TOP NEWS
the two goddess who are behind dk shivakumar strength

DK Shivakumar: ಡಿಕೆಶಿ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ದಲಿತ ಸಂಘಟನೆಗಳ ಬಹಿರಂಗ ಬಂಡಾಯ

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ತಿರುವು ಸಿಗುತ್ತಿದ್ದು, ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಅವರ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ (DK Shivakumar) ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಪ್ರಮುಖ ರಾಜಕೀಯ ಸ್ಥಿತ್ಯಂತರದ ನಡುವೆ, ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಯಶಸ್ಸಿನ ಹಿಂದೆ ಕನಕಪುರದ ದೊಡ್ಡಲಹಳ್ಳಿಯಲ್ಲಿರುವ ಅವರ ಮನೆದೇವರಾದ ಕೆಂಕೇರಮ್ಮ ಹಾಗೂ…

Read More
astrologer prediction about dk shivakumar cm post

DK Shivakumar: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹೈಡ್ರಾಮಾ: ಅಂದು ಜ್ಯೋತಿಷಿಗಳು ನುಡಿದಿದ್ದ ಭವಿಷ್ಯ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಹೈವೋಲ್ಟೇಜ್ ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಿಂದ ಕೆಳಗಿಳಿದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸಿಎಂ ಕುರ್ಚಿ ಏರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈ ಭಾರಿ ಸಂಚಲನದ ನಡುವೆಯೇ, ಹಿಂದೆ ಪ್ರಮುಖ ಜ್ಯೋತಿಷಿಗಳು ರಾಜ್ಯದ ರಾಜಕೀಯ ಭವಿಷ್ಯದ ಕುರಿತು ನುಡಿದಿದ್ದ ಮಾತುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರದ ಮುನ್ಸೂಚನೆ ಸಿಗುತ್ತಿದ್ದಂತೆ,…

Read More
congress leader v Deshpande confirms cm Siddaramaiah resignation

Congress: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಖಚಿತಪಡಿಸಿದ ದೇಶಪಾಂಡೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಷಣಕ್ಕೂ ನಾಟಕೀಯ (Congress) ಬೆಳವಣಿಗೆಗಳು ಜರುಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ಈಗ ಹೆಚ್ಚೂ ಕಡಿಮೆ ಅಧಿಕೃತಗೊಂಡಿದೆ. ಇದುವರೆಗೆ ಕೇವಲ ಊಹಾಪೋಹವಾಗಿದ್ದ ರಾಜೀನಾಮೆ ಸುದ್ದಿಗೆ ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ಅವರು ಮಾಧ್ಯಮಗಳ ಮುಂದೆ ಸ್ಫೋಟಕ ಸತ್ಯ ಬಿಚ್ಚಿಡುವ ಮೂಲಕ ಅಧಿಕೃತ ಮುದ್ರೆ ಒತ್ತಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೆಹಲಿಯಲ್ಲೇ ಹೈಕಮಾಂಡ್ ಮುಂದೆ ತಿಳಿಸಿ ಬಂದಿದ್ದಾರೆ ಎಂದು ದೇಶಪಾಂಡೆ ಹೇಳಿರುವುದು ಭಾರಿ ಸಂಚಲನ…

Read More
CM Change Row siddaramaiah is not ready for national politics

CM Change Row: ರಾಷ್ಟ್ರ ರಾಜಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಒಲ್ಲೆ: ರಾಹುಲ್ ಗಾಂಧಿ ನೀಡಿದ್ದ ರಾಜ್ಯಸಭಾ ಆಫರ್ ನಿರಾಕರಣೆ

