TOP NEWS
Renukaswamy Case Court Orders Jail Authorities to Shift Pavitra Gowdas Barrack if Needed

Pavitra Gowda: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಕೊಂಚ ನಿರಾಳತೆ: ಬ್ಯಾರಕ್ ಬದಲಾವಣೆಗೆ ಹಸಿರು ನಿಶಾನೆ ತೋರಿದ ಕೋರ್ಟ್!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A1) ಪವಿತ್ರಾ ಗೌಡ (Pavitra Gowda) ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿ ತಮಗೆ ಎದುರಾಗುತ್ತಿದ್ದ ಸಾಲು ಸಾಲು ಆರೋಗ್ಯ ಸಮಸ್ಯೆಗಳು ಹಾಗೂ ಕಿರಿಕಿರಿಯಿಂದ ಬೇಸತ್ತು, ಬ್ಯಾರಕ್ ಬದಲಾವಣೆ ಮಾಡುವಂತೆ ಅವರು ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ 59ನೇ ಸೆಷನ್ಸ್ ನ್ಯಾಯಾಲಯವು ಪವಿತ್ರಾ ಗೌಡಗೆ ಕೊಂಚ ಸಮಾಧಾನ ತರುವಂತಹ ಮಹತ್ವದ ಸೂಚನೆಯನ್ನು ನೀಡಿದೆ. ಬೇರೆ ಬ್ಯಾರಕ್‌ಗೂ ಸ್ಥಳಾಂತರಿಸಲು…

Read More
LPG Refill Booking Revised Centre Standardizes Refill Interval to 25 Days for Rural and Urban Areas

LPG: ಗ್ರಾಮೀಣ ಎಲ್‌ಪಿಜಿ ಬಳಕೆದಾರರಿಗೆ ಭಾರಿ ರಿಲೀಫ್: ಸಿಲಿಂಡರ್ ಮರುಬುಕಿಂಗ್ ಅವಧಿ 25 ದಿನಕ್ಕೆ ಕಡಿತಗೊಳಿಸಿದ ಕೇಂದ್ರ

ನವದೆಹಲಿ: ಗ್ರಾಮೀಣ ಭಾಗದ ಅಡುಗೆ ಅನಿಲ (LPG) ಗ್ರಾಹಕರಿಗೆ ಕೇಂದ್ರ ಸರ್ಕಾರ ಭಾರಿ ಸಮಾಧಾನಕರ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಗೃಹಬಳಕೆ ಸಿಲಿಂಡರ್ ಮರುಬುಕಿಂಗ್ ಮಾಡಲು ನಿಗದಿಯಾಗಿದ್ದ 45 ದಿನಗಳ ಕಾಯುವಿಕೆ ಅವಧಿಯನ್ನು ಇದೀಗ 25 ದಿನಗಳಿಗೆ ಕಡಿತಗೊಳಿಸಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಆದೇಶ ಹೊರಡಿಸಿದೆ. ಈ ನೂತನ ನಿಯಮವನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ತೈಲ ಮಾರುಕಟ್ಟೆ ಕಂಪನಿಗಳಿಗೆ (OMC) ಸೂಚನೆ ನೀಡಲಾಗಿದ್ದು, ಇನ್ಮುಂದೆ ನಗರ ಹಾಗೂ ಗ್ರಾಮೀಣ ಭಾಗಗಳೆರಡರಲ್ಲೂ ಒಂದೇ ಮಾದರಿಯ…

Read More
Ameesha Patel Reacts to Dating Rumors with Hardik Pandya Truly Romantic Way My Hand Was on Him

Ameesha Patel: ಹಾರ್ದಿಕ್ ಪಾಂಡ್ಯ ಜೊತೆ ಡೇಟಿಂಗ್ ರೂಮರ್ಸ್: ವದಂತಿ ಹಬ್ಬಿಸಿದ ನೆಟ್ಟಿಗನಿಗೆ ನಟಿ ಅಮೀಷಾ ಪಟೇಲ್ ಖಡಕ್ ಕ್ಲಾಸ್!

