Davanagere: ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಶಾಮನೂರು ವಿಜಯೋತ್ಸವ: ಅಜ್ಜನ ಹಾದಿಯಲ್ಲೇ ಅಜಾತಶತ್ರು ಸಂಕಲ್ಪ, ಕಾಂಗ್ರೆಸ್ ಬಣ ರಾಜಕೀಯ ಚರ್ಚೆ ಚುರುಕು!
ದಾವಣಗೆರೆ: ದಾವಣಗೆರೆ (Davanagere) ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಸುಮಾರು 7,000 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿರುವ ಸಮರ್ಥ್ ಮಲ್ಲಿಕಾರ್ಜುನ್ (ಶಾಮನೂರು), ಶಾಸಕರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಜನರ ಮುಂದೆ ಬಂದಿದ್ದಾರೆ. ಅಜ್ಜ ಶಾಮನೂರು ಶಿವಶಂಕರಪ್ಪ ಅವರಂತೆಯೇ ಸರ್ವರನ್ನೂ ಪ್ರೀತಿಸುವ ‘ಅಜಾತಶತ್ರು’ ನಾಯಕನಾಗಿ ಹೊರಹೊಮ್ಮುವುದು ನನ್ನ ಆಶಯ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸದಾ ಲಭ್ಯವಿರುವ ಶಾಸಕ: ಕ್ಷೇತ್ರದ ಜನರ ಮೇಲೆ ಅತೀವ ವಿಶ್ವಾಸ ವ್ಯಕ್ತಪಡಿಸಿದ ಸಮರ್ಥ್, “ನನ್ನ ಮೇಲೆ ನಂಬಿಕೆಯಿಟ್ಟು ಮತ ನೀಡಿದ ಜನತೆಗೆ…
