TOP NEWS
You Are Being Sacrificed for Politics Protect Your Own Livelihood CM DK Shivakumar Appeal to Farmers

DK Shivakumar: ರೈತರಿಗೆ ಸಿಎಂ ವಿಶೇಷ ಮನವಿ, ರಾಜಕೀಯಕ್ಕೆ ಬಲಿ ಆಗಬೇಡಿ ಎಂದ ಡಿಕೆಶಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರತಿಭಟನಾ ನಿರತ ರೈತರಲ್ಲಿ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೈತರು ತಮ್ಮ ಧರಣಿ ಹಾಗೂ ಹೋರಾಟಗಳನ್ನು ಕೈಬಿಟ್ಟು ಸ್ವಂತ ಬದುಕನ್ನು ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಕೋರಿದರು. ಕೆಲವು ರಾಜಕೀಯ ಹಿತಾಸಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ ರೈತರನ್ನು ದಾಳವಾಗಿ ಬಳಸಿ ಬಲಿ ಕೊಡುತ್ತಿವೆ, ಹೀಗಾಗಿ ಅನ್ನದಾತರು ಯಾರದ್ದೋ ರಾಜಕೀಯಕ್ಕೆ ಬಲಿಯಾಗಬಾರದು ಎಂದು ಎಚ್ಚರಿಸಿದರು. ಬಿಡದಿ ಯೋಜನೆ ಕುರಿತು ಪರಿಶೀಲಿಸಲು…

Read More
Will Not Acquire Land from Farmers Forcibly CM DK Shivakumar

DK Shivakumar: ರೈತರಿಂದ ಬಲವಂತವಾಗಿ ಜಮೀನು ಪಡೆಯಲ್ಲ: ಸಿಎಂ

ಬೆಂಗಳೂರು: “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸರ್ಕಾರವು ಯಾವುದೇ ರೈತರಿಂದ ಬಲವಂತವಾಗಿ ಜಮೀನು ಪಡೆಯುವುದಿಲ್ಲ. ಸ್ವಇಚ್ಛೆಯಿಂದ ಮುಂದೆ ಬಂದು ಭೂಮಿ ಕೊಟ್ಟವರಿಗೆ ಪರಿಹಾರ ನೀಡುತ್ತೇವೆ. ಈ ವಿಚಾರದಲ್ಲಿ ರೈತರ ಅಹವಾಲು, ಅಭಿಪ್ರಾಯ ಪಡೆಯಲು ಸಮಿತಿ ರಚಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಯಾವ ಪ್ರತಿಭಟನೆ ಅಗತ್ಯವಿಲ್ಲ, ನಿಮ್ಮ ಜಮೀನಿನಲ್ಲಿ ನೆಮ್ಮದಿಯಾಗಿರಿ “ಯಾರ ಆಸ್ತಿಯನ್ನು ನಾವು ಬಲವಂತವಾಗಿ ಪಡೆಯುವುದಿಲ್ಲ. ಜಮೀನು ನೀಡಲು ಇಷ್ಟವಿಲ್ಲದವರು ನೆಮ್ಮದಿಯಾಗಿ ತಮ್ಮ ಜಮೀನಿನಲ್ಲಿ ಇರಬಹುದು. ಯಾವ ಧರಣಿ, ಪ್ರತಿಭಟನೆ…

Read More
Why Attack Officials If There a Mistake Beat Me CM DK Shivakumar

DK Shivakumar: ಬಿಡದಿ ಯೋಜನೆ ಕುರಿತು ಸಿಎಂ ಡಿಕೆಶಿ ಸ್ಪಷ್ಟನೆ: ರೈತರಿಗೆ ಬಲವಂತವಿಲ್ಲ, ಯೋಜನೆಯ ಪರಿಶೀಲನೆಗೆ ಸಮಿತಿ ರಚನೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಮತ್ತು ಪ್ರತಿಭಟನೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ತೀವ್ರ ಬೇಸರ ಮತ್ತು ಭಾವುಕತೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿಯಲ್ಲಿ ಅಧಿಕಾರಿಗಳಿಗೆ ತೊಂದರೆ ಕೊಟ್ಟಿರುವುದು ತಮಗೆ ತೀವ್ರ ನೋವುಂಟು ಮಾಡಿದೆ ಎಂದರು. ತಪ್ಪು ನಡೆದಿದ್ದರೆ ತಮಗೆ ಪೊರಕೆಯಿಂದ ಹೊಡೆಯಲಿ, ತಾವು ಅದಕ್ಕೆ ಸಿದ್ಧರಿದ್ದಾರೆ, ಆದರೆ ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುವುದು ಸರಿಯಲ್ಲ ಎಂದು…

Read More
congress MLA HC balakrishna open challenge to HD kumaraswamy come and promise in dharmasthala temple

