Mallikarjun Kharge: ಮೋದಿ ಕೇವಲ ಮಾತಿನ ಮಲ್ಲ, ಎಲ್ಲ ರಂಗಗಳಲ್ಲೂ ಕೇಂದ್ರ ಸರ್ಕಾರ ದಿವಾಳಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಕಲಬುರಗಿ: ಕೇಂದ್ರದ ಬಿಜೆಪಿ ಸರ್ಕಾರವು ದೇಶದ ಆರ್ಥಿಕ ಹಾಗೂ ಸಾಮಾಜಿಕ ರಂಗಗಳನ್ನು ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತೀವ್ರವಾಗಿ ಆಕ್ಷೇಪಿಸಿದ್ದಾರೆ. ತಮ್ಮ ತವರು ಜಿಲ್ಲೆಯಾದ ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಡವರ ಕಷ್ಟಗಳ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲ. ಅವರು ಕೇವಲ ಆಕರ್ಷಕ ಭಾಷಣ ಮಾಡುವ ‘ಮಾತಿನ ಮಲ್ಲ’ ಎಂದು ಲೇವಡಿ ಮಾಡಿದರು. ದೇಶದ ಸದ್ಯದ ದುಸ್ಥಿತಿ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ…
