BJP petitions for Naseer Ahmed suspension

Naseer Ahmed: ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ, ನಜೀರ್‌ ಅಹ್ಮದ್‌ ಅಮಾನತಿಗೆ ಬಿಜೆಪಿ ಒತ್ತಾಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯ ನಸೀರ್ ಅಹ್ಮದ್ (Naseer Ahmed) ಅವರನ್ನು ತಕ್ಷಣವೇ ಸದನದಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ವಿಧಾನ ಪರಿಷತ್ತಿನಲ್ಲಿ ಇಂದು ವಿಪಕ್ಷ ಬಿಜೆಪಿ ಧರಣಿ ನಡೆಸಿತು.  ಸ್ಪಷ್ಟನೆ ನೀಡಿದ ಅಹ್ಮದ್‌ ನಸೀರ್ ಅಹ್ಮದ್ ಮಾತನಾಡಿ, ಪ್ರಧಾನಿ ಮೋದಿಯವರು ಇಲ್ಲ ಎಂದರೆ ದೇಶ ಇಲ್ಲ ಎಂದು ಬಿಜೆಪಿ ಸದಸ್ಯರು ಹೇಳಿದ್ದರು. ಹೀಗಾಗಿ ನಾನು ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾಗಿ ಸ್ಪಷ್ಟನೆ ನೀಡಿ, ತಾವು ಆಡಿದ ಮಾತಿಗೆ ವಿಷಾದ ವ್ಯಕ್ತಪಡಿಸಿದರು. …

Read More
Bjp asking for resignation of minister timmapura

BJP: ಸದನದ ಬಾವಿಗಿಳಿದು ಬಿಜೆಪಿ ಪ್ರತಿಭಟನೆ, ತಿಮ್ಮಾಪುರ ರಾಜೀನಾಮೆಗೆ ಆಗ್ರಹ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ (BJP) ವಿಧಾನಸಭೆಯಲ್ಲಿಂದು  ಬಾವಿಗಿಳಿದು ಧರಣಿ ನಡೆಸಿದೆ. ಸಚಿವರ ರಾಜೀನಾಮೆಗೆ ಒತ್ತಾಯ ಈ ಸಂದರ್ಭದಲ್ಲಿ   ಅಬಕಾರಿ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಯಿತು. ಈ ವೇಳೆ ಆರ್. ಅಶೋಕ,  ಈ ಹಿಂದೆ  ಮಾಜಿ ಸಚಿವ  ಬಿ. ನಾಗೇಂದ್ರ ಅವರ ವಿರುದ್ಧ ಭ್ರಷ್ಚ್ರಾಚಾರದ ಆರೋಪ ಎದುರಾದಾಗ  ಅವರ ರಾಜೀನಾಮೆಯನ್ನು ಪಡೆದುಕೊಳ್ಳಲಾಯಿತು. ಆದರೆ ತಿಮ್ಮಾಪುರ ಅವರ ರಾಜೀನಾಮೆ ಪಡೆಯಲು  ಹಿಂದೇಟು  ಹಾಕುತ್ತಿದೆ ಎಂದು ಆರೋಪಿಸಿದರು.  ಸಭಾಧ್ಯಕ್ಷ…

Read More
BJP protest against congress over excise scam

BJP: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ, ಅಬಕಾರಿ ಹಗರಣ ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು 6,000 ಕೋಟಿ ರೂ.ಗಳ ಅಬಕಾರಿ ಹಗರಣದಲ್ಲಿ ಭಾಗಿಯಾಗಿದೆ ಎಂದು ಭಾರತೀಯ ಜನತಾ ಪಕ್ಷ (BJP) ಆರೋಪ ಮಾಡಿದ್ದು, ಈ ವಿಚಾರವಾಗಿ ವಿಧಾನಸಭೆಯೊಳಗೆ ಪ್ರತಿಭಟನೆ ನಡೆಸಲಾಗಿದೆ. ಶಾಸಕರನ್ನ ಅಮಾನತು ಮಾಡುವಂತೆ ಬಿಜೆಪಿ ಒತ್ತಾಯಕಳೆದ ವಾರ ವಿಧಾನಸಭೆಯ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಉಂಟಾದ ಗದ್ದಲದ ನಡುವೆ, ಕೆಲವು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜನತಾ ದಳ ವಿಧಾನಸಭಾ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ…

Read More
bjp announced Nitin Nabin as new president of party

Nitin Nabin: ನಿತಿನ್ ನಬಿನ್ ಅವರನ್ನು ಅಧ್ಯಕ್ಷರಾಗಿ ಅಧಿಕೃತ ಘೋಷಣೆ ಮಾಡಿದ ಬಿಜೆಪಿ

ನವದೆಹಲಿ: ಇಂದು ದೆಹಲಿಯಲ್ಲಿನ ಭಾರತೀಯ ಜನತ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನಿತಿನ್ ನಬಿನ್ (Nitin Nabin) ಅವರನ್ನು ಔಪಚಾರಿಕವಾಗಿ ಘೋಷಣೆ ಮಾಡಲಾಗಿದೆ. ಅಧ್ಯಕ್ಷ ಹುದ್ದೆ ಅಲಂಕರಿಸಿದ ಕಿರಿಯ ವ್ಯಕ್ತಿ ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಾಂಸ್ಥಿಕ ಚುನಾವಣೆಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಸಾಂಸ್ಥಿಕ ಚುನಾವಣೆಯ ಫಲಿತಾಂಶಗಳನ್ನು ಘೋಷಣೆ ಮಾಡಿದ್ದು,  ಮತ್ತು ಪಕ್ಷದ ಉನ್ನತ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿ 45 ವರ್ಷದ ನಿತಿನ್‌ ನಬಿನ್ ಅವರಿಗೆ ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ….