Bidadi Township: ಬಿಡದಿ ಸ್ಮಾರ್ಟ್ ಟೌನ್‌ಶಿಪ್ ವಿವಾದಕ್ಕೆ ಆಣೆ-ಪ್ರಮಾಣದ ಟ್ವಿಸ್ಟ್: ಕುಮಾರಸ್ವಾಮಿಗೆ ಧರ್ಮಸ್ಥಳ ಸವಾಲು ಹಾಕಿದ ಶಾಸಕ ಎಚ್.ಸಿ. ಬಾಲಕೃಷ್ಣ!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಿಡದಿ ಸ್ಮಾರ್ಟ್ ಟೌನ್‌ಶಿಪ್ (Bidadi Township) ಯೋಜನೆಯ ಸುತ್ತಲಿನ ರಾಜಕೀಯ ಜಿದ್ದಾಜಿದ್ದಿ ಇದೀಗ ಆಣೆ-ಪ್ರಮಾಣದ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವಿನ ಪತ್ರ ಸಮರ ಮತ್ತು ಸವಾಲುಗಳ ಬೆನ್ನಲ್ಲೇ, ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಜೆಡಿಎಸ್ ನಾಯಕನಿಗೆ ಹೊಸ ಸವಾಲೊಂದನ್ನು ಎಸೆದಿದ್ದಾರೆ. ಬಿಡದಿ ಟೌನ್‌ಶಿಪ್ ನಿಮ್ಮದೇ ಕನಸಿನ ಕೂಸು ಹೌದೋ ಅಲ್ವೋ ಎಂಬುದನ್ನು ಧರ್ಮಸ್ಥಳದ ಮಂಜುನಾಥ…

Read More
dk shivakumar slams opposition leaders regarding Bidadi township

DK Shivakumar: ಕುಮಾರಸ್ವಾಮಿ ವಿರುದ್ಧ ಸಿಎಂ ಡಿಕೆಶಿ ವಾಗ್ದಾಳಿ: ‘ಭೂಮಿ ನೋಟಿಫೈ ಮಾಡಿದ್ದೇ ಜೆಡಿಎಸ್, ಈಗ ನಾಟಕ ಆಡುತ್ತಿದ್ದಾರೆ’

ಬೆಂಗಳೂರು: ಬಿಡದಿ ಭಾಗದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ನಡೆಯುತ್ತಿರುವ ಜಮೀನು ಸ್ವಾಧೀನ ಪ್ರಕ್ರಿಯೆ ಹಾಗೂ ಇದರ ವಿರುದ್ಧ ಜೆಡಿಎಸ್ ಹಮ್ಮಿಕೊಂಡಿರುವ ಹೋರಾಟದ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಟೀಕೆಗಳಿಗೆ ಕಡಕ್ ಕೌಂಟರ್ ನೀಡಿರುವ ಸಿಎಂ, ವಿರೋಧ ಪಕ್ಷಗಳು ಕೇವಲ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ಇಡೀ ವಿಷಯವನ್ನು ವಿವಾದ ಮಾಡುತ್ತಿವೆ ಎಂದು ಜರೆದಿದ್ದಾರೆ. ಕುಮಾರಸ್ವಾಮಿ ಆಧಾರ ರಹಿತ ಆರೋಪ ಬಿಡದಿ ಜಮೀನು ವಿಚಾರದಲ್ಲಿ ಕುಮಾರಸ್ವಾಮಿ…

Read More
bidadi township jds demands cancellation

Bidadi Township: ಬಿಡದಿ ಸ್ಮಾರ್ಟ್ ಸಿಟಿ ಹೆಸರಲ್ಲಿ ಮಹಾ ಲೂಟಿ, ಸಿಎಂ ಹಠಕ್ಕೆ ರೈತರು ಬಲಿ?

ಬೆಂಗಳೂರು: ರಾಮನಗರದ ಬಿಡದಿ (Bidadi Township) ಹಾಗೂ ಹಾರೋಹಳ್ಳಿ ಭಾಗದ ಹಸಿರು ಕೃಷಿ ಭೂಮಿಯನ್ನು ವಶಕ್ಕೆ ಪಡೆಯಲು ಹೊರಡಿಸಲಾಗಿರುವ ಅಂತಿಮ ಭೂಸ್ವಾಧೀನ ನೋಟಿಫಿಕೇಶನ್ ಅನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಜೆಡಿಎಸ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಸಂಬಂಧ ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಎಚ್.ಎಂ. ರಮೇಶ್‌ಗೌಡ ನೇತೃತ್ವದ ಜೆಡಿಎಸ್ ಮುಖಂಡರ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಖುದ್ದಾಗಿ ಭೇಟಿ ಮಾಡಿ, ಅನ್ನದಾತರ ಪರವಾಗಿ ಅಧಿಕೃತ ಮನವಿ ಪತ್ರ ಸಲ್ಲಿಸಿದೆ. ಯೋಜನೆ…

Read More
National Security at Risk R Ashok Demands Immediate Halt to Congress SIR Process

R Ashok: ಕಾಂಗ್ರೆಸ್ ವಿರುದ್ಧ ಆರ್‌ ಅಶೋಕ್ ತೀವ್ರ ವಾಗ್ದಾಳಿ: ಬಿಡದಿ ಟೌನ್‌ಶಿಪ್ ಹೆಸರಲ್ಲಿ 2 ಲಕ್ಷ ಮರಗಳಿಗೆ ಕೊಡಲಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ನೀತಿಗಳು ಹಾಗೂ ಕಾನೂನು ಸುವ್ಯವಸ್ಥೆಯ ವೈಫಲ್ಯದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ಹೊರಹಾಕಿದ್ದಾರೆ. ಬಿಡದಿ ಗ್ರೇಟರ್ ಟೌನ್‌ಶಿಪ್ ಹೆಸರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೃಹತ್ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದ್ದು, ಸುಮಾರು 2 ಲಕ್ಷ ಹಸಿರು ಮರಗಳನ್ನು ಧ್ವಂಸ ಮಾಡಲು ಸರ್ಕಾರ ಸಂಚು ರೂಪಿಸಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ…

Read More