Shocking: ಬಳ್ಳಾರಿ ಮತ್ತು ಮೈಸೂರಿನ ಆಸ್ಪತ್ರೆಗಳಲ್ಲಿ ಸಿಬ್ಬಂದಿ ನಿರ್ಲಕ್ಷ್ಯ; ಇಬ್ಬರು ರೋಗಿಗಳ ಸಾವು
ಬೆಂಗಳೂರು: ರಾಜ್ಯದ ವಿವಿಧೆಡೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ (Shocking) ರೋಗಿಗಳು ಪ್ರಾಣ ಕಳೆದುಕೊಂಡಿರುವ ಎರಡು ಆಘಾತಕಾರಿ ಘಟನೆಗಳು ವರದಿಯಾಗಿವೆ. ಬಳ್ಳಾರಿಯಲ್ಲಿ ಇಬ್ಬಂದಿ ನಿರ್ಲಕ್ಷ್ಯ, ವೃದ್ಧೆ ಸಾವು ಬಳ್ಳಾರಿಯ ಬಿಎಂಇಆರ್ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ಅಕ್ಕಮ್ಮ ಎಂಬುವವರು ಮೃತಪಟ್ಟಿದ್ದು, ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಾಯಿಯ ಕ್ಯಾನ್ಸರ್ನಿಂದ ಬಳಲುತ್ತಿದ್ದ ಇವರಿಗೆ ಏಪ್ರಿಲ್ 17ರಂದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿತ್ತು. ಆದರೆ, ಆಪರೇಷನ್ ನಂತರದ ದಿನಗಳಲ್ಲಿ ಅಗತ್ಯವಿದ್ದ ಇಂಜೆಕ್ಷನ್ ಮತ್ತು…
