TOP NEWS
krishna byre gowda takes class to GBA officers regarding roads

Krishna Byre Gowda: ಹೈಕಮಾಂಡ್ ಸಂಧಾನಕ್ಕೆ ಒಲಿದ ಕೃಷ್ಣ ಬೈರೇಗೌಡ: ಬೆಂಗಳೂರು ನಗರಾಭಿವೃದ್ಧಿ ಜವಾಬ್ದಾರಿ ಸ್ವೀಕರಿಸಿದ ದಿನವೇ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್!

ಬೆಂಗಳೂರು: ಖಾತೆ ಹಂಚಿಕೆಯಲ್ಲಿ ತಮಗಾಗಿದ್ದ ಅಸಮಾಧಾನವನ್ನು ಬದಿಗಿಟ್ಟು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಕೊನೆಗೂ ತಮ್ಮ ಇಲಾಖೆಯ ಅಧಿಕಾರ ಸೂತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ನಡೆಸಿದ ಸರಣಿ ಸಂಧಾನ ಸಫಲವಾದ ಬೆನ್ನಲ್ಲೇ, ಜೂನ್ 16ರಂದು ಸಚಿವರು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಪ್ರಮುಖ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳ ಉನ್ನತ ಮಟ್ಟದ ಸಭೆ ನಡೆಸುವ ಮೂಲಕ ಆಡಳಿತ ಆರಂಭಿಸಿದರು. ಇಲಾಖೆಯ ಚುಕ್ಕಾಣಿ ಹಿಡಿದ ಮೊದಲ…

Read More
fake Bomb threat email to bengaluru RTO office

Bomb Threat: ಬೆಂಗಳೂರಿನ ಆರ್‌ಟಿಒ ಕಚೇರಿಗಳಿಗೆ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರು: ರಾಜಧಾನಿಯ ಜನನಿಬಿಡ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಮತ್ತೊಮ್ಮೆ ಬಾಂಬ್ ಆತಂಕ ಸೃಷ್ಟಿಸಿದ್ದಾರೆ. ನಗರದ ಹಲವು ಪ್ರಮುಖ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (RTO) ಇ-ಮೇಲ್ ಮೂಲಕ ಸ್ಫೋಟದ (Bomb Threat) ಬೆದರಿಕೆ ಸಂದೇಶಗಳನ್ನು ಕಳುಹಿಸಲಾಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಗದ್ದಲ ಮೂಡಿಸಿದೆ. ಜ್ಞಾನಭಾರತಿ, ಕಸ್ತೂರಿನಗರ, ಎಚ್.ಎಸ್.ಆರ್ ಲೇಔಟ್ ಹಾಗೂ ತಲಘಟ್ಟಪುರದ ಆರ್‌ಟಿಒ ಕಚೇರಿಗಳಿಗೆ ಜೂನ್ 16ರ ಮಧ್ಯಾಹ್ನ 1:30ರ ಸುಮಾರಿಗೆ ಏಕಕಾಲದಲ್ಲಿ ಈ ವಿಧ್ವಂಸಕ ಇ-ಮೇಲ್‌ಗಳು ಬಂದಿವೆ. ಕಚೇರಿ ಕಟ್ಟಡಗಳನ್ನು ಸಂಪೂರ್ಣವಾಗಿ ಧ್ವಂಸ ಮಾಡುವುದಾಗಿ ಸಂದೇಶದಲ್ಲಿ…

Read More
Businessman Mohan Das Pai suggestion to new cm dk shivakumar about Bengaluru development and metro problems

Mohan Das Pai: ಬೆಂಗಳೂರು ಅಭಿವೃದ್ಧಿಗೆ ಮೋಹನ್ ದಾಸ್ ಪೈ ಮಾಸ್ಟರ್ ಪ್ಲಾನ್: ಸಿಎಂ ಡಿ.ಕೆ. ಶಿವಕುಮಾರ್‌ಗೆ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ವಿಶೇಷ ಸಲಹೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯಗಳ ದುಃಸ್ಥಿತಿ ಮತ್ತು ಆಡಳಿತ ವ್ಯವಸ್ಥೆಯಲ್ಲಿನ ಲೋಪಗಳ ವಿರುದ್ಧ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ (Mohan Das Pai) ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಗೆ ರಾಜಕೀಯ ಮಾರ್ಗದರ್ಶಕರಾಗಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಮಾದರಿಯಲ್ಲೇ ಜನಪರ ಆಡಳಿತ ನೀಡಬೇಕು ಹಾಗೂ ಭ್ರಷ್ಟಾಚಾರಕ್ಕೆ ಸಂಪೂರ್ಣ ಬ್ರೇಕ್ ಹಾಕಿ ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಘನತೆಯನ್ನು ಮರುಸ್ಥಾಪಿಸಬೇಕು ಎಂದು ಸಲಹೆ ನೀಡಿದ್ದಾರೆ. ಲೂಟಿ ಹೊಡೆಯುವ ರಾಜಕಾರಣದಿಂದಾಗಿ ನಗರದ…

Read More
double decker fly over in namma metro orange line

Namma Metro: ಬೆಂಗಳೂರು ಟ್ರಾಫಿಕ್‌ಗೆ ಮುಕ್ತಿ: ‘ಆರೆಂಜ್ ಲೈನ್’ ಮೆಟ್ರೋ ಕಂ ಡಬಲ್ ಡೆಕ್ಕರ್ ಫ್ಲೈ ಓವರ್ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ!

