TOP NEWS
Who will succeed Champat Rai as Ram mandir Trust General Secretary

Ram Mandir: ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನಲ್ಲಿ ಭಾರಿ ಸಂಚಲನ: ದೇಣಿಗೆ ವಿವಾದ ಬೆನ್ನಲ್ಲೇ ಚಂಪತ್ ರೈ ರಾಜೀನಾಮೆ ಕುರಿತು ಇಂದು ಅಂತಿಮ ತೀರ್ಮಾನ!

ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ (Ram Mandir) ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಹತ್ವದ ಸಭೆಯು ಸೋಮವಾರ ಮಧ್ಯಾಹ್ನ ಅಯೋಧ್ಯೆಯಲ್ಲಿ ನಡೆಯಲಿದ್ದು, ಇಡೀ ದೇಶದ ಗಮನ ಇದರತ್ತ ನೆಟ್ಟಿದೆ. ಇತ್ತೀಚೆಗೆ ಭಾರಿ ವಿವಾದ ಸೃಷ್ಟಿಸಿದ್ದ ದೇಣಿಗೆ ಕಳ್ಳತನದ ಆರೋಪದ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಇಂದಿನ ಸಭೆಯಲ್ಲಿ ಈ ರಾಜೀನಾಮೆಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ನಂತರ ನಡೆಯುತ್ತಿರುವ…

Read More
RSS releases video statement regarding ram mandir donation row

Ram Mandir: ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣಕ್ಕೆ ಆರ್‌ಎಸ್‌ಎಸ್ ತೀವ್ರ ಬೇಸರ; ನಿಷ್ಪಕ್ಷಪಾತ ತನಿಖೆಗೆ ದತ್ತಾತ್ರೇಯ ಹೊಸಬಾಳೆ ಆಗ್ರಹ!

ನವದೆಹಲಿ: ಅಯೋಧ್ಯೆಯ ರಾಮ ಮಂದಿರಕ್ಕೆ (Ram Mandir) ಬಂದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಗರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಒತ್ತಾಯಿಸಿದೆ. ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ತಪ್ಪಿಸಲು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ಅತ್ಯಗತ್ಯ ಎಂದು ಶುಕ್ರವಾರ ಹೇಳಿಕೆ ನೀಡಿರುವ ಆರ್‌ಎಸ್‌ಎಸ್, ಈ ವಂಚನೆಯಿಂದಾಗಿ ರಾಮಭಕ್ತರ ಮನಸ್ಸಿಗೆ ತೀವ್ರ ‘ನೋವು’ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ. ಹೇಳಿಕೆ ಬಿಡುಗಡೆ ಮಾಡಿದ ಆರ್‌ಎಸ್‌ಎಸ್‌ ವಿಡಿಯೋ ಹೇಳಿಕೆಯೊಂದನ್ನು…

Read More
Ram mandir donation row accused revealed all story

Ram Mandir: ರಾಮಮಂದಿರದ ಕೋಟ್ಯಂತರ ರೂ. ಲೂಟಿ ಕೇಸ್: ಎಸ್‌ಐಟಿ ತನಿಖೆಯಲ್ಲಿ ಕಳ್ಳತನದ ಅಸಲಿ ಕರಾಮತ್ತು ಬಿಚ್ಚಿಟ್ಟ ಆರೋಪಿಗಳು

ಉತ್ತರ ಪ್ರದೇಶ: ಅಯೋಧ್ಯೆಯ ರಾಮಮಂದಿರದ (Ram Mandir) ದೇಣಿಗೆ ಹಣ ಲೂಟಿ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಸಿಕ್ಕಿಬಿದ್ದಿರುವ ಕಿಲಾಡಿ ಕಳ್ಳರು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ. ಭಕ್ತರು ಅರ್ಪಿಸಿದ ಕೋಟ್ಯಂತರ ರೂಪಾಯಿ ಕಾಣಿಕೆಯನ್ನು ದೇವಸ್ಥಾನದ ಆವರಣದಿಂದ ಯಾರಿಗೂ ಅನುಮಾನ ಬಾರದಂತೆ ಹೊರಗೆ ಸಾಗಿಸಲು ಆರೋಪಿಗಳು ಶೌಚಾಲಯಗಳನ್ನು (ವಾಶ್‌ರೂಮ್ಸ್) ತಾತ್ಕಾಲಿಕ ಅಡಗುದಾಣವನ್ನಾಗಿ ಬಳಸಿಕೊಳ್ಳುತ್ತಿದ್ದರು ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ. ಉಪಾಯಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಆರೋಪಿ ಈ ಮಹಾ ಹಗರಣದ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರವು ರಚಿಸಿರುವ ವಿಶೇಷ ತನಿಖಾ…