Read More
BJPs new president will be formally announced tomorrow

BJP: ನಾಳೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ಹೆಸರು ಘೋಷಣೆ

ನವದೆಹಲಿ: ಬಿಜೆಪಿಯ (BJP) ಮುಂದಿನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ನಾಳೆ ಅಧ್ಯಕ್ಷರ ಹೆಸರನ್ನ ಬಹಿರಂಗಪಡಿಸಲಾಗುತ್ತದೆ ಎನ್ನಲಾಗಿದೆ. ಅತಿಹೆಚ್ಚು ಬೆಂಬಲ ಪಡೆದ ನಿತಿನ್‌ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕ ನಿತಿನ್ ನಬಿನ್ (46) ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿದೆ. ಇದರಿಂದಾಗಿ ಅವರು ಅಧ್ಯಕ್ಷರಾಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಈ ನಾಮಪತ್ರಗಳ ಪೈಕಿ 36 ನಾಮಪತ್ರಗಳು ವಿವಿಧ ರಾಜ್ಯಗಳಿಂದ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸಲ್ಲಿಕೆಯಾಗಿದ್ದರೆ, ಒಂದು ನಾಮಪತ್ರವನ್ನು ಬಿಜೆಪಿ ರಾಷ್ಟ್ರೀಯ…

Read More
special puje in gadag temple by bjp leaders

Gadag: ಸೋಮನಾಥ ದೇವಾಲಯ ದಾಳಿಗೆ ಸಾವಿರ ವರ್ಷ, ಹಿಂದೂ ಧರ್ಮ ಉಳಿಸುವಂತೆ ಕರೆ

ಗದಗ: ಗುಜರಾತ್ ನ ಸೋಮನಾಥ ದೇವಾಲಯದ ಮೇಲಿನ ದಾಳಿಗೆ ಒಂದು ಸಾವಿರ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗದಗದ (Gadag) ತ್ರಿಕೂಟೇಶ್ವರ ದೇವಾಲಯದಲ್ಲಿಂದು ಬಿಜೆಪಿ ಕಾರ್ಯಕರ್ತರು ಶಿವನಾಮ ಸ್ಮರಣೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.   ತ್ರಿಕೂಟೇಶ್ವರನಿಗೆ ವಿಶೇಷ ಪೂಜೆ ಸೋಮನಾಥ ದೇವಾಲಯದ ಮೇಲೆ ಮೊಹಮದ್ ಘಜನಿ ದಾಳಿ ನಡೆಸಿ ಇಂದಿಗೆ ಸಾವಿರ ವರ್ಷ ಕಳೆದಿದ್ದು, ಅಂದಿನ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರ ಪ್ರಸಾದ್ ತಮ್ಮ ಸ್ವಂತ ಹಣ ಹಾಗೂ ಜನತೆಯ ಸಹಕಾರದಿಂದ ದಾಳಿಗೊಳಗಾಗಿದ್ದ ದೇವಾಲಯಗಳ…

Read More
dcm dk shivakumar accepts meeting satish jarkiholi

DK Shivakumar: ಸತೀಶ್‌ ಜಾರಕಿಹೊಳಿ ಅವರನ್ನ ಭೇಟಿ ಆಗಿದ್ದು ಸತ್ಯ ಎಂದ ಡಿಸಿಎಂ ಡಿಕೆಶಿ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟನೆ ನೀಡಿದ್ದಾರೆ. ಪ್ರತಿಪಕ್ಷದ ಆರೋಪಗಳಿಗೆ ಉತ್ತರ ಕೊಡುತ್ತೇವೆಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಕುರಿತು ಉಪಲೋಕಾಯುಕ್ತರ ವರದಿಯನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಲಿ ಎಂದು ಹೇಳಿದ್ದಾರೆ.  ಅಲ್ಲದೇ, ಅಧಿವೇಶನದಲ್ಲಿ ಬಿಜೆಪಿ ನಾಯಕರ ಎಲ್ಲಾ ಆರೋಪಗಳಿಗೆ ಉತ್ತರ ನೀಡುವುದಾಗಿ ತಿರುಗೇಟು ಕೊಟ್ಟಿದ್ದಾರೆ. ಇನ್ನು ರಾಜ್ಯಕ್ಕೆ ಸಂಬಂಧಪಟ್ಟ ಅನೇಕ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ…

Read More