Pradeep Eshwar: ಎಐಸಿಸಿ ಅಧ್ಯಕ್ಷ ಖರ್ಗೆಗೆ ಏಕವಚನ ಬಳಕೆ: ಬಿ.ಎಲ್. ಸಂತೋಷ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಕಿಡಿ
ಬೆಂಗಳೂರು,: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಬಳಸಿರುವ ಪದಬಳಕೆ ಹಾಗೂ ಏಕವಚನದ ಮಾತುಗಳನ್ನು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ತೀವ್ರವಾಗಿ ಖಂಡಿಸಿದ್ದಾರೆ. ಹಿರಿಯ ರಾಜಕಾರಣಿಗೆ ನೀಡಬೇಕಾದ ಕನಿಷ್ಠ ಗೌರವ ನೀಡದಿರುವುದು ಅವರ ನಡವಳಿಕೆಯನ್ನು ತೋರಿಸುತ್ತದೆ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಭ್ಯತೆ ಹಾಗೂ ಸಂಸ್ಕಾರದ ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲ ವಿಧಾನಸೌಧದ ಕೆಂಗಲ್ ಗೇಟ್ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರದೀಪ್…
