TOP NEWS
Maharashtra rain Dams Full Heavy Inflow Into Krishna River Sparks Flood Threat on Belagavi Border

Rain: ಮಹಾರಾಷ್ಟ್ರದ ಜಲಾಶಯಗಳು ಭರ್ತಿ: ಕೃಷ್ಣಾ ನದಿಗೆ ಹರಿದುಬಂತು ಭಾರಿ ನೀರು, ಬೆಳಗಾವಿ ಗಡಿಯಲ್ಲಿ ಪ್ರವಾಹದ ಭೀತಿ!

ಚಿಕ್ಕೋಡಿ (ಬೆಳಗಾವಿ): ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಅಲ್ಲಿನ ಪ್ರಮುಖ ಜಲಾಶಯಗಳು ಸಂಪೂರ್ಣ (Rain) ಭರ್ತಿಯಾಗಿವೆ. ಕೊಯ್ನಾ ಮತ್ತು ರಾಧಾನಗರಿ ಡ್ಯಾಂಗಳಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ಇದರ ಪರಿಣಾಮವಾಗಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೃಷ್ಣಾ ಹಾಗೂ ದೂಧಗಂಗಾ ನದಿಗಳು ಭೋರ್ಗರೆದು ಹರಿಯುತ್ತಿವೆ. ಸದ್ಯ ನದಿಗಳ ನೀರಿನ ಮಟ್ಟ ಅಪಾಯದ ಗೆರೆಯನ್ನು ತಲುಪಿದ್ದು, ನದೀತೀರದ ಜನರಲ್ಲಿ ಆತಂಕ ಮನೆಮಾಡಿದೆ. ಲೋ ಲೆವೆಲ್ ಬ್ಯಾರೇಜ್‌ ಮುಳುಗಡೆಯಾಗುವ ಭೀತಿ ಮಹಾರಾಷ್ಟ್ರದ ಸಾತಾರ…

Read More
Mandya Congress rift wide open Ruckus erupts over district chief alleged pact with JDS

Congress: ಮಂಡ್ಯ ಕಾಂಗ್ರೆಸ್ ಕಚೇರಿಯಲ್ಲಿ ಭಾರಿ ಹೈಡ್ರಾಮಾ: ವೀಕ್ಷಕರ ಎದುರಲ್ಲೇ ಕಾರ್ಯಕರ್ತರ ಜಗಳ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ (Congress) ಪಕ್ಷದ ‘ಸಂಘಟನಾ ಸೃಜನ ಅಭಿಯಾನ’ದ ವೇದಿಕೆಯು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ಸಭೆಯುದ್ದಕ್ಕೂ ತೀವ್ರ ಗದ್ದಲ, ವಾಗ್ವಾದಗಳು ಏರ್ಪಟ್ಟಿದ್ದು, ಕೈ ನಾಯಕರ ವಿರುದ್ಧವೇ ಕಾರ್ಯಕರ್ತರು ಭಾರಿ ಆಕ್ರೋಶ ಹೊರಹಾಕಿದ ಘಟನೆ ಜುಲೈ 28 ರಂದು ನಡೆದಿದೆ. ತಾಲೂಕಿನಲ್ಲಿ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುವ ಸರಿಯಾದ ನಾಯಕರೇ ಇಲ್ಲ ಎಂದು ಕಿಡಿಕಾರಿದ ಸ್ಥಳೀಯ ಕಾರ್ಯಕರ್ತರು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಅವರು ಜೆಡಿಎಸ್ ನಾಯಕರೊಂದಿಗೆ ‘ಒಳ ಒಪ್ಪಂದ’ ಹಾಗೂ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ…

Read More
Disaster may strike Karnataka after Belagavi RSS meet Congress leader BK Hariprasad explosive claim

BK Hariprasad: ಆರ್‌ಎಸ್‌ಎಸ್ ಸಭೆ ಬೆನ್ನಲ್ಲೇ ಅಹಿತಕರ ಘಟನೆ ಭೀತಿ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ!

