TOP NEWS
tollywood junior NTR took class to bodyguard

Tollywood: ಅಭಿಮಾನಿಗಳಿಗೆ ತಳ್ಳಿದ ಬಾಡಿಗಾರ್ಡ್‌ಗೆ ಗರಂ ಆದ ಜೂನಿಯರ್ ಎನ್‌ಟಿಆರ್: ವಿಡಿಯೋ ವೈರಲ್

ಹೈದರಾಬಾದ್: ಟಾಲಿವುಡ್ (Tollywood) ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ತಮ್ಮ ಹುಟ್ಟುಹಬ್ಬದ ಮಧ್ಯರಾತ್ರಿಯ ಸಂಭ್ರಮಾಚರಣೆಯ ವೇಳೆ ಅಭಿಮಾನಿಗಳ ಪರವಾಗಿ ನಿಂತು ತಮ್ಮದೇ ಭದ್ರತಾ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿರುವ ಅಪರೂಪದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮೇ 20 ರಂದು ತಮ್ಮ 43ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಟನನ್ನು ನೋಡಲು ಹೈದರಾಬಾದ್‌ನಲ್ಲಿರುವ ಅವರ ನಿವಾಸದ ಮುಂದೆ ನಡುರಾತ್ರಿಯೇ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಣೆ ಮಧ್ಯರಾತ್ರಿಯ ಸಂಭ್ರಮದಲ್ಲಿ ಕಪ್ಪು ಟಿ-ಶರ್ಟ್ ಮತ್ತು ನೀಲಿ…

Read More
Supreme court gave final time for GBA election

GBA: ಬೆಂಗಳೂರಿನ ಸ್ಥಳೀಯ ಚುನಾವಣೆಗಳಿಗೆ ಸುಪ್ರೀಂ ಕೋರ್ಟ್ ಗಡುವು: ಆಗಸ್ಟ್ 31ರ ಒಳಗೆ ಪ್ರಕ್ರಿಯೆ ಮುಗಿಸಲು ರಾಜ್ಯ ಸರ್ಕಾರಕ್ಕೆ ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಗೆ ಒಳಪಡುವ ಐದೂ ಮಹಾನಗರ ಪಾಲಿಕೆಗಳ ಚುನಾವಣೆಗೆ ಸುಪ್ರೀಂ ಕೋರ್ಟ್ ಮಹತ್ವದ ದಿನಾಂಕವನ್ನು ನಿಗದಿಪಡಿಸಿದೆ. ಬರುವ ಆಗಸ್ಟ್ 31 ರ ಒಳಗಾಗಿ ಎಲ್ಲಾ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಉನ್ನತ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಅಂತಿಮ ಗಡುವು ನೀಡಿದೆ. ಚುನಾವಣಾ ಸಿದ್ಧತೆಗಳಿಗಾಗಿ ತಮಗೆ ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಕರ್ನಾಟಕ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಜಂಟಿಯಾಗಿ…

Read More
crime Wilson garden naga gets bail

Crime: ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ವೆಲ್ಕಮ್ ಮಾಡಲು ಹೋದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಜೈಲಿನಿಂದ ಬಿಡುಗಡೆಯಾಗುತ್ತಿದ್ದ ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ಅದ್ಧೂರಿ ಸ್ವಾಗತ ಕೋರಿ ಸನ್ಮಾನಿಸಲು (Crime) ಹೊಂಚು ಹಾಕಿದ್ದ ಆತನ ಬೆಂಬಲಿಗರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ವಾಗತಕ್ಕೆ ನಡೆದಿತ್ತು ಭರ್ಜರಿ ಸಿದ್ಧತೆ ಸಿದ್ದಾಪುರ ಮೂಲದ ಮಹೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ವಿಲ್ಸನ್ ಗಾರ್ಡನ್ ನಾಗನಿಗೆ ನಿನ್ನೆಯಷ್ಟೇ ಬೆಂಗಳೂರಿನ 48ನೇ ಸೆಷನ್ಸ್ ನ್ಯಾಯಾಲಯವು ಜಾಮೀನು ನೀಡಿ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಆತ ಜೈಲಿನಿಂದ ಹೊರಬರುವ ವೇಳೆ ಹಾರ-ತುರಾಯಿಗಳೊಂದಿಗೆ ಸ್ವಾಗತಿಸಲು ಆತನ ಹುಡುಗರ…

Read More
SSLC exam 2 key answers released by board here is the details

SSLC: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಕೀ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ನಾಳೆ ಸಂಜೆವರೆಗಷ್ಟೇ ಅವಕಾಶ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-2ರ ವಿಷಯವಾರು ಕರಡು ಕೀ ಉತ್ತರಗಳನ್ನು (Key Answers) ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು ಅಥವಾ ಶಿಕ್ಷಕರು ಯಾರಾದರೂ ಆಕ್ಷೇಪಣೆಗಳನ್ನು ಸಲ್ಲಿಸುವುದಿದ್ದರೆ, ಅದಕ್ಕೆ ನಾಳೆ ಕಡೆಯ ದಿನವಾಗಿದೆ ಎಂದು ಮಂಡಳಿ ತಿಳಿಸಿದೆ. ಆಕ್ಷೇಪಣೆ ಸಲ್ಲಿಸಲು ಅವಕಾಶ ಆಕ್ಷೇಪಣೆ ಸಲ್ಲಿಸಲು ಇಚ್ಛಿಸುವವರು ನಾಳೆ ಸಂಜೆ 5.30 ರ ಒಳಗಾಗಿ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೂಲಕವೇ ತಮ್ಮ ಆಕ್ಷೇಪಣೆಗಳನ್ನು…

