Ram Mandir: ಅಯೋಧ್ಯೆ ರಾಮಮಂದಿರ ಟ್ರಸ್ಟ್ನಲ್ಲಿ ಭಾರಿ ಸಂಚಲನ: ದೇಣಿಗೆ ವಿವಾದ ಬೆನ್ನಲ್ಲೇ ಚಂಪತ್ ರೈ ರಾಜೀನಾಮೆ ಕುರಿತು ಇಂದು ಅಂತಿಮ ತೀರ್ಮಾನ!
ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ (Ram Mandir) ತೀರ್ಥ ಕ್ಷೇತ್ರ ಟ್ರಸ್ಟ್ನ ಮಹತ್ವದ ಸಭೆಯು ಸೋಮವಾರ ಮಧ್ಯಾಹ್ನ ಅಯೋಧ್ಯೆಯಲ್ಲಿ ನಡೆಯಲಿದ್ದು, ಇಡೀ ದೇಶದ ಗಮನ ಇದರತ್ತ ನೆಟ್ಟಿದೆ. ಇತ್ತೀಚೆಗೆ ಭಾರಿ ವಿವಾದ ಸೃಷ್ಟಿಸಿದ್ದ ದೇಣಿಗೆ ಕಳ್ಳತನದ ಆರೋಪದ ಹಿನ್ನೆಲೆಯಲ್ಲಿ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಇಂದಿನ ಸಭೆಯಲ್ಲಿ ಈ ರಾಜೀನಾಮೆಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ನಂತರ ನಡೆಯುತ್ತಿರುವ…
