Yatnal: ರಾಜ್ಯ ಬಿಜೆಪಿಯಲ್ಲಿ ಮುಗಿಯದ ಅಸಮಾಧಾನ: “ನವೆಂಬರ್ ಕ್ರಾಂತಿ ಆಗದಿದ್ದರೆ ಕರ್ನಾಟಕದಲ್ಲಿ ಬಿಜೆಪಿ ಉಳಿಯಲ್ಲ” ಎಂದು ಯತ್ನಾಳ್ ಗಂಭೀರ ಎಚ್ಚರಿಕೆ!
ವಿಜಯಪುರ: ರಾಜ್ಯ ಬಿಜೆಪಿಯ ಒಳಗಿನ ಭಿನ್ನಮತ ಮತ್ತೊಮ್ಮೆ ಸ್ಪೋಟಗೊಂಡಿದ್ದು, ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮತ್ತೊಂದು ಸುತ್ತಿನ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಬಹುಚರ್ಚಿತ ‘ನವೆಂಬರ್ ಕ್ರಾಂತಿ’ ವಿಚಾರವಾಗಿ ವಿಜಯಪುರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರ ನಾಯಕತ್ವದಲ್ಲಿ ಬಿಜೆಪಿ ಸಾಗಿದರೆ ಪಕ್ಷ ಮುಗಿದು ಹೋಗುತ್ತದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು. ಪ್ರಸ್ತುತ ರಾಜ್ಯಾಧ್ಯಕ್ಷರ ಬದಲಾವಣೆಯಾಗದಿದ್ದರೆ ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ…
