TOP NEWS
Keir Starmer resigned who is next PM of UK

Keir Starmer: ಒಂದೇ ದಶಕದಲ್ಲಿ ಬ್ರಿಟನ್‌ಗೆ 7ನೇ ಪ್ರಧಾನಿ; ಆಡಳಿತಾವಧಿ ಮುಗಿಯುವ ಮುನ್ನವೇ ಕೀರ್ ಸ್ಟಾರ್ಮರ್ ರಾಜೀನಾಮೆ ಘೋಷಣೆ!

ಲಂಡನ್:‌ ಬ್ರಿಟನ್ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಕೇವಲ ಹತ್ತು ವರ್ಷಗಳ ಅವಧಿಯಲ್ಲಿ ದೇಶವು ತನ್ನ ಏಳನೇ ಪ್ರಧಾನಿಯನ್ನು ಕಾಣಲು ಸಜ್ಜಾಗಿದೆ. ಲೇಬರ್ ಪಕ್ಷದ ಸರ್ಕಾರವನ್ನು ಮುನ್ನಡೆಸುತ್ತಿದ್ದ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer ) ಅವರು ಸುಮಾರು 23 ತಿಂಗಳುಗಳ ಅಧಿಕಾರಾವಧಿಯ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಲಂಡನ್‌ನ 10 ಡೌನಿಂಗ್ ಸ್ಟ್ರೀಟ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದ ಮುಂಭಾಗ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರಿಟನ್ ಲೇಬರ್ ಪಕ್ಷದ ನಾಯಕತ್ವದಿಂದ ಕೆಳಗಿಳಿಯುತ್ತಿರುವುದಾಗಿ ತಿಳಿಸಿದ್ದಾರೆ….

Read More
MES high drama in Belagavi district office

Belagavi: ಸರ್ಕಾರಿ ಆದೇಶದ ಪ್ರತಿ ಹರಿದು ಎಂಇಎಸ್ ಪುಂಡಾಟ; ಕರವೇ ಆಕ್ರೋಶ, ಸಂಘಟನೆ ನಿಷೇಧಕ್ಕೆ ಆಗ್ರಹ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ (Belagavi) ಮಹಾರಾಷ್ಟ್ರ ಏಕೀಕರಣ ಸಮಿತಿಯ (MES) ಕಾರ್ಯಕರ್ತರು ಮತ್ತೊಮ್ಮೆ ತಮ್ಮ ಗೂಂಡಾಗಿರಿ ಪ್ರವೃತ್ತಿಯನ್ನು ಮುಂದುವರಿಸಿದ್ದಾರೆ. ರಾಜ್ಯಾದ್ಯಂತ ಕನ್ನಡವನ್ನು ಕಡ್ಡಾಯಗೊಳಿಸಿರುವ ಸರ್ಕಾರದ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಎಂಇಎಸ್ ಕಾರ್ಯಕರ್ತರು, ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲೇ ಭಾರೀ ಗದ್ದಲ ಸೃಷ್ಟಿಸಿದ್ದಾರೆ. ಸ್ಥಳದಲ್ಲೇ ರಕ್ಷಣಾ ಸಿಬ್ಬಂದಿ ಇದ್ದರೂ ಲೆಕ್ಕಿಸದೆ, ಸರ್ಕಾರದ ಅಧಿಕೃತ ಸುತ್ತೋಲೆಯನ್ನು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಅದರೊಂದಿಗೆ, ಗಡಿ ಪ್ರದೇಶಗಳಲ್ಲಿ ಮರಾಠಿ ಭಾಷೆಯಲ್ಲೇ ಸರ್ಕಾರಿ ದಾಖಲೆಗಳು ಹಾಗೂ ನಾಮಫಲಕಗಳನ್ನು ಅಳವಡಿಸಬೇಕು ಎಂದು ಪಟ್ಟು…

Read More
Two parallel voter list revision surveys in Bengaluru spark confusion residents move High Court against State Election Commission over SIR