ಬೆಂಗಳೂರು: ಕುಂದಾನಗರಿ ಬೆಳಗಾವಿಯಲ್ಲಿ ಇಂದು (ಶುಕ್ರವಾರ) ಆರಂಭವಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಮುಖ ವಾರ್ಷಿಕ ಸಭೆಯ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ (BK Hariprasad) ತೀವ್ರ ಕಳವಳಕಾರಿ ಮತ್ತು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಗಡಿ ಜಿಲ್ಲೆಯಲ್ಲಿ ಸಂಘ ಪರಿವಾರ ಸಭೆ ನಡೆಸುತ್ತಿರುವುದರ ಹಿಂದೆ ಹತ್ತಾರು ಅನುಮಾನಗಳಿದ್ದು, ಈ ಸಭೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಇತಿಹಾಸ ಕೆದಕಿ ಆರ್‌ಎಸ್‌ಎಸ್…

Read More
MES high drama in Belagavi district office

Belagavi: ಸರ್ಕಾರಿ ಆದೇಶದ ಪ್ರತಿ ಹರಿದು ಎಂಇಎಸ್ ಪುಂಡಾಟ; ಕರವೇ ಆಕ್ರೋಶ, ಸಂಘಟನೆ ನಿಷೇಧಕ್ಕೆ ಆಗ್ರಹ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ (Belagavi) ಮಹಾರಾಷ್ಟ್ರ ಏಕೀಕರಣ ಸಮಿತಿಯ (MES) ಕಾರ್ಯಕರ್ತರು ಮತ್ತೊಮ್ಮೆ ತಮ್ಮ ಗೂಂಡಾಗಿರಿ ಪ್ರವೃತ್ತಿಯನ್ನು ಮುಂದುವರಿಸಿದ್ದಾರೆ. ರಾಜ್ಯಾದ್ಯಂತ ಕನ್ನಡವನ್ನು ಕಡ್ಡಾಯಗೊಳಿಸಿರುವ ಸರ್ಕಾರದ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಎಂಇಎಸ್ ಕಾರ್ಯಕರ್ತರು, ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲೇ ಭಾರೀ ಗದ್ದಲ ಸೃಷ್ಟಿಸಿದ್ದಾರೆ. ಸ್ಥಳದಲ್ಲೇ ರಕ್ಷಣಾ ಸಿಬ್ಬಂದಿ ಇದ್ದರೂ ಲೆಕ್ಕಿಸದೆ, ಸರ್ಕಾರದ ಅಧಿಕೃತ ಸುತ್ತೋಲೆಯನ್ನು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಅದರೊಂದಿಗೆ, ಗಡಿ ಪ್ರದೇಶಗಳಲ್ಲಿ ಮರಾಠಿ ಭಾಷೆಯಲ್ಲೇ ಸರ್ಕಾರಿ ದಾಖಲೆಗಳು ಹಾಗೂ ನಾಮಫಲಕಗಳನ್ನು ಅಳವಡಿಸಬೇಕು ಎಂದು ಪಟ್ಟು…

Read More
teacher who assault students parents hit them in Belagavi

Assault: ಚಿಕ್ಕೋಡಿಯಲ್ಲಿ ಶಾಲಾ ಕೊಠಡಿಯಲ್ಲೇ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಪೋಷಕರಿಂದ ಕಾಮುಕನಿಗೆ ಸಾರ್ವಜನಿಕವಾಗಿ ಧರ್ಮದೇಟು!

