೆದು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಆಘಾತಕಾರಿ ದಂಧೆಯೊಂದು ಹೈದರಾಬಾದ್‌ನ ಶೇಕ್‌ಪೇಟ್‌ನ ಖಾಸಗಿ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಕೇಂದ್ರದ ಮಾಜಿ ಸಚಿವೆ ಮತ್ತು ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಮೇನಕಾ ಗಾಂಧಿ ಅವರು ನೀಡಿದ ದೂರಿನ ಮೇರೆಗೆ ಈ ಕರಾಳ ಕೃತ್ಯ ಬಯಲಾಗಿದೆ. ಏನಿದು ಅಕ್ರಮ ದಂಧೆ? ಆಸ್ಪತ್ರೆಯ ಆಡಳಿತ ಮಂಡಳಿಯು ಬೀದಿ ನಾಯಿಗಳನ್ನು ರಕ್ಷಣೆ ಮತ್ತು ಚಿಕಿತ್ಸೆಯ ನೆಪದಲ್ಲಿ…

Read More
Bollywood 3 idiot sequel is coming soon

3 Idiots: ಬರಲಿದೆಯಂತೆ ತ್ರಿ ಈಡಿಯಟ್ಸ್‌ ಸೀಕ್ವೆಲ್‌

ಮುಂಬೈ: ಭಾರತೀಯ ಚಿತ್ರರಂಗದ ಸಾರ್ವಕಾಲಿಕ ಮೆಚ್ಚಿನ ಸಿನಿಮಾಗಳಲ್ಲೊಂದಾದ ‘3 ಈಡಿಯಟ್ಸ್’ (3 Idiots) ಚಿತ್ರದ ಮುಂದುವರಿದ ಭಾಗ (ಸೀಕ್ವೆಲ್) ಬರಲಿದೆ ಎಂಬ ಸುದ್ದಿ ಇದೀಗ ಚಿತ್ರಪ್ರೇಮಿಗಳಲ್ಲಿ ಭಾರಿ ಉತ್ಸಾಹ ಮೂಡಿಸಿದೆ. 2009ರಲ್ಲಿ ತೆರೆಕಂಡು ಭಾರಿ ಯಶಸ್ಸು ಗಳಿಸಿದ್ದ ಈ ಚಿತ್ರದ ಮುಂದುವರಿದ ಭಾಗವನ್ನು ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಅವರೇ ನಿರ್ದೇಶಿಸಲಿದ್ದು, ಅಮೀರ್ ಖಾನ್ ಸೇರಿದಂತೆ ಮೂಲ ಚಿತ್ರದ ಬಹುತೇಕ ಕಲಾವಿದರು ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಕಥೆ ಸಿದ್ದವಾಗ್ತಿದೆ ಎಂದ ಅಮೀರ್ ಈ ಕುರಿತು…

Read More