Congress: ರಾಜ್ಯ ರಾಜಕಾರಣದಲ್ಲಿ ಮೇ ‘ಸರ್ಜರಿ’ ಸಂಚಲನ: 13 ಸಚಿವರಿಗೆ ಕೊಕ್?
ಬೆಂಗಳೂರು: ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮೇ ತಿಂಗಳು ಭಾರಿ ಏರುಪೇರುಗಳಿಗೆ ಸಾಕ್ಷಿಯಾಗುವ ಲಕ್ಷಣಗಳು ದಟ್ಟವಾಗಿವೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ (Congress) ಮೂರು ವರ್ಷ ತುಂಬುತ್ತಿರುವ ಈ ಸಂದರ್ಭದಲ್ಲಿ, ಸಚಿವ ಸಂಪುಟದ ಸಮಗ್ರ ಪುನರ್ರಚನೆಗೆ ಹೈಕಮಾಂಡ್ ಸ್ಕೆಚ್ ಹಾಕಿದೆ ಎನ್ನಲಾಗುತ್ತಿದೆ. ಮೇ 15ರೊಳಗೆ ರಾಜ್ಯ ಸಚಿವ ಸಂಪುಟದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗಲಿವೆ ಎಂಬ ಸುದ್ದಿಗೆ ಸಚಿವ ಶಿವಾನಂದ ಪಾಟೀಲ್ ಅವರ “ಹೊಸಬರಿಗಾಗಿ ಸ್ಥಾನ ತ್ಯಾಗಕ್ಕೆ ಸಿದ್ಧ” ಎಂಬ ಹೇಳಿಕೆ ಈಗ ಮತ್ತಷ್ಟು ಪುಷ್ಟಿ ನೀಡಿದೆ. ಪಂಚರಾಜ್ಯ ಫಲಿತಾಂಶದ ಬಳಿಕ…
