Cabinet: ತುಳು ಭಾಷೆಗೆ ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆ ಮಾನ್ಯತೆ ಸನ್ನಿಹಿತ!
ಮಂಗಳೂರು: ಸೆಪ್ಟೆಂಬರ್ 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜರುಗಲಿರುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ (Cabinet) ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮಹತ್ವದ ನಿರ್ಧಾರ ಹೊರಬೀಳಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭರವಸೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಂಗಳೂರು ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಜನರ ದಶಕಗಳ ಬೇಡಿಕೆಯಾದ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ ಎಂದು ಸ್ಪಷ್ಟಪಡಿಸಿದರು. ಸರ್ಕಾರಕ್ಕೆ ಸೂಕ್ತ…