Read More
ram mandir mahant nritya gopal das admitted to hospital in Lucknow

Ram Mandir: ಅಯೋಧ್ಯೆ ರಾಮಮಂದಿರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ (Ram Mandir) ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಲಕ್ನೋದ ಪ್ರಸಿದ್ಧ ಮೇದಾಂತ ಆಸ್ಪತ್ರೆಗೆ ಸೇರಿಸಲಾಗಿದೆ. ದೇಹದಲ್ಲಿ ತೀವ್ರವಾದ ಸೋಂಕು (ಇನ್‌ಫೆಕ್ಷನ್) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ತರಲಾಗಿದ್ದು, ಸದ್ಯ ತಜ್ಞ ವೈದ್ಯರ ತಂಡ ಅವರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಎರಡನೇ ಬಾರಿ ಆಸ್ಪತ್ರೆಗೆ ದಾಖಲು 86 ವರ್ಷದ ಹಿರಿಯ ಸಂತರಾದ ನೃತ್ಯ ಗೋಪಾಲ್ ದಾಸ್ ಅವರು ಈ ವರ್ಷದಲ್ಲಿ…

Read More
Ram mandir donation row accused revealed all story

Ram Mandir: ರಾಮಮಂದಿರ ದೇಣಿಗೆ ಹಗರಣ ತೀವ್ರ: ಎಂಟೂ ಆರೋಪಿಗಳು 14 ದಿನ ನ್ಯಾಯಾಂಗ ಬಂಧನಕ್ಕೆ!

ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರದ (Ram Mandir) ದೇಣಿಗೆ ಹಾಗೂ ಕಾಣಿಕೆ ದುರುಪಯೋಗ ಹಗರಣದ ತನಿಖೆ ತೀವ್ರಗೊಂಡಿದ್ದು, ಬಂಧಿತರಾಗಿರುವ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಜುಲೈ 13ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ತನಿಖೆಯ ಹಿತದೃಷ್ಟಿಯಿಂದ ಆರೋಪಿಗಳನ್ನು ಕಸ್ಟಡಿಯಲ್ಲೇ ಇರಿಸಬೇಕು ಎಂಬ ಪೊಲೀಸರ ವಾದವನ್ನು ಪುರಸ್ಕರಿಸಿ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ….

Read More
Sanjay Raut calls for probe over missing Sena UBT gift to Ram Mandir

Sanjay Raut: ಅಯೋಧ್ಯೆ ರಾಮಮಂದಿರಕ್ಕೆ ನೀಡಿದ್ದ 4 ಕೆಜಿ ಬೆಳ್ಳಿ ಇಟ್ಟಿಗೆ ನಾಪತ್ತೆ? ಸಂಜಯ್ ರಾವುತ್ ಗಂಭೀರ ಆರೋಪ!

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ತಮ್ಮ ಪಕ್ಷದ ವತಿಯಿಂದ ದೇಣಿಗೆಯಾಗಿ ನೀಡಲಾಗಿದ್ದ 4 ಕೆಜಿ ತೂಕದ ಬೆಳ್ಳಿಯ ಇಟ್ಟಿಗೆಯು ನಾಪತ್ತೆಯಾಗಿದೆ ಎಂದು ಶಿವಸೇನೆ (UBT) ಸಂಸದ ಸಂಜಯ್ ರಾವುತ್ (Sanjay Raut) ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಸೂಕ್ತ ಜವಾಬ್ದಾರಿ ಮತ್ತು ಸಮಗ್ರ ತನಿಖೆಯಾಗಬೇಕು ಎಂದು ಅವರು ತೀವ್ರವಾಗಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿರುವ ಸಂಜಯ್ ರಾವುತ್,…

Read More