Annamalai: ಬಿಜೆಪಿಗೆ ಅಣ್ಣಾಮಲೈ ಗುಡ್ಬೈ: ರಜನಿಕಾಂತ್ ಪಂಚ್ ಡೈಲಾಗ್ ಹೆಸರಲ್ಲಿ ಹೊಸ ಪಕ್ಷ ಕಟ್ಟಲು ಮಾಜಿ ಐಪಿಎಸ್ ಸಿಂಗಂ ಸಿದ್ಧತೆ!
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಮತ್ತೊಂದು ಭಾರಿ ರಾಜಕೀಯ ದ್ರುವೀಕರಣಕ್ಕೆ ವೇದಿಕೆ ಸಿದ್ಧವಾಗಿದ್ದು, ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (Annamalai) ಅವರು ಕಮಲ ಪಾಳಯ ತೊರೆದು ಸ್ವಂತ ರಾಜಕೀಯ ಪಕ್ಷ ಕಟ್ಟಲು ನಿರ್ಧರಿಸಿದ್ದಾರೆ. ಜೂನ್ 2 ರಂದು ಅವರು ತಮ್ಮ ಅಂತಿಮ ನಿರ್ಧಾರವನ್ನು ಬಿಜೆಪಿ ವರಿಷ್ಠರಿಗೆ ತಿಳಿಸಲಿದ್ದಾರೆ ಎಂದು ನಂಬಲಾರ್ಹ ಮೂಲಗಳು ಖಚಿತಪಡಿಸಿವೆ. ಆರಂಭದಲ್ಲಿ ಅವರು ತಮಿಳುನಾಡಿನಲ್ಲಿ ದೊಡ್ಡ ಮಟ್ಟದ ಜನಾಂದೋಲನ (ಜನರ ಚಳವಳಿ) ಆರಂಭಿಸಲಿದ್ದು, ಮುಂದಿನ ದಿನಗಳಲ್ಲಿ ಅದನ್ನು ಅಧಿಕೃತ ರಾಜಕೀಯ ಪಕ್ಷವನ್ನಾಗಿ ಪರಿವರ್ತಿಸಲಿದ್ದಾರೆ….