High Court: ನಂದಿನಿ ಹಾಲಿನ ವಿರುದ್ಧ ರೀಲ್ಸ್ ಮಾಡಿದ ವೈದ್ಯೆಗೆ ಹೈಕೋರ್ಟ್ ತರಾಟೆ; ತನಿಖೆಗೆ ಮುಂದುವರಿಸಲು ಆದೇಶ

ಬೆಂಗಳೂರು: ಕೆಎಂಎಫ್ (KMF) ಸಂಸ್ಥೆಯ ಜನಪ್ರಿಯ ಉತ್ಪನ್ನವಾದ ‘ನಂದಿನಿ ಸುವಾಸಿತ ಹಾಲು’ ಆರೋಗ್ಯಕ್ಕೆ ಒಳಿತಲ್ಲ ಎಂಬರ್ಥದಲ್ಲಿ ಇನ್‌ಸ್ಟಾಗ್ರಾಂನಲ್ಲಿ ನಕಾರಾತ್ಮಕ ವಿಡಿಯೋ ಮಾಡಿ ಹರಿಬಿಟ್ಟಿದ್ದ ಬೆಂಗಳೂರಿನ ವೈದ್ಯೆ ಡಾ. ಶರಣ್ಯ ಪದ್ಮಾ ಅವರಿಗೆ ಹೈಕೋರ್ಟ್ (High Court) ತೀವ್ರ ತರಾಟೆ ತೆಗೆದುಕೊಂಡಿದೆ. ಮಲ್ಲೇಶ್ವರಂ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದುಪಡಿಸಬೇಕು ಇಲ್ಲವೇ ತನಿಖೆಗೆ ತಡೆ ನೀಡಬೇಕು ಎಂಬ ವೈದ್ಯೆಯ ಕೋರಿಕೆಯನ್ನು ಮಾನ್ಯ ಮಾಡದ ನ್ಯಾಯಾಲಯ, ಪೊಲೀಸರು ತನಿಖೆಯನ್ನು ಮುಂದುವರಿಸಬಹುದು ಎಂದು ಸ್ಪಷ್ಟಪಡಿಸಿದೆ. ಏನಿದು ಪ್ರಕರಣ? ಕೆಲ…

Read More
Road mishap 4 beo injured one driver lost life in express way

Road Mishap: ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಚಾಲಕ ದುರ್ಮರಣ, ನಾಲ್ವರು ಶಿಕ್ಷಣಾಧಿಕಾರಿಗಳ ಸ್ಥಿತಿ ಗಂಭೀರ

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಇಲಾಖೆಯ ಉನ್ನತ ಮಟ್ಟದ ಸಭೆಗೆ ಹಾಜರಾಗಲು ಮೈಸೂರಿನಿಂದ ಬೆಂಗಳೂರಿನತ್ತ ಧಾವಿಸುತ್ತಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳಿದ್ದ ವಾಹನವು ಚನ್ನಪಟ್ಟಣದ ಮುದುಗೆರೆ ಸಮೀಪ ಭೀಕರ ಅಪಘಾತಕ್ಕೆ (Road Mishap) ಈಡಾಗಿದೆ. ಚಲಿಸುತ್ತಿದ್ದ ಕಾರಿನ ಟೈರ್ ಹಠಾತ್ತನೆ ಸಿಡಿದಿದ್ದರಿಂದ ಈ ಅಪಘಾತ ಸಂಭವಿಸಿದ್ದು, ವಾಹನ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಆನಂದ್ ಎಂಬುವವರೇ ಮೃತಪಟ್ಟ ದುರ್ದೈವಿ ಚಾಲಕ. ಕಾರಿನಲ್ಲಿದ್ದ ಮೈಸೂರು ಭಾಗದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (BEO) ಪ್ರಕಾಶ್, ರಾಜು, ಕೃಷ್ಣ ಹಾಗೂ…

Read More
acyress shreeleela humiliated by amruta Fadnavis in yoga function Bollywood

