TOP NEWS
Bengaluru Shocker Men Chase Water Tanker for 4 km Smash Windows and Brutally Attack Driver

Bengaluru: ಸಿಲಿಕಾನ್ ಸಿಟಿಯಲ್ಲಿ ರೋಡ್ ರೇಜ್ ಕಿಚ್ಚು; ಚಾಲಕನ ತಲೆ ಒಡೆದ ಕಿಡಿಗೇಡಿಗಳು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ದಿನದಿಂದ ದಿನಕ್ಕೆ ವಾಹನ ಸವಾರರ ಆಕ್ರೋಶ ತಡೆರಹಿತವಾಗುತ್ತಿದ್ದು, ಕ್ಷುಲ್ಲಕ ಕಾರಣಗಳಿಗೆ ಜೀವಕ್ಕೆ ಕುತ್ತು ತರುವ ರೋಡ್ ರೇಜ್ ಪ್ರಕರಣಗಳು ಮಿತಿ ಮೀರುತ್ತಿವೆ. ಇದಕ್ಕೆ ಮತ್ತೊಂದು ಸಾಕ್ಷಿ ಎಂಬಂತೆ, ರಾಜಧಾನಿಯ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನೀರಿನ ಟ್ಯಾಂಕರ್ ಚಾಲಕನನ್ನು ಬರೋಬ್ಬರಿ ನಾಲ್ಕು ಕಿಲೋಮೀಟರ್‌ಗೂ ಹೆಚ್ಚು ದೂರ ಬೈಕ್‌ಗಳಲ್ಲಿ ಬೆನ್ನಟ್ಟಿದ ಪುಂಡರ ಗುಂಪೊಂದು, ಕಲ್ಲು ತೂರಾಟ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದೆ. ಈ ಭೀಕರ…

Read More
Crime BMTC Passengers Targeted in Bengaluru Two Members of Notorious Vomit Gang Arrested

Crime: ಬೆಂಗಳೂರಲ್ಲಿ ಬಿಎಂಟಿಸಿ ಪ್ರಯಾಣಿಕರೇ ಟಾರ್ಗೆಟ್: ‘ವಾಂತಿ ಗ್ಯಾಂಗ್’ ಇಬ್ಬರು ಕಳ್ಳರು ಪೊಲೀಸರ ವಶಕ್ಕೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಗ್ಧ (Crime) ಸಾರ್ವಜನಿಕರನ್ನು ವಂಚಿಸಿ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಲು ಖದೀಮರು ಹೊಸ ಹೊಸ ತಂತ್ರಗಳನ್ನು ಬಳಸುತ್ತಿದ್ದಾರೆ. ವಿಶೇಷವಾಗಿ ಬಿಎಂಟಿಸಿ ಬಸ್ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಕೈಚಳಕ ತೋರುತ್ತಿರುವ ‘ವಾಂತಿ ಗ್ಯಾಂಗ್’ ಮತ್ತು ಮಧ್ಯರಾತ್ರಿ ವಸತಿ ಪ್ರದೇಶಗಳಲ್ಲಿ ದರೋಡೆಗೆ ಇಳಿಯುತ್ತಿರುವ ‘ಮುಸುಕುಧಾರಿ ಕಳ್ಳರ’ ಹಾವಳಿ ನಗರದಲ್ಲಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ದಂದೆಗಳ ವಿರುದ್ಧ ಅಲರ್ಟ್ ಆಗಿರುವ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಕಟಕಟೆಗೆ ತಳ್ಳಿದ್ದಾರೆ. ಏನಿದು ‘ವಾಂತಿ ಗ್ಯಾಂಗ್’ ತಂತ್ರ?:…

Read More
Pandemonium in Upper House Bill Introduced Amid Ruckus Rajya Sabha Adjourned Till Monday

Rajya Sabha: ರಾಜ್ಯಸಭೆಯಲ್ಲಿ ನೀಟ್ ಅಸ್ತ್ರ, ಬಿರುಗಾಳಿ ಎಬ್ಬಿಸಿದ ವಿಪಕ್ಷಗಳು: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಖರ್ಗೆ ಬಿಗಿಪಟ್ಟು

