Hanur Shootout: ಹನೂರು ಫೈರಿಂಗ್ ದುರಂತ: ಮೃತರ ಕುಟುಂಬಸ್ಥರ ಒಪ್ಪಿಗೆಯಿಲ್ಲದೆ ಪೋಸ್ಟ್ಮಾರ್ಟಮ್?
ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು (Hanur Shootout) ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಆಂಥೋನಿ, ಪೀಟರ್ ಹಾಗೂ ಕುಮಾರ್ ಬಲಿಯಾದ ಭೀಕರ ಘಟನೆ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಕುಟುಂಬಸ್ಥರ ತೀವ್ರ ವಿರೋಧದ ನಡುವೆಯೂ ಪೊಲೀಸರು ಹಾಗೂ ಜಿಲ್ಲಾಡಳಿತ ಮೋಸದಿಂದ ಮರಣೋತ್ತರ ಪರೀಕ್ಷೆ (Post-Mortem) ಪೂರ್ಣಗೊಳಿಸಿವೆ ಎಂದು ಮೃತ ಪೀಟರ್ ಸಹೋದರಿ ಹಾಗೂ ವೃತ್ತಿಯಲ್ಲಿ ನರ್ಸ್ ಆಗಿರುವ ಮಾರ್ಗರೇಟ್ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರ ಮೇಲೆ ಗಂಭೀರ ಆರೋಪ ಉನ್ನತ ಅಧಿಕಾರಿಗಳು…
