TOP NEWS
Supreme court to take ram mandir donation issue on June 29th

Supreme Court: ರಾಮ ಮಂದಿರ ನಿಧಿ ಅಕ್ರಮ ಆರೋಪ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವಿವಾದ; ಸೋಮವಾರ ತುರ್ತು ವಿಚಾರಣೆ ಸಾಧ್ಯತೆ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರಕ್ಕೆ ಸಾರ್ವಜನಿಕರಿಂದ ಸಂಗ್ರಹವಾಗಿರುವ ಕೋಟ್ಯಂತರ ರೂಪಾಯಿ ದೇಣಿಗೆಯ ದುರುಪಯೋಗ ಹಾಗೂ ಆರ್ಥಿಕ ಅವ್ಯವಹಾರದ ಆರೋಪ ಈಗ ದೇಶದ ಅತ್ಯುನ್ನತ ನ್ಯಾಯಾಲಯದ ಅಂಗಳ ತಲುಪಿದೆ. ಈ ಹಗರಣದ ಬಗ್ಗೆ ತಕ್ಷಣ ಎಫ್‌ಐಆರ್ ದಾಖಲಿಸಿ, ಸಿಬಿಐ ನೇತೃತ್ವದ ತಜ್ಞರ ತಂಡದಿಂದ ನಿಗದಿತ ಅವಧಿಯೊಳಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಜೂನ್ 29ರ ಸೋಮವಾರದಂದು ನ್ಯಾಯಾಲಯದ ಮುಂದೆ ಪ್ರಸ್ತಾಪಿಸುವಂತೆ ಸುಪ್ರೀಂ ಕೋರ್ಟ್ (Supreme Court) ಅರ್ಜಿದಾರರಿಗೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ…

Read More
NSUI different type protest Infront of KPCC office regarding Priyank kharge questions to RSS

RSS: ಆರ್‌ಎಸ್‌ಎಸ್ ನಾಯಕರ ಮುಖವಾಡ ಧರಿಸಿ ಚಡ್ಡಿ ಒದ್ದೆ ಮಾಡಿಕೊಂಡಂತೆ ನಾಟಕ: ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಎನ್‌ಎಸ್‌ಯುಐ ಅಣುಕು ಪ್ರತಿಭಟನೆಯ ಹೈಡ್ರಾಮಾ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಮತ್ತು ಆರ್ಥಿಕ ಮೂಲಗಳ ಪಾರದರ್ಶಕತೆಗೆ ಆಗ್ರಹಿಸಿ ಕರ್ನಾಟಕ ರಾಜಕಾರಣದಲ್ಲಿ ಸೃಷ್ಟಿಯಾಗಿರುವ ಕಿಚ್ಚು ಈಗ ಬೀದಿ ಹೋರಾಟದ ರೂಪ ಪಡೆದಿದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಸರಣಿ ಸವಾಲುಗಳಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ (NSUI) ಕಾರ್ಯಕರ್ತರು, ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಹಮ್ಮಿಕೊಂಡಿದ್ದ ವಿನೂತನ ಬೀದಿ ನಾಟಕ ಹಾಗೂ ಅಣುಕು ಪ್ರತಿಭಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರತಿಭಟನೆಯ ಭಾಗವಾಗಿ…

Read More
Actor jayam ravi accused of locking maid in house

Jayam Ravi: ವಜ್ರದ ಹಾರ ಕಳ್ಳತನ ಆರೋಪ; ತಮಿಳು ನಟ ಜಯಂ ರವಿ ಮನೆಯಲ್ಲಿ ಕೆಲಸದವರ ಅಕ್ರಮ ಬಂಧನ?

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ರವಿ ಮೋಹನ್ (Jayam Ravi) ಅವರ ಚೆನ್ನೈನ ಇಂಜಂಬಾಕ್ಕಂನಲ್ಲಿರುವ ಐಷಾರಾಮಿ ನಿವಾಸ ಈಗ ಹೊಸದೊಂದು ಗಂಭೀರ ಕಾನೂನು ವಿವಾದಕ್ಕೆ ಸಿಲುಕಿದೆ. ನಟನ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರದ ಹಾರ ಕಳ್ಳತನವಾಗಿರುವ ಬೆನ್ನಲ್ಲೇ, ಅಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ಕಾನೂನುಬಾಹಿರವಾಗಿ ಕೂಡಿಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಮಧ್ಯಪ್ರವೇಶಿಸುವಂತಾಗಿದೆ. ಇತ್ತೀಚೆಗಷ್ಟೇ ಕೌಟುಂಬಿಕ ಕಲಹದಿಂದಾಗಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಜಯಂ ರವಿ, ಈಗ ಮತ್ತೊಂದು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಏನಿದು ಘಟನೆ?…

Read More
Priyank kharge social media post about BJP and RSS

Priyank Kharge: ಆರ್‌ಎಸ್‌ಎಸ್ ಪ್ರಶ್ನಿಸಿದರೆ ಬಿಜೆಪಿ ಬುಸುಗುಡುತ್ತೆ: ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೊಸ ವಾಗ್ದಾಳಿ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಪ್ರಕ್ರಿಯೆ ಹಾಗೂ ಅದರ ಆದಾಯದ ಮೂಲಗಳ ಕುರಿತಾಗಿ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ನಾಯಕರ ನಡುವೆ ಆರಂಭವಾಗಿರುವ ರಾಜಕೀಯ ಜಟಾಪಟಿ ಮತ್ತಷ್ಟು ತಾರಕಕ್ಕೇರಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, (Priyank Kharge) ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಮತ್ತೊಮ್ಮೆ ತೀಕ್ಷ್ಣ ಪದಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ. “ಆರ್‌ಎಸ್‌ಎಸ್ ಸಂಸ್ಥೆ ಗಲಿಬಿಲಿಗೊಂಡಾಗಲೆಲ್ಲಾ…