ನವದೆಹಲಿ: ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ‘ರಾಷ್ಟ್ರಗೌರವಕ್ಕೆ ಅಪಮಾನ ತಡೆ ತಿದ್ದುಪಡಿ ಮಸೂದೆ-2026’ ಮಂಡನೆಯನ್ನು ವಿರೋಧಿಸಿ ವಿರೋಧ ಪಕ್ಷಗಳು ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದ್ದರಿಂದ, ಸಂಸತ್ತಿನ ಮುಂಗಾರು ಅಧಿವೇಶನದ ಶುಕ್ರವಾರದ ರಾಜ್ಯಸಭಾ (Rajya Sabha) ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಗಿದೆ. ಸೋಮವಾರ ಆರಂಭವಾದ ಮುಂಗಾರು ಅಧಿವೇಶನದ ಮೊದಲ ದಿನದಿಂದಲೂ ವಿರೋಧ ಪಕ್ಷಗಳ ಸರಣಿ ಆಕ್ರೋಶ ಮತ್ತು ಗದ್ದಲದಿಂದಾಗಿ ಮೇಲ್ಮನೆಯಲ್ಲಿ ಯಾವುದೇ ಮಹತ್ವದ ಕಲಾಪಗಳು ನಡೆಯದಂತಾಗಿದೆ. ಎರಡು ಬಾರಿ ಮುಂದೂಡಲ್ಪಟ್ಟ ಕಲಾಪ ಶುಕ್ರವಾರ ಬೆಳಗ್ಗೆಯಿಂದಲೇ ಎರಡು…

Read More
DK Shivakumar Slams Central Governments Delayed Response to NEET Student Protests

DK Shivakumar: ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಹೇಳಿದರು. ಬೆಂಗಳೂರು ಟೆಕ್ ಸಮ್ಮಿಟ್ ಸಿಇಒಗಳ ಉಪಹಾರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣದ ವಿಚಾರದ ಚರ್ಚೆಯ ಕುರಿತು ಕೇಳಿದಾಗ, “ಈಗ…

Read More
Crime Massive Fraud Uncovered Agriculture Vigilance Cell Busts Fake Pesticide Racket Operating Under 12 Big Brands

Crime: ಚಿಕ್ಕಬಳ್ಳಾಪುರದಲ್ಲಿ ಹಠಾತ್ ದಾಳಿ: ಕೃಷಿ ತಜ್ಞನ ಸೋಗಿನಲ್ಲಿ ನಕಲಿ ಕೀಟನಾಶಕ ಮಾರುತಿದ್ದ ಖದೀಮ ವಶಕ್ಕೆ!

ಚಿಕ್ಕಬಳ್ಳಾಪುರ: ಪ್ರಮುಖ ಹಾಗೂ ಜನಪ್ರಿಯ ಕಂಪನಿಗಳ ಬ್ರ್ಯಾಂಡ್ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಕೀಟನಾಶಕಗಳನ್ನು ತಯಾರಿಸಿ (Crime) ಮುಗ್ಧ ರೈತರಿಗೆ ವಂಚಿಸುತ್ತಿದ್ದ ಬೃಹತ್ ದಂಧೆಯನ್ನು ಕೃಷಿ ಇಲಾಖೆಯ ಜಾಗೃತ ದಳ ಭೇದಿಸಿದೆ. ನಗರದ ವಸತಿ ಗೃಹವೊಂದರ ಮೇಲೆ ಅನಿರೀಕ್ಷಿತ ದಾಳಿ ನಡೆಸಿದ ಅಧಿಕಾರಿಗಳ ತಂಡ, ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ಕೀಟನಾಶಕ ಹಾಗೂ ಪ್ಯಾಕಿಂಗ್ ಪರಿಕರಗಳನ್ನು ವಶಪಡಿಸಿಕೊಂಡಿದೆ. ಖೋಟಾ ಜಿಎಸ್‌ಟಿ ಬಳಸಿ ವಂಚನೆ: ಕಾಲಾವಧಿ ಮುಗಿದಿರುವ ಹಳೆಯ ಕೃಷಿ ರಾಸಾಯನಿಕಗಳನ್ನು ಅನಧಿಕೃತವಾಗಿ ಮಿಶ್ರಣ ಮಾಡಿ ಈ ನಕಲಿ ಕೀಟನಾಶಕವನ್ನು…

