Cauvery Water: ಕಾವೇರಿ ಸಂಕಷ್ಟ: ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕೈಕೊಟ್ಟು ಭೀಕರ ಬರಗಾಲದ ನೆರಳು ಆವರಿಸುತ್ತಿರುವ ಬೆನ್ನಲ್ಲೇ, ಕರ್ನಾಟಕಕ್ಕೆ ಮತ್ತೊಂದು (Cauvery Water) ದೊಡ್ಡ ಆಘಾತ ಎದುರಾಗಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ, ಮುಂದಿನ 15 ದಿನಗಳ ಕಾಲ ನೆರೆ ರಾಜ್ಯ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿದೆ. ‘ನೀರು ಬಿಡಲು ಸಾಧ್ಯವೇ ಇಲ್ಲ’ ಎಂದ ಸಚಿವ ರಾಮಲಿಂಗಾರೆಡ್ಡಿ: CWRC ಆದೇಶದ ಕುರಿತು ನವದೆಹಲಿಯಲ್ಲಿ ತೀವ್ರ ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ…
