TOP NEWS
Cm Siddaramaiah social media post about kerala and tamil nadu election

CM Siddaramaiah: ಕೇರಳದಲ್ಲಿ ಕಾಂಗ್ರೆಸ್ ವಿಜಯೋತ್ಸವ: ಪಶ್ಚಿಮ ಬಂಗಾಳದ ಫಲಿತಾಂಶ ಪ್ರಜಾಪ್ರಭುತ್ವದ ಸೋಲು!: ಸಿಎಂ ಸಿದ್ದರಾಮಯ್ಯ

ದಕ್ಷಿಣದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಂತೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಬಿಜೆಪಿಯ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ಇಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿರುವ ಎರಡು ರಾಜ್ಯಗಳ ಮತದಾರರನ್ನು ದೇಶದ ಎಲ್ಲ ಜಾತ್ಯತೀತ ಮತ್ತು ಪ್ರಜಾಪ್ರಭುತ್ವವಾದಿ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪೋಸ್ಟ್‌ ಮಾಡಿದ್ದಾರೆ. ಕೇರಳದಲ್ಲಿ ಉತ್ತಮ ಆಡಳಿತ ಕೊಡಲಿದ್ದೇವೆ ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿರೀಕ್ಷಿತವಾಗಿತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಪ್ರಚಾರದ ಕಾರ್ಯತಂತ್ರದ ವರೆಗೆ ಎಲ್ಲವನ್ನೂ ಆ…

Read More
Congress cabinet expansion who will get minister post

Congress: ರಾಜ್ಯ ರಾಜಕಾರಣದಲ್ಲಿ ಮೇ ‘ಸರ್ಜರಿ’ ಸಂಚಲನ: 13 ಸಚಿವರಿಗೆ ಕೊಕ್?

ಬೆಂಗಳೂರು: ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮೇ ತಿಂಗಳು ಭಾರಿ ಏರುಪೇರುಗಳಿಗೆ ಸಾಕ್ಷಿಯಾಗುವ ಲಕ್ಷಣಗಳು ದಟ್ಟವಾಗಿವೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ (Congress) ಮೂರು ವರ್ಷ ತುಂಬುತ್ತಿರುವ ಈ ಸಂದರ್ಭದಲ್ಲಿ, ಸಚಿವ ಸಂಪುಟದ ಸಮಗ್ರ ಪುನರ್‌ರಚನೆಗೆ ಹೈಕಮಾಂಡ್ ಸ್ಕೆಚ್ ಹಾಕಿದೆ ಎನ್ನಲಾಗುತ್ತಿದೆ. ಮೇ 15ರೊಳಗೆ ರಾಜ್ಯ ಸಚಿವ ಸಂಪುಟದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗಲಿವೆ ಎಂಬ ಸುದ್ದಿಗೆ ಸಚಿವ ಶಿವಾನಂದ ಪಾಟೀಲ್ ಅವರ “ಹೊಸಬರಿಗಾಗಿ ಸ್ಥಾನ ತ್ಯಾಗಕ್ಕೆ ಸಿದ್ಧ” ಎಂಬ ಹೇಳಿಕೆ ಈಗ ಮತ್ತಷ್ಟು ಪುಷ್ಟಿ ನೀಡಿದೆ. ಪಂಚರಾಜ್ಯ ಫಲಿತಾಂಶದ ಬಳಿಕ…

Read More
CM Siddaramaiah meetings with senior officers

CM Siddaramaiah: ವಿಧಾನಸೌಧದಲ್ಲಿ ಅಧಿಕಾರಿಗಳ ಬೆವರಿಳಿಸಿದ ಸಿಎಂ ಸಿದ್ದರಾಮಯ್ಯ: ಬಜೆಟ್ ಘೋಷಣೆ ಜಾರಿಗೆ ಕಟ್ಟುನಿಟ್ಟಿನ ಗಡುವು