ಬೆಂಗಳೂರು: ರಾಜಧಾನಿಯ ಹೊರವರ್ತುಲ ರಸ್ತೆ (ORR) ಭಾಗದ ನಿವಾಸಿಗಳು ಹಾಗೂ ವಾಹನ ಸವಾರರ ಬಹುದಿನಗಳ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ನಡೆಸಿದ ದೆಹಲಿ ಪ್ರವಾಸ ಯಶಸ್ವಿಯಾಗಿದ್ದು, ನಮ್ಮ ಮೆಟ್ರೋದ (Namma Metro) 3ನೇ ಹಂತದ ‘ಆರೆಂಜ್ ಲೈನ್’ ಮಾರ್ಗದಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಹಳಿಗೆ ಬರಲುವ ಮುನ್ಸೂಚನೆ ಸಿಕ್ಕಿದೆ. ಕಳೆದ ವರ್ಷದ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹಳದಿ ಲೈನ್…

Read More
Bengaluru condiments association called for strike on june 18 against rowdies harassment

Bengaluru: ಹಫ್ತಾ ವಸೂಲಿ, ಅಧಿಕಾರಿಗಳ ದರ್ಪಕ್ಕೆ ಬೇಸತ್ತ ವರ್ತಕರು: ಜೂನ್ 18 ರಿಂದ ಬೆಂಗಳೂರಿನಲ್ಲಿ ಬೇಕರಿ, ಸಣ್ಣ ಅಂಗಡಿಗಳು ಬಂದ್!

ಬೆಂಗಳೂರು: ರಾಜಧಾನಿಯ ಸಣ್ಣಪುಟ್ಟ ವ್ಯಾಪಾರಿಗಳು ಹಾಗೂ ಬೇಕರಿ ಮಾಲೀಕರು ಅಸಹನೀಯ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಪುಡಿ ರೌಡಿಗಳ ಹಾವಳಿ, ಮಾಮೂಲಿಗಾಗಿ ಪೀಡಿಸುವ ದಂಧೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ನಿರಂತರ ಕಿರುಕುಳಕ್ಕೆ (Bengaluru) ಶಾಶ್ವತ ಪರಿಹಾರ ಕೋರಿ, ನಗರದ ಬೇಕರಿ, ಕಾಂಡಿಮೆಂಟ್ಸ್, ಬೀಡಾ ಮತ್ತು ಬೀದಿಬದಿ ವ್ಯಾಪಾರಿಗಳು ಜೂನ್ 18 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧರಿಸಿದ್ದಾರೆ. ಬೆಂಗಳೂರು ಬೇಕರಿ ಮತ್ತು ಕಾಂಡಿಮೆಂಟ್ಸ್ ಅಸೋಸಿಯೇಷನ್ ಹಮ್ಮಿಕೊಂಡಿರುವ ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, “ನಮಗೆ ನೆಮ್ಮದಿಯಿಂದ ವ್ಯಾಪಾರ…

Read More
Dayananada reddy kidnap case police arrested 4 people crime

Crime: ಮಾಜಿ ಎಂಎಲ್‌ಸಿ ದಯಾನಂದ ರೆಡ್ಡಿ ಕಿಡ್ನಾಪ್ ಕೇಸ್: ಗನ್ ತೋರಿಸಿ ಅಡ್ಡಗಟ್ಟಿದ್ದ ನಾಲ್ವರು ಕೇರಳದ ಕದೀಮರು ಪೊಲೀಸರ ಬಲೆಗೆ!

ಬೆಂಗಳೂರು: ರಾಜಧಾನಿಯ ಹೊರವಲಯದಲ್ಲಿ ತಡರಾತ್ರಿ ಭಾರಿ ಸಂಚಲನ ಮೂಡಿಸಿದ್ದ ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ (Crime) ಅವರ ಸಿನೆಮಾ ಶೈಲಿಯ ಅಪಹರಣ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸೂರ್ಯನಗರ ಠಾಣೆ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡೆಸಿ, ಈ ಕೃತ್ಯ ಎಸಗಿದ್ದ ಕೇರಳ ಮೂಲದ ಪ್ರವೀಣ್, ಅಶಿಕ್, ಆದರ್ಶ ಹಾಗೂ ರೋಮಿಯೋ ಎಂಬ ನಾಲ್ವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ ಕಿಡ್ನಾಪ್ ಮಾಡಲು…

Read More
dk shivakumar facing new problem GBA portfolio

DK Shivakumar: ಸಿಎಂ ಆದ ಮೇಲೂ ಬೆಂಗಳೂರು ಅಭಿವೃದ್ಧಿ ಖಾತೆ ಉಳಿಸಿಕೊಳ್ಳುತ್ತಾರಾ ಡಿಕೆಶಿ? ಸಚಿವ ಸ್ಥಾನದ ಮೇಲ ಕಣ್ಣಿಟ್ಟ ಕೈ ನಾಯಕರು!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರು ಈ ಹಿಂದೆ ಉಪಮುಖ್ಯಮಂತ್ರಿಯಾಗಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ‘ಬ್ರ್ಯಾಂಡ್ ಬೆಂಗಳೂರು’ ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಘೋಷಿಸಿದ್ದರು. ಕಳೆದ ಮೂರು ವರ್ಷಗಳಿಂದ ರಾಜಧಾನಿಯ ಉಸ್ತುವಾರಿಯನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬಂದಿರುವ ಅವರ ಅದೇ ಸಚಿವ ಖಾತೆಯ ಮೇಲೆ ಈಗ ಸ್ವಪಕ್ಷದ ಹಿರಿಯ ನಾಯಕರ ಕಣ್ಣು ಬಿದ್ದಿದೆ. ಡಿಕೆಶಿ ಅವರು ಮುಖ್ಯಮಂತ್ರಿಯಾದ ಮೇಲೂ ಈ ಪ್ರಭಾವಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡರೆ, ಅದನ್ನು ಪಕ್ಷದ…

Read More