DK Shivakumar: ಮಕ್ಕಳಿಂದ ಕೆಲಸ ಮಾಡಿಸಿದರೆ ಪೊಲೀಸರ ಅಮಾನತು: ಎಪಿಎಂಸಿ ಮಾರುಕಟ್ಟೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ತಾಕೀತು
ಬೆಂಗಳೂರು: ರಾಜ್ಯದ ಮಾರುಕಟ್ಟೆಗಳಲ್ಲಿ ರೈತರು, ವರ್ತಕರು ಹಾಗೂ ಶ್ರಮಿಕ ವರ್ಗದವರು ಎದುರಿಸುತ್ತಿರುವ ಸಮಸ್ಯೆಗಳನ್ನು ನೇರವಾಗಿ ಮನಗಾಣುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಂಗಳವಾರ ಮುಂಜಾನೆ ಆರು ಗಂಟೆಗೆ ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿ ಸಕಲ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಳ್ಳಂಬೆಳಗ್ಗೆ ಮಾರುಕಟ್ಟೆಗೆ ಆಗಮಿಸಿದ ಅವರು, ಈರುಳ್ಳಿ, ಆಲೂಗಡ್ಡೆ, ಶುಂಠಿ ಹಾಗೂ ಬೆಳ್ಳುಳ್ಳಿ ಸೇರಿದಂತೆ ವಿವಿಧ ಮಾರುಕಟ್ಟೆ ವಿಭಾಗಗಳಿಗೆ ನಡೆದುಕೊಂಡೇ ತೆರಳಿ ವಹಿವಾಟುಗಳನ್ನು ವೀಕ್ಷಿಸಿದರು. ಈ ವೇಳೆ ಮಾರುಕಟ್ಟೆಯಲ್ಲಿ ಹಾಜರಿದ್ದ ರೈತರು,…