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ತಲ್ಲಣ ಮೂಡಿಸುವ ಘಟನೆ ಬೆಳಕಿಗೆ ಬಂದಿದೆ. ಹತ್ತನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕವಾಗಿ (Assault) ಕಿರುಕುಳ ನೀಡುತ್ತಿದ್ದ ಶಿಕ್ಷಕನೊಬ್ಬನಿಗೆ ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು ಹಿಡಿದು ಶಾಲಾ ಆವರಣದಲ್ಲೇ ಚೆನ್ನಾಗಿ ಥಳಿಸಿ ಸಾರ್ವಜನಿಕವಾಗಿ ಧರ್ಮದೇಟು ನೀಡಿರುವ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಉರ್ದು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕನಾಗಿ ಕೆಲಸ ಮಾಡುತ್ತಿರುವ ಶ್ರೀಶೈಲ್ ಕುಂಬಾರ ಎಂಬಾತನೇ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಕಿರಾತಕ. ಪಾಸ್ ಮಾಡುವ ಆಮಿಷ…

Read More
Crime big twist in ex army man death case wife killed for insurance amount

Crime: ಬೆಳಗಾವಿ ಕ್ರೈಂ ಟ್ವಿಸ್ಟ್: ಆಸ್ಪತ್ರೆಯಲ್ಲೇ ನಿವೃತ್ತ ಯೋಧನಿಗೆ ಸ್ಲೋ ಪಾಯ್ಸನ್?

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಡಗೇರಿ ಗ್ರಾಮದಲ್ಲಿ ನಡೆದಿದ್ದ ಮಾಜಿ ಸೈನಿಕ ಸಂದೀಪ ಮಾಂಜರಿ ಅವರ ನಿಗೂಢ ಸಾವಿನ ಪ್ರಕರಣವು ಇಡೀ ರಾಜ್ಯವೇ ಬೆಚ್ಚಿಬೀಳುವಂತಹ (Crime) ತಿರುವು ಪಡೆದುಕೊಂಡಿದೆ. ಕೇವಲ ಎರಡು ಕೋಟಿ ರೂಪಾಯಿ ಭಾರಿ ಮೊತ್ತದ ಇನ್ಶೂರೆನ್ಸ್ ಹಣವನ್ನು ಲೂಟಿ ಮಾಡಲು ಮತ್ತು ತಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ತಾವೇ ಸ್ಕೆಚ್ ಹಾಕಿ ಕೊಂದಿದ್ದಾರೆ ಎಂಬ ಗಂಭೀರ ಆರೋಪ ಪತ್ನಿ ಹಾಗೂ ಆಕೆಯ ಪ್ರಿಯಕರನ ವಿರುದ್ಧ ಕೇಳಿಬಂದಿದೆ. ಪ್ರಕರಣದ ಹಿನ್ನೆಲೆಯಲ್ಲಿ ಈಗಾಗಲೇ ಮಣ್ಣು ಮಾಡಲಾಗಿದ್ದ…

Read More
crime belagavi police arrested 3 accused

Crime: ಅಡ್ವಾನ್ಸ್ ಹಣದ ಕಿರಿಕ್: ವ್ಯಕ್ತಿಯ ಭೀಕರ ಕೊ*ಲೆ, ಮೂವರು ಆರೋಪಿಗಳು ಲಾಕ್!

ಬೆಳಗಾವಿ: ಕುರಿ ಕಾಯುವ ಕೆಲಸಕ್ಕೆಂದು ಮುಂಗಡವಾಗಿ ಪಡೆದಿದ್ದ ಹಣದ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ (Crime) ದೊಡವಾಡ ಗ್ರಾಮದಲ್ಲಿ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಘಟನೆ ನಡೆದು ಕೆಲವೇ ದಿನಗಳಲ್ಲಿ ಮೂವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಹಾಲಪ್ಪ, ಮಂಜುನಾಥ ಹಾಗೂ ಅರ್ಜುನ ಬಂಧಿತ ಕಿಡಿಗೇಡಿಗಳು. ಜಮೀನಿನಲ್ಲಿ ಪತ್ತೆಯಾಗಿತ್ತು ನಿಗೂಢ ಶವ ದೊಡವಾಡ ಗ್ರಾಮದ ನಿವಾಸಿ ಫಕ್ಕೀರಪ್ಪ ಕಿರಕಸಾಲಿ (38) ಕೊಲೆಯಾದ ವ್ಯಕ್ತಿ. ಕಳೆದ ಕೆಲವು ದಿನಗಳ ಹಿಂದೆ…

Read More