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಭಾರೀ ಚರ್ಚೆಯಲ್ಲಿದ್ದ ಮುಖ್ಯಮಂತ್ರಿ (CM Change Row) ಬದಲಾವಣೆ ವಿಚಾರ ಕೊನೆಗೂ ಒಂದು ತಾರ್ಕಿಕ ಅಂತ್ಯಕ್ಕೆ ಬಂದಂತಿದೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈಕಮಾಂಡ್‌ನ ಮ್ಯಾರಥಾನ್ ಸಭೆಯಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ವಿಚಾರ ಬಹುತೇಕ ಇತ್ಯರ್ಥವಾಗಿದೆ ಎನ್ನಲಾಗುತ್ತಿದೆ. ಆದರೆ, ಈ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಸುಗಮಗೊಳಿಸಲು ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯನವರಿಗೆ ನೀಡಿದ್ದ ರಾಜ್ಯಸಭಾ ಸ್ಥಾನದ ಆಫರ್ ಅನ್ನು ಸಿಎಂ ಸಾರಾಸಗಟಾಗಿ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ ಅವರು…

Read More
cm siddaramaiah caste census report master stroke

CM Siddaramaiah: ರಾಜೀನಾಮೆ ಕೌಂಟ್‌ಡೌನ್ ನಡುವೆ ಸಿಎಂ ಸಿದ್ದರಾಮಯ್ಯ ‘ಜಾತಿ ಗಣತಿ’ ಬ್ರಹ್ಮಾಸ್ತ್ರ

ಬೆಂಗಳೂರು: ಹೈಕಮಾಂಡ್ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಸ್ಥಾನಕ್ಕೆ ನಾಳೆಯೇ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ರಾಜ್ಯ ರಾಜಕಾರಣದಲ್ಲಿ ತೀವ್ರಗೊಂಡ ಬೆನ್ನಲ್ಲೇ, ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಕೊನೆಯ ಕ್ಷಣದಲ್ಲಿ ‘ಜಾತಿ ಗಣತಿ’ ಎಂಬ ಪ್ರಬಲ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಭಾರಿ ಕುತೂಹಲ ಮೂಡಿಸಿರುವ ಜಾತಿ ಗಣತಿಯ ಮರು ಸಮೀಕ್ಷಾ ವರದಿಯು ಇಂದೇ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿರುವುದು, ಸದ್ಯದ ರಾಜಕೀಯ ಚಿತ್ರಣವನ್ನೇ ಬದಲಾಯಿಸುವ ದಟ್ಟ ಮುನ್ಸೂಚನೆ ನೀಡಿದೆ. ಇಂದು ನಡೆಯುತ್ತಿದೆ ಉನ್ನತ ಮಟ್ಟದ ಸಭೆ…

Read More
Cm siddaramaiah tweets about government developmental work

CM Siddaramaiah: ರಾಜೀನಾಮೆ ವದಂತಿ ಬೆನ್ನಲ್ಲೇ ಆಡಳಿತದ 3 ವರ್ಷದ ಸಾಧನೆ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಈ ಮೂಲಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆಯೇ ಎಂಬ ಹೊಸ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿವೆ. ಏನಿದೆ ಸಿಎಂ ಟ್ವಿಟ್‌ನಲ್ಲಿ? ರಾಜ್ಯದ ಜನರ…

Read More
cm siddaramaiah caste census report master stroke

CM Siddaramaiah: ಉತ್ತರ ಕನ್ನಡ ಕಡಲತೀರದಲ್ಲಿ ಘೋರ ದುರಂತ, ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರ ನದಿಯ ತಟ್ಟೆಹಕ್ಕಲು ಕಡಲ ತೀರದ ಸಮೀಪ ಕಪ್ಪೆಚಿಪ್ಪು ಸಂಗ್ರಹಿಸಲು ಹೋದ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಭೀಕರ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಂತಾಪ ಸೂಚಿಸಿದ್ದಾರೆ. ಈ ಹೃದಯವಿದ್ರಾವಕ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯತೆಯ ಆಧಾರದ ಮೇಲೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿಗಳ ಆರ್ಥಿಕ ಪರಿಹಾರವನ್ನು ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ವಿಷಾದ ವ್ಯಕ್ತಪಡಿಸಿದ ಸಿಎಂ ಈ ದುರದೃಷ್ಟಕರ…

Read More