TOP NEWS
Nagendra Blackmailed Congress High Command for Minister Post BJP State President BY Vijayendra

BY Vijayendra; ಸಚಿವ ಸ್ಥಾನಕ್ಕಾಗಿ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್ ತಂತ್ರ: ಬಿ. ನಾಗೇಂದ್ರ ವಿರುದ್ಧ ಬಿ.ವೈ. ವಿಜಯೇಂದ್ರ ಬಾಂಬ್!

ಬೆಂಗಳೂರು: ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಬಿ. ನಾಗೇಂದ್ರ ಅವರು ಕಾಂಗ್ರೆಸ್ ಹೈಕಮಾಂಡ್ ಮೇಲೆ ಬೆದರಿಕೆಯ ತಂತ್ರ ಅನುಸರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ನೇರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಹರ್ ಘರ್ ತಿರಂಗಾ’ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ಸಚಿವ ಸಂಪುಟ ಪುನರ್ರಚನೆಯ ವೈಖರಿಯನ್ನು ತೀವ್ರವಾಗಿ ತೊಳೆಯದರು. ಸಂಪುಟಕ್ಕೆ ಮರುಸೇರ್ಪಡೆ: ಗಂಭೀರ ಅಸಮಾಧಾನ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನೂರಾರು ಕೋಟಿ ರೂಪಾಯಿ…

Read More
Tejasvi Surya Completes Kanwar Yatra Brings Holy Ganga Jal to Bengaluru Temple

Tejasvi Surya: ಗಂಗೆಯಿಂದ ಗವಿ ಗಂಗಾಧರೇಶ್ವರನವರೆಗೆ: ಹರಿದ್ವಾರದ ಗಂಗಾಜಲ ತಂದು ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿದ ತೇಜಸ್ವಿ ಸೂರ್ಯ!

ಉತ್ತರಾಖಂಡ್: 2027ರ ಉತ್ತರಾಖಂಡ್ ವಿಧಾನಸಭೆ ಚುನಾವಣೆಗೆ ಭರವಸೆಯ ತಯಾರಿ ಆರಂಭಿಸಿರುವ ಬಿಜೆಪಿ, ರಾಜ್ಯದಲ್ಲಿ ಯುವಕರನ್ನು ತಲುಪಲು ಹೊಸ ತಂತ್ರ ರೂಪಿಸಿದೆ. ಇದರ ಭಾಗವಾಗಿ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya), ಹರಿದ್ವಾರದಿಂದ ಋಷಿಕೇಶದವರೆಗೆ 26 ಕಿಲೋಮೀಟರ್‌ಗಳ ಕಂವಾರ್‌ ಯಾತ್ರೆ ನಡೆಸಿದರು. ಸಂಸ್ಕೃತಿ, ಶ್ರದ್ಧೆ ಹಾಗೂ ಸೇವೆಯ ಮೂಲಕ ಯುವಜನತೆಯನ್ನು ತಲುಪುವ ಪಕ್ಷದ ಯೋಜನೆಯಲ್ಲಿ ಈ ಯಾತ್ರೆ ಪ್ರಮುಖ ಘಟ್ಟವಾಗಿದೆ.‌ ಗಂಗಾ ಸ್ನಾನ…

Read More
Lokayukta Probe Sought Over Alleged 100 Crore Land Grab Involving Minister HC Balakrishna Wife

HC Balakrishna: ಸರ್ಕಾರಿ ಭೂಮಿ ಕಬಳಿಕೆ: ಸಚಿವರ ಪತ್ನಿ, ಕಾಂಗ್ರೆಸ್ ನಾಯಕರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸುತ್ತಮುತ್ತಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಪ್ರಭಾವಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ಸೇರಿ ಲೂಟಿ ಮಾಡಿರುವ ಬೃಹತ್ ಭೂ ಹಗರಣವೊಂದು (HC Balakrishna) ಬೆಳಕಿಗೆ ಬಂದಿದೆ. 2006ರ ಎ.ಟಿ. ರಾಮಸ್ವಾಮಿ ವರದಿ ಪ್ರಕಾರ ಸರ್ಕಾರಿ ಜಮೀನಿನ ಪೋಡಿ ಹಾಗೂ ಖಾತೆ ಮಾಡುವುದು ಸಂಪೂರ್ಣ ನಿಷಿದ್ಧವಾಗಿದ್ದರೂ, ನಿಯಮಗಳನ್ನು ಗಾಳಿಗೆ ತೂರಿ ಸುಮಾರು 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಭೂಮಿಯನ್ನು ಅಕ್ರಮವಾಗಿ ಖಾಸಗಿಯವರ ಹೆಸರಿಗೆ ವರ್ಗಾಯಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕುರುಬರಹಳ್ಳಿಯಲ್ಲಿ…

Read More
My Body Has Aged Not My Mind HD Deve Gowda Hits Back at Congress Over Bidadi Township Protest

HD Deve Gowda: ದೇಹಕ್ಕೆ ವಯಸ್ಸಾಗಿದೆ, ಬುದ್ಧಿಗಲ್ಲ: ಬಿಡದಿ ಟೌನ್‌ಶಿಪ್‌ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ಗೆ ದೇವೇಗೌಡರ ಖಡಕ್ ಟಾಂಗ್!

