Andra Pradesh: ಆಂಧ್ರದಲ್ಲಿ ಹೈಡ್ರಾಮಾ: ವೈಎಸ್ಆರ್ಸಿಪಿ ಎಂಎಲ್ಸಿ ದುವ್ವಾಡ ಶ್ರೀನಿವಾಸ್ ದಿಢೀರ್ ನಾಪತ್ತೆ!
ಶ್ರೀಕಾಕುಲಂ (ಆಂಧ್ರಪ್ರದೇಶ): ಆಂಧ್ರಪ್ರದೇಶದ (Andra Pradesh) ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ವೈಎಸ್ಆರ್ಸಿಪಿ ಎಂಎಲ್ಸಿ ದುವ್ವಾಡ ಶ್ರೀನಿವಾಸ್ ಅವರು ದಿಢೀರನೆ ನಾಪತ್ತೆಯಾಗಿದ್ದು, ಶ್ರೀಕಾಕುಲಂ ಜಿಲ್ಲೆಯಲ್ಲಿ ಭಾರಿ ರಾಜಕೀಯ ಉದ್ವಿಗ್ನತೆ ಸೃಷ್ಟಿಸಿದೆ. ವಿಚಾರಣೆಗೆ ಹಾಜರಾಗಲು ತೆಕ್ಕಲಿಯಿಂದ ಕೊತ್ತೂರು ಪೊಲೀಸ್ ಠಾಣೆಗೆ ಹೊರಟಿದ್ದ ಅವರು ನಿಗದಿತ ಸಮಯಕ್ಕೆ ಅಲ್ಲಿಗೆ ತಲುಪದೆ ಇದ್ದುದರಿಂದ ಹೈಡ್ರಾಮಾ ಶುರುವಾಗಿದೆ. ದುವ್ವಾಡ ಶ್ರೀನಿವಾಸ್ ಅವರು ತಮ್ಮ ನಿವಾಸದಿಂದ ಖಾಸಗಿ ವಾಹನದಲ್ಲಿ ಹೊರಟಿದ್ದರಾದರೂ ಮಾರ್ಗಮಧ್ಯೆ ಎಲ್ಲಿಗೆ ಹೋದರು ಎಂಬುದು…