Read More
Big news Shravanabelagola Madikeri Rail Project Faces Hurdles Amid Low Projected Passenger Traffic

Big News: ಶ್ರವಣಬೆಳಗೊಳ-ಮಡಿಕೇರಿ ರೈಲ್ವೆ ಮಾರ್ಗ: ನಿರೀಕ್ಷಿತ ಸಂಚಾರ ವಿರಳ, ಯೋಜನೆಗೆ ತೊಡಕು

ಬೆಂಗಳೂರು: ಹೊಳೆನರಸೀಪುರ, ಅರಕಲಗೂಡು, ಕೊಣನೂರು ಮತ್ತು ಕುಶಾಲನಗರ ಮಾರ್ಗವಾಗಿ ಶ್ರವಣಬೆಳಗೊಳ ಮತ್ತು ಮಡಿಕೇರಿ ನಡುವೆ ಹೊಸ ರೈಲು ಮಾರ್ಗ ನಿರ್ಮಿಸುವ ಪ್ರಸ್ತಾಪಿತ (Big News) ಯೋಜನೆಗೆ ಹಿನ್ನಡೆಯಾಗಿದೆ. ಈ ಮಾರ್ಗದಲ್ಲಿ ನಿರೀಕ್ಷಿತ ಪ್ರಯಾಣಿಕರು ಹಾಗೂ ಸರಕು ಸಾಗಣೆಯ ಪ್ರಮಾಣ ತೀರಾ ಕಡಿಮೆ ಇರಲಿದೆ ಎಂದು ರೈಲ್ವೆ ಸಚಿವಾಲಯ ನಡೆಸಿದ ಸಾಧ್ಯತಾ ವರದಿ (ಫೀಸಿಬಿಲಿಟಿ ಸ್ಟಡಿ) ತಿಳಿಸಿದೆ. ಲೋಕಸಭೆಯಲ್ಲಿ ಹಾಸನ ಸಂಸದ ಶ್ರೇಯಸ್ ಎಂ. ಪಟೇಲ್ ಕೇಳಿದ ಪ್ರಶ್ನೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು…

Read More
Big news Zero Tolerance for Exam Scams Modi Cabinet Clears Powerful Amendment to Check Paper Leaks

Big News: ಪೇಪರ್ ಲೀಕ್ ಮಾಡಿದ್ರೆ 10 ವರ್ಷ ಜೈಲು, ₹10 ಕೋಟಿ ದಂಡ!: ಮೋದಿ ಸರ್ಕಾರದ ಹೊಸ ಕಾನೂನಿಗೆ ಫಾಸ್ಟ್ ಟ್ರ್ಯಾಕ್ ಬಲ

ನವದೆಹಲಿ: ದೇಶಾದ್ಯಂತ ತೀವ್ರ ಆಂದೋಲನಕ್ಕೆ ಕಾರಣವಾಗಿರುವ ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ, ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ (Big News) ತನ್ನ ಕಾನೂನು ಚೌಕಟ್ಟನ್ನು ಮತ್ತಷ್ಟು ಬಲಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯರಾತ್ರಿ ವಿಡಿಯೋ ಸಂದೇಶದ ಮೂಲಕ ಕಠಿಣ ಕ್ರಮದ ಭರವಸೆ ನೀಡಿದ ಮರುದಿನವೇ, ಕೇಂದ್ರ ಸರ್ಕಾರವು 2024ರ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆಗೆ ಮಹತ್ವದ ತಿದ್ದುಪಡಿಗಳನ್ನು ತಂದಿದೆ. ಪರೀಕ್ಷಾ ವಂಚನೆ ಮತ್ತು ಪೇಪರ್ ಲೀಕ್ ದಂಧೆಗೆ ಸಂಪೂರ್ಣ ಬ್ರೇಕ್ ಹಾಕುವ…

Read More