ಬೆಂಗಳೂರು: ರಾಜ್ಯದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆಸಿದರು. ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿದ ಸಿಎಂ, ಬಜೆಟ್ ಘೋಷಣೆಗಳ ಅನುಷ್ಠಾನದಲ್ಲಿ ವಿಳಂಬ ಮಾಡುತ್ತಿರುವ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಕೇವಲ ಕಾಗದದ ಮೇಲೆ ಉಳಿಯಬಾರದು, ಅವು ನಿಗದಿತ ಅವಧಿಯೊಳಗೆ ಜನರಿಗೆ ತಲುಪಬೇಕು ಎಂದು ಕಟ್ಟುನಿಟ್ಟಿನ…

Read More
Be prepare for rainy season cm Siddaramaiah orders to GBA

CM Siddaramaiah: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ, ಇಂಜಿನಿಯರ್ ಅಮಾನತಿಗೆ ಸೂಚನೆ

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು. ಜಿಬಿಎ ಅಧಿಕಾರಿಗಳ ಸಭೆ ಮಾಡಿದ ಸಿಎಂ ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ಜಿಬಿಎ ಆಯುಕ್ತರುಗಳ ಸಭೆ ಜರುಗಿತು. ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ…

Read More
d sudhkar health crucial dcm and cm visits

D Sudhakar: ಸಚಿವ ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ-ಡಿಸಿಎಂ

ಬೆಂಗಳೂರು: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ (D Sudhakar) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಭಾನುವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಅವರು ವೈದ್ಯರ ತಂಡ ಮತ್ತು ಸಚಿವರ ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದಾರೆ. ಹೆಚ್ಚಾಗಿರುವ ಸೋಂಕು ಸಚಿವ ಡಿ. ಸುಧಾಕರ್ ಅವರಿಗೆ ಇತ್ತೀಚೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ…

Read More
CM Siddaramaiah and Narendra modi special photo viral

CM Siddaramaiah: ಮೋದಿ ಜೊತೆ ಸಿದ್ದರಾಮಯ್ಯ ಸೀಕ್ರೇಟ್‌ ಟಾಕ್‌, ಫೋಟೋ ವೈರಲ್

ಮಂಡ್ಯ: ರಾಜ್ಯ ರಾಜಕಾರಣದ ಇಬ್ಬರು ಧ್ರುವಗಳಂತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಆಪ್ತ ಸಮಾಲೋಚನೆಯ ಫೋಟೋವೊಂದು ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆದ ‘ಶ್ರೀಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ ಕಾರ್ಯಕ್ರಮದ ವೇಳೆ ಈ ಅಪರೂಪದ ದೃಶ್ಯ ಕಂಡುಬಂದಿದೆ. ಕುತೂಹಲ ಮೂಡಿಸಿದ ಮೋದಿ ಮಾತು: ಕಾರ್ಯಕ್ರಮಕ್ಕಾಗಿ ಆಗಮಿಸಿದ ಪ್ರಧಾನಿ ಮೋದಿಯವರನ್ನು ಬರಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಪ್ರಧಾನಿಗಳು ಸಿಎಂ…

Read More
CM Siddaramaiah clarification regarding yuvanidhi

CM Siddaramaiah: ಯುವನಿಧಿ ಮಾಶಾಸನ ಸ್ಥಗಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ‘ಯುವನಿಧಿ’ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ನಿರುದ್ಯೋಗಿ ಪದವೀಧರರಿಗೆ ನೀಡಲಾಗುತ್ತಿರುವ ಮಾಶಾಸನವನ್ನು ಸರ್ಕಾರವು ಸ್ಥಗಿತಗೊಳಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಂತಿನ ರೂಪದಲ್ಲಿ ಹಣ  2026-27ನೇ ಸಾಲಿನ ಆಯವ್ಯಯದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಯೋಜನೆಯಡಿ ನೋಂದಾಯಿತರಾಗಿರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಕಂತಿನ ರೂಪದಲ್ಲಿ ಹಣವನ್ನು ನಿಯಮಿತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿಯೂ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ 600 ಕೋಟಿ ರೂಪಾಯಿಗಳ ಬೃಹತ್ ಅನುದಾನವನ್ನು ಮೀಸಲಿಡಲಾಗಿದ್ದು, ಮಾಸಿಕವಾಗಿ