Good News: ದೆಹಲಿಯಲ್ಲಿ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಹೊಸ ಆಸರೆ: ₹80 ಕೋಟಿ ವೆಚ್ಚದ ‘ಕರ್ನಾಟಕ ಭವನ-4’ ಕ್ಕೆ ಕ್ಯಾಬಿನೆಟ್ ಅಸ್ತು
ಬೆಂಗಳೂರು: ದೇಶದ ರಾಜಧಾನಿ ದೆಹಲಿಗೆ ತೆರಳಿ ಯುಪಿಎಸ್ಸಿ ಪರೀಕ್ಷೆಗಳಿಗೆ ತರಬೇತಿ ಪಡೆಯುವ ರಾಜ್ಯದ ಪ್ರತಿಭಾವಂತ ಯುವಜನತೆಗೆ ಸರ್ಕಾರ ಸಿಹಿ ಸುದ್ದಿ (Good News) ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನವದೆಹಲಿಯಲ್ಲಿ ಹೊಸದಾಗಿ ‘ಕರ್ನಾಟಕ ಭವನ-4’ ಕಟ್ಟಡವನ್ನು ನಿರ್ಮಿಸಲು ಹಸಿರು ನಿಶಾನೆ ನೀಡಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರದ ನಿರ್ಧಾರ ಐಎಎಸ್ ಮತ್ತು ಐಪಿಎಸ್ನಂತಹ ಉನ್ನತ ಹುದ್ದೆಗಳ ಕನಸು ಹೊತ್ತು ದೆಹಲಿಯಲ್ಲಿ ಬೀಡುಬಿಡುವ ಕರ್ನಾಟಕದ…