ಮುಂಬೈ: ಬಾಲಿವುಡ್ ಚಿತ್ರರಂಗದ ಖ್ಯಾತ ನಟಿ ಅಮೀಷಾ ಪಟೇಲ್ (Ameesha Patel) ಹಾಗೂ ಭಾರತೀಯ ಕ್ರಿಕೆಟ್ ತಂಡದ ತಾರೆ ಹಾರ್ದಿಕ್ ಪಾಂಡ್ಯ ನಡುವೆ ಪ್ರೇಮಾಂಕುರವಾಗಿದೆ ಎಂಬ ಗಾಸಿಪ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿತ್ತು. ಈ ಇಬ್ಬರೂ ಇತ್ತೀಚೆಗೆ ಒಟ್ಟಿಗೆ ಕಾಣಿಸಿಕೊಂಡ ವಿಡಿಯೋವೊಂದನ್ನು ಇಟ್ಟುಕೊಂಡು ಹಲವರು ಹೊಸ ಕಥೆಗಳನ್ನು ಹೆಣೆಯಲು ಶುರು ಮಾಡಿದ್ದರು. ಆದರೆ ತಮ್ಮ ಮತ್ತು ಹಾರ್ದಿಕ್ ನಡುವಿನ ಸಾಮಾನ್ಯ ಬಾಂಧವ್ಯಕ್ಕೆ ಶೃಂಗಾರ ಹಾಗೂ ಪ್ರೇಮದ ಬಣ್ಣ ಬಳೆಯಲು ಯತ್ನಿಸಿದ ಜಾಲತಾಣ ಬಳಕೆದಾರನೊಬ್ಬನಿಗೆ ನಟಿ ಅಮೀಷಾ…

Read More
How Low Can You Stoop High Court Slams KPSC President Denies Bail in Vet Doctor Recruitment Fraud

KPSC: ನೀವು ಯಾವ ಮಟ್ಟಕ್ಕಾದರೂ ಇಳಿಯಬಲ್ಲಿರಿ: ಕೆಪಿಎಸ್‌ಸಿ ಅಧ್ಯಕ್ಷರ ವಿರುದ್ಧ ಹೈಕೋರ್ಟ್ ಗರಂ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆದಿದೆ ಎನ್ನಲಾದ ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ, ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್‌ಗೆ ಉನ್ನತ ನ್ಯಾಯಾಲಯದಿಂದ ಭಾರೀ ಹಿನ್ನಡೆಯಾಗಿದೆ. ತಮ್ಮ ಬಂಧನ ಭೀತಿಯಿಂದ ಪಾರಾಗಲು ಸಾಹುಕಾರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಸಂಪೂರ್ಣವಾಗಿ ವಜಾಗೊಳಿಸಿ ಆದೇಶಿಸಿದೆ. ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ಹೈಕೋರ್ಟಿನ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರನ್ನೊಳಗೊಂಡ ಏಕಸದಸ್ಯ ಪೀಠವು ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿ ಮಹತ್ವದ ತೀರ್ಪು ಪ್ರಕಟಿಸಿದೆ….

Read More
Bengaluru Namma Metro Reality Check Despite Record Daily Ridership Passenger Count Plummets at 20 Stations

Namma Metro: ನಮ್ಮ ಮೆಟ್ರೋ ಶಾಕಿಂಗ್ ರಿಪೋರ್ಟ್: ದಿನಕ್ಕೆ 12 ಲಕ್ಷ ಜನ ಓಡಾಡಿದ್ರೂ ಈ ಸ್ಟೇಷನ್‌ಗಳಲ್ಲಿ ಜನವೇ ಇಲ್ವಂತೆ!

ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ ರಾಜಧಾನಿ ಬೆಂಗಳೂರಿನ ಸಾರಿಗೆ ವ್ಯವಸ್ಥೆಗೆ ’ನಮ್ಮ ಮೆಟ್ರೋ’ (Namma Metro) ಬಹುದೊಡ್ಡ ವರವಾಗಿದೆ. ಸಂಚಾರ ದಟ್ಟಣೆ ಹಾಗೂ ರಸ್ತೆ ಕಿರಿಕಿರಿಯಿಂದ ತಪ್ಪಿಸಿಕೊಂಡು ವೇಗವಾಗಿ ತಲುಪಲು ಮೆಟ್ರೋ ರೈಲುಗಳು ಬೆಂಗಳೂರಿಗರ ಪಾಲಿಗೆ ನಿತ್ಯ ಜೀವನಾಡಿಯಾಗಿ ಮಾರ್ಪಟ್ಟಿವೆ. ಪ್ರಸ್ತುತ ಹಸಿರು, ನೇರಳೆ ಮತ್ತು ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ದಿನಂಪ್ರತಿ ಸುಮಾರು 11 ರಿಂದ 12 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಈ ಸೇವೆಯ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ, ಇಷ್ಟೊಂದು ದೊಡ್ಡ ಮಟ್ಟದ…

Read More
More Trouble for B Nagendra ED Grills Former Karnataka Minister Post Chargesheet Filing

B Nagendra: ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೆ ಇಡಿ ಶಾಕ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಬಿ. ನಾಗೇಂದ್ರ (B Nagendra) ಅವರಿಗೆ ಜಾರಿ ನಿರ್ದೇಶನಾಲಯ (ED) ಮತ್ತೆ ತನಿಖೆಯ ಬಿಸಿ ಮುಟ್ಟಿಸಿದೆ. ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪ್ರಾಸಿಕ್ಯೂಷನ್ ಭೀತಿಯಲ್ಲಿರುವ ಮಾಜಿ ಸಚಿವರಿಗೆ, ಇಡಿ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಇಡಿ ಕಚೇರಿಗೆ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ (ದೋಷಾರೋಪಣಾಪಟ್ಟಿ) ಸಲ್ಲಿಕೆಯಾದ ಬಳಿಕ, ಮತ್ತಷ್ಟು…

Read More
33 Year Old Woman Stomach Yields Pens Wooden Spoons and Candle

Viral News: ಆಂಧ್ರದಲ್ಲಿ ಅದ್ಭುತ ಶಸ್ತ್ರಚಿಕಿತ್ಸೆ: ಮಹಿಳೆಯ ಹೊಟ್ಟೆಯಿಂದ 14 ಪೆನ್, 5 ಚಮಚ, ಮೇಣದಬತ್ತಿ ಹೊರತೆಗೆದ ವೈದ್ಯರು

ಆಂಧ್ರಪ್ರದೇಶ: ಪಲ್ನಾಡು ಜಿಲ್ಲೆಯ ಕೇಂದ್ರವಾದ ನರಸರಾವ್‌ಪೇಟೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಅತ್ಯಂತ ವಿರಳ ಹಾಗೂ ಆಘಾತಕಾರಿ ವೈದ್ಯಕೀಯ ಘಟನೆಯೊಂದು (Viral News) ಬೆಳಕಿಗೆ ಬಂದಿದೆ. 33 ವರ್ಷದ ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಹಲವಾರು ವಿಚಿತ್ರ ವಸ್ತುಗಳನ್ನು ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದು ಜೀವ ರಕ್ಷಿಸಿದ್ದಾರೆ. ಶಸ್ತ್ರಚಿಕಿತ್ಸೆಯ ವೇಳೆ ಮಹಿಳೆಯ ಹೊಟ್ಟೆಯಿಂದ ಬರೋಬ್ಬರಿ 14 ಪೆನ್ನುಗಳು, 5 ಮರದ ಚಮಚಗಳು ಹಾಗೂ ಒಂದು ಮೇಣದಬತ್ತಿ ಪತ್ತೆಯಾಗಿದ್ದು, ಇದನ್ನು ಕಂಡ ವೈದ್ಯರೇ ಕೆಲಕಾಲ ದಿಗ್ಭ್ರಮೆಗೊಂಡಿದ್ದಾರೆ. ಏನಿದು ವಿಚಿತ್ರ ಘಟನೆ? ನರಸರಾವ್‌ಪೇಟೆಯ ಮಾತೃಶ್ರೀ…

Read More