Read More
Let the DK Chants Roar in 2028 Polls CM

Big News: ಸಾರ್ವಜನಿಕರ ದೂರುಗಳಿಗೆ ಹೈಟೆಕ್ ಸ್ಪರ್ಶ: ಸಚಿವಾಲಯ ಮಟ್ಟದಲ್ಲಿ ‘ಪ್ರಜಾಸೇವಾ ಇಲಾಖೆ’ ಆರಂಭಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ನಾಗರಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಮತ್ತು ಸರ್ಕಾರಿ ಕಚೇರಿಗಳಲ್ಲಿ ಕೆಲಸದ ವೇಗವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು (Big News) ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕರ ಕುಂದುಕೊರತೆಗಳನ್ನು ಒಂದೇ ಸೂರಿನಡಿ ತಂದು ಅತ್ಯಂತ ತ್ವರಿತವಾಗಿ ಬಗೆಹರಿಸಲು ಸಚಿವಾಲಯದ ಮಟ್ಟದಲ್ಲಿ ನೂತನವಾಗಿ “ಪ್ರಜಾಸೇವಾ ಇಲಾಖೆ”ಯನ್ನು ಸೃಜಿಸಲಾಗಿದೆ. ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಗಾಯತ್ರಿ ಜಿ.ಎನ್ ಅವರು ಜೂನ್ 24 ರಂದು ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಕಳೆದ ಜೂನ್ 20 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ…

Read More
RBI new rules regarding bank fraud and digital scam

RBI: ಬ್ಯಾಂಕ್ ಖಾತೆಯಿಂದ ಸದ್ದಿಲ್ಲದೆ ಹಣ ಮಾಯವಾದರೆ ಇನ್ಮುಂದೆ ಆರ್‌ಬಿಐ ನೀಡಲಿದೆ ಪರಿಹಾರ!

ಬೆಂಗಳೂರು: ನೀವು ಕಷ್ಟಪಟ್ಟು ದುಡಿದು ಬ್ಯಾಂಕಿನಲ್ಲಿಟ್ಟ ಹಣ ನಿಮ್ಮ ಅರಿವಿಲ್ಲದೆಯೇ ರಾತ್ರೋರಾತ್ರಿ ಮಾಯವಾದರೆ ಎಂಥವರಿಗಾದರೂ ದಿಗಿಲಾಗುವುದು ಸಹಜ. ಇಂತಹ ಸೈಬರ್ ವಂಚನೆ ನಡೆದಾಗ ಹಳೇ ದಿನಗಳಲ್ಲಿ ಗ್ರಾಹಕರು ಬ್ಯಾಂಕುಗಳ ಕಚೇರಿಗಳಿಗೆ ಅಲೆದಾಡಿ ಬೇಸತ್ತು ಹೋಗುತ್ತಿದ್ದರು. ಬ್ಯಾಂಕುಗಳು ತಪ್ಪು ನಿಮ್ಮದೇ ಎಂದು ಜಾರಿಕೊಳ್ಳುತ್ತಿದ್ದವು. ಆದರೆ ಇನ್ಮುಂದೆ ಡಿಜಿಟಲ್ ಪೇಮೆಂಟ್ ವಲಯದಲ್ಲಿ ಗ್ರಾಹಕರಿಗೆ ಸಿಂಹಸ್ವಪ್ನವಾಗಿದ್ದ ಆನ್‌ಲೈನ್ ಲೂಟಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಐತಿಹಾಸಿಕ ಬ್ರೇಕ್ ಹಾಕಿದೆ. ಜೂನ್ 24 ರಂದು ಹೊರಡಿಸಲಾದ ಹೊಸ ‘ಬಾಧ್ಯತಾ ತಿದ್ದುಪಡಿ ನಿಯಮಾವಳಿ’ಗಳ…

Read More
Tragedy tea warehouse collapses in Kolkata

Tragedy: ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು ಭೀಕರ ದುರಂತ; ಮೂವರು ಕಾರ್ಮಿಕರು ಸಾವು

ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ರಾಜಧಾನಿ ಕೋಲ್ಕತಾದ ತಾರಾತಲಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭೀಕರ ದುರಂತವೊಂದು (Tragedy) ಸಂಭವಿಸಿದೆ. ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಬೃಹತ್ ಗೋದಾಮಿನ (Warehouse) ಮೇಲ್ಛಾವಣಿ ದಿಢೀರನೆ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಮೇಲ್ಛಾವಣಿ ಕುಸಿದ ತೀವ್ರತೆಗೆ ಕಟ್ಟಡದ ಒಳಗಡೆ ಕೆಲಸ ಮಾಡುತ್ತಿದ್ದ ಕನಿಷ್ಠ 40ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಗೋದಾಮಿನ ಒಳಗಿದ್ದ ಕೂಲಿ ಕಾರ್ಮಿಕರು ಗೋದಾಮಿನಲ್ಲಿ…

Read More