CRIME: ಕೇರಳ ಬಾಲಕಿ ನಾಪತ್ತೆ ಪ್ರಕರಣ, ಮೃತದೇಹ ಪತ್ತೆ
ಚಿಕ್ಕಮಗಳೂರು: ದತ್ತಪೀಠದ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮಂಗಳವಾರ ನಾಪತ್ತೆಯಾಗಿದ್ದ ಕೇರಳ ಮೂಲದ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ (15) ಅವರ ಮೃತದೇಹ ಶುಕ್ರವಾರ (Crime) ಪತ್ತೆಯಾಗಿದೆ. ಅರಿಶಿನಗುಪ್ಪೆ ಬೆಟ್ಟದ ಸಾಲಿನ ಸಾವಿರಾರು ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಪತ್ತೆಯಾಗಿದ್ದು, ಇದರೊಂದಿಗೆ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸುದೀರ್ಘ ಶೋಧ ಕಾರ್ಯ ಅಂತ್ಯಗೊಂಡಿದೆ. ಪೋಷಕರ ಜೊತೆ ಬಂದಿದ್ದ ಬಾಲಕಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಶ್ರೀನಂದಾ ಅವರು ತಮ್ಮ ಕುಟುಂಬದ ಸುಮಾರು 40 ಮಂದಿ ಸಂಬಂಧಿಕರ ಜೊತೆ ಪ್ರವಾಸಕ್ಕೆ…