ಬೆಂಗಳೂರು: ಕರ್ನಾಟಕ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು (HD Deve Gowda) ಭಾಗವಹಿಸಿ ಕಾಂಗ್ರೆಸ್ ಸರ್ಕಾರಕ್ಕೆ ನೇರ ಟಾಂಗ್ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿ ಜತೆ ಮಾತನಾಡಿದ ಅವರು, ಜೆಡಿಎಸ್‌ನ ಈ ಹೋರಾಟವನ್ನು ‘ಪ್ರಾಯಶ್ಚಿತ್ತ ಯಾತ್ರೆ’ ಎಂದು ಕರೆಯುತ್ತಿರುವ ಕಾಂಗ್ರೆಸ್ ನಾಯಕರಿಗೆ ಖಡಕ್ ತಿರುಗೇಟು ನೀಡಿದರು. ರಾಜ್ಯದ ಜನರೇ ಕಾದು ನೋಡಲಿದ್ದಾರೆ ಯಾರಿಗೆ ಪ್ರಾಯಶ್ಚಿತ್ತ ಆಗುತ್ತದೆ ಎಂಬುದನ್ನು ಮುಂದಿನ ದಿನಗಳಲ್ಲಿ ರಾಜ್ಯದ ಜನರೇ…

Read More
rocking star yash toxic trailer released

Toxic: ‘ಟಾಕ್ಸಿಕ್’ ಟ್ರೇಲರ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ದ್ವಿಪಾತ್ರದ ಧಮಾಕಾ: ಅಪ್ಪ-ಮಗನಾಗಿ ಅಬ್ಬರಿಸಿದ ಮಾನ್‌ಸ್ಟರ್, ಫ್ಯಾನ್ಸ್ ಫಿದಾ!

ಬೆಂಗಳೂರು: ‘ಕೆಜಿಎಫ್’ ಸರಣಿಯ ಮೂಲಕ ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ರಾಕಿಂಗ್ ಸ್ಟಾರ್ ಯಶ್, ಇದೀಗ ತಮ್ಮ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಹೊಸ ಅಲೆ ಎಬ್ಬಿಸಲು ಸಜ್ಜಾಗಿದ್ದಾರೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಈ ಚಿತ್ರದ ಭರ್ಜರಿ ಟ್ರೇಲರ್ ಇಂದು ಸಿಲಿಕಾನ್ ಸಿಟಿಯಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಅಧಿಕೃತವಾಗಿ ಅನಾವರಣಗೊಂಡಿದೆ. ದ್ವಿಪಾತ್ರದಲ್ಲಿ ರಾಕಿ ಭಾಯ್ ಧಮಾಕಾ: ತಾರಾಗಣದ ಜುಗಲ್ಬಂದಿ ಸದ್ಯ ಬಿಡುಗಡೆಯಾಗಿರುವ 4 ನಿಮಿಷ 38 ಸೆಕೆಂಡ್‌ಗಳ ಸುದೀರ್ಘ…

Read More
Spotted in Style Kiara Advani and Geetu Mohandas Land in Bengaluru Ahead of Toxic Trailer Release

Toxic: ‘ಟಾಕ್ಸಿಕ್’ ಟ್ರೈಲರ್ ಸಂಭ್ರಮ: ಬೆಂಗಳೂರಿಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ನಟಿ ಕಿಯಾರಾ ಅಡ್ವಾಣಿ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Actor Yash) ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಚಿತ್ರದ ‘ತಬಾಹಿ’ ಹಾಡು ಸೃಷ್ಟಿಸಿರುವ ವಿವಾದ ಹಾಗೂ ಪರ-ವಿರೋಧದ ಚರ್ಚೆಗಳ ನಡುವೆಯೇ, ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಶನಿವಾರ ಬೆಳಿಗ್ಗೆ ಸಿಲಿಕಾನ್ ಸಿಟಿಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಂದು ಸಂಜೆ ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಚಿತ್ರದ ಭವ್ಯ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರು ನಗರಕ್ಕೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬಂದ ಕಿಯಾರಾ ಸಂಪೂರ್ಣ ಡೆನಿಮ್ ಉಡುಪಿನಲ್ಲಿ ಮಿಂಚುತ್ತಿದ್ದು, ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಂಡು, ಮಾಧ್ಯಮದ ಕ್ಯಾಮೆರಾಗಳಿಗೆ ಪೋಸ್…

Read More
Crackdown on Illegal Immigrants 1000 Foreigners Traced in 3 Months and Handed Over to FRO Says Priyank Kharge

Priyank Kharge: ಅಕ್ರಮ ವಲಸಿಗರ ವಿರುದ್ಧ ಸರ್ಕಾರದ ಬಿಗಿ ಕ್ರಮ: ಕಳೆದ 3 ತಿಂಗಳಲ್ಲಿ 1,000 ವಿದೇಶಿಗರ ಪತ್ತೆ, ಎಫ್‌ಆರ್‌ಒಗೆ ಹಸ್ತಾಂತರ!

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆ ಹಾಗೂ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊಗಳ ಬಗ್ಗೆ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮಹತ್ವದ ಹೇಳಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ, ವೀಡಿಯೊಗಳನ್ನು ಪೋಸ್ಟ್ ಮಾಡುವುದು ಮತ್ತು ಸರ್ಕಾರದ ವಿರುದ್ಧ ಸುಮ್ಮನೆ ಟೀಕೆ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಅವರು ಖಡಕ್ ಆಗಿ ಸೂಚಿಸಿದ್ದಾರೆ. ಇಂತಹ ಕಾನೂನು ಕೈಗೆತ್ತಿಕೊಳ್ಳುವ “ವಿಜಿಲಾಂಟಿಸಂ” ಅಥವಾ “ನೈತಿಕ ಪೊಲೀಸ್‌ಗಿರಿ” (ಮಾರಲ್…

Read More