Bollywood: ನಟಿ ಶ್ರೀಲೀಲಾಗೆ ಅವಮಾನ ಮಾಡಿದ್ರಾ ಅಮೃತಾ ಫಡ್ನವಿಸ್? ವೈರಲ್‌ ಆಯ್ತು ವಿಡಿಯೋ

ಮುಂಬೈ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಮುಂಬೈನಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದಕ್ಷಿಣ ಭಾರತದ ಸ್ಟಾರ್ ನಟಿ ಶ್ರೀಲೀಲಾ (Bollywood) ಅವರ ಎರಡು ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಈ ವಿಶೇಷ ಕಾರ್ಯಕ್ರಮದಲ್ಲಿ ಶ್ರೀಲೀಲಾ ಅವರ ಜೊತೆಗೆ ಬಾಲಿವುಡ್ ನಟ ಶಾಹಿದ್ ಕಪೂರ್ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೆಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಕೂಡ ಭಾಗವಹಿಸಿದ್ದರು. ಯೋಗಾಸನಗಳನ್ನು ಮಾಡುವಾಗ ಶ್ರೀಲೀಲಾ ಅವರ ಹಾವಭಾವಗಳ ಒಂದು ವಿಡಿಯೋ ಟ್ರೋಲ್ ಆಗುತ್ತಿದ್ದರೆ,…

Read More
R ashok slams government for created problem for nEET students

R Ashok: ಸಮಾವೇಶದ ಟ್ರಾಫಿಕ್ ಕಿರಿಕಿರಿಗೆ ನೀಟ್ ಅಭ್ಯರ್ಥಿಗಳು ಕಣ್ಣೀರು; ಸರ್ಕಾರದ ವಿರುದ್ಧ ಆರ್. ಅಶೋಕ್ ತೀವ್ರ ಆಕ್ರೋಶ

ಬೆಂಗಳೂರು: ರಾಜಧಾನಿಯಲ್ಲಿ ಭಾನುವಾರ ನಡೆದ ನೀಟ್ (NEET) ಮರುಪರೀಕ್ಷೆಯ ವೇಳೆ ಸೃಷ್ಟಿಯಾದ ಭಾರಿ ಸಂಚಾರ ದಟ್ಟಣೆಯಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗದೆ ವಂಚಿತರಾದ ಘಟನೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅತ್ಯಂತ ಪ್ರಮುಖವಾದ ಪರೀಕ್ಷೆ ಇರುವ ದಿನವೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ರಾಜಕೀಯ ಸಮಾವೇಶ ಹಮ್ಮಿಕೊಂಡಿದ್ದರಿಂದಲೇ ಇಡೀ ನಗರದ ರಸ್ತೆಗಳು ಬ್ಲಾಕ್ ಆಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡಲಾಗಿದೆ…

Read More
MLC election cross voting BY Vijayendra position at risk

BJP: ವಿಧಾನಪರಿಷತ್ ಚುನಾವಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಆಂತರಿಕ ಸ್ಫೋಟ; ಹೈಕಮಾಂಡ್ ಕೋಪಕ್ಕೆ ಗುರಿಯಾದರೇ ವಿಜಯೇಂದ್ರ?

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಸಭೆಯಿಂದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿಯಲ್ಲಿ ತೀವ್ರ ರಾಜಕೀಯ ವಿಪ್ಲವ ಆರಂಭವಾಗಿದೆ. ಮೈತ್ರಿಕೂಟದ ಶಾಸಕರು ನಡೆಸಿದ್ದಾರೆನ್ನಲಾದ ಅಡ್ಡ ಮತದಾನವು (Cross Voting) ಕಮಲ (BJP) ಪಾಳಯಕ್ಕೆ ಭಾರಿ ಮುಜುಗರ ತಂದಿಟ್ಟಿದೆ. ಇದರ ನೇರ ಪರಿಣಾಮ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹುದ್ದೆಯ ಮೇಲಾಗುವ ಮುನ್ಸೂಚನೆ ಸಿಕ್ಕಿದ್ದು, ಅವರ ನಾಯಕತ್ವದ ಭವಿಷ್ಯ ಈಗ ದೆಹಲಿ ವರಿಷ್ಠರ ಕೈಯಲ್ಲಿದೆ. ರಾಜ್ಯ ಘಟಕದ ಈ ಗೊಂದಲ ಹಾಗೂ ಶಿಸ್ತು ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿರುವ…

Read More