Read More
protest march against nuclear power plant in sagara besuru village

Sagara: ಬೇಸೂರಿನಲ್ಲಿ ಅಣುಸ್ಥಾವರ ವಿರೋಧಿಸಿ ಪಾದಯಾತ್ರೆ, NOC ಕೊಡದಂತೆ ಸರ್ಕಾರಕ್ಕೆ ಆಗ್ರಹ

ಶಿವಮೊಗ್ಗ: ಸಾಗರ (Sagara) ತಾಲ್ಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ದೇಶವನ್ನು ವಿರೋಧಿಸಿ ಇಂದು ಪಾದಯಾತ್ರೆ ನಡೆಸಲಾಗಿದೆ. ಪಾದಯಾತ್ರೆಯಲ್ಲಿ ಸಾವಿರಾರು ಜನ ಭಾಗಿ ಮಲೆನಾಡು ಅಣುಸ್ಥಾವರ ವಿರೋಧಿ ಹೋರಾಟ ವೇದಿಯಿಂದ ಬೇಸೂರಿನಿಂದ ಸಾಗರ ಎಸಿ ಕಚೇರಿಯ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಜನ ಬೆಳಿಗ್ಗೆ 7 ಗಂಟೆಗೆ ಬೇಸೂರು ನಿಂದ ಸಾಗರ ತಾಲೂಕು ಕಚೇರಿ ವರೆಗೆ ಸರಿಸುಮಾರು 30 ಕಿಲೋಮೀಟರ್…

Read More
No entry to hijab in sslc second exam also

Hijab: ರಾಜ್ಯದಲ್ಲಿ ಇಂದಿನಿಂದ ಎಸ್​​ಎಸ್​​ಎಲ್​​ಸಿ 2ನೇ ಪರೀಕ್ಷೆ ಆರಂಭ: ಹಿಜಾಬ್ ನಿಯಮದ ಸುತ್ತ ಗೊಂದಲ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಮೇ 18) ಎಸ್​​ಎಸ್​​ಎಲ್​​ಸಿ (SSLC) ಎರಡನೇ ಪರೀಕ್ಷೆಗಳು ಆರಂಭಗೊಂಡಿವೆ. ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು ಧರಿಸಲು ಅನುಮತಿ ನೀಡುವ ಕುರಿತು ಸರ್ಕಾರ ಇತ್ತೀಚೆಗಷ್ಟೇ ಹೊಸ ಮಾರ್ಗಸೂಚಿ ಪ್ರಕಟಿಸಿತ್ತಾದರೂ, ಪ್ರಸಕ್ತ ಪರೀಕ್ಷೆಯಲ್ಲಿ ಹಿಜಾಬ್ (Hijab) ಧರಿಸಿ ಬರೆಯಲು ವಿದ್ಯಾರ್ಥಿನಿಯರಿಗೆ ಅವಕಾಶ ಸಿಕ್ಕಿಲ್ಲ. ಜನಿವಾರ, ಶಿವದಾರ, ಲಿಂಗ ಮತ್ತು ರುದ್ರಾಕ್ಷಿ ಧರಿಸಲು ಸಮ್ಮತಿ ಇದ್ದರೂ, ಹಿಜಾಬ್ ನಿಷೇಧ ಮುಂದುವರಿದಿದೆ. ಹಳೆಯ ನಿಯಮದಂತೆಯೇ ಪರೀಕ್ಷೆ ಮೊದಲನೇ ಪರೀಕ್ಷೆಯ ಮಾದರಿಯಲ್ಲೇ ಈ ಬಾರಿಯೂ ಪರೀಕ್ಷಾ ಪ್ರಕ್ರಿಯೆಗಳು ನಡೆಯುತ್ತಿವೆ. ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ…

Read More
Crime deadly road mishap near kolluru temple 2 people lost life 8 injured

Crime: ಕೊಲ್ಲೂರು ಬಳಿ ಭೀಕರ ಅಪಘಾತ: ಕೇರಳದ ಇಬ್ಬರು ಪ್ರವಾಸಿಗರು ಸಾವು, ಎಂಟು ಜನರಿಗೆ ಗಂಭೀರ ಗಾಯ

ಕುಂದಾಪುರ: ಪ್ರಸಿದ್ಧ ಪ್ರವಾಸಿ ತಾಣ ಕೊಡಚಾದ್ರಿಗೆ ಬಂದು ಮರಳಿ ಹೋಗುತ್ತಿದ್ದ ಕೇರಳ ಮೂಲದ ಪ್ರವಾಸಿಗರ ಜೀಪ್ ಹಾಗೂ ಇನ್ಸುಲೇಟರ್ ವಾಹನದ ನಡುವೆ ಭಾನುವಾರ (Crime) ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದ ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಮಣಿಪಾಲ್‌ ಆಸ್ಪತ್ರೆಗೆ ದಾಖಲು ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಜೀವ ಕಳೆದುಕೊಂಡ ದುರ್ದೈವಿಗಳಾಗಿದ್ದಾರೆ. ಇನ್ನುಳಿದಂತೆ ಪ್ರವಾಸಿಗರಾದ ಅಯನ್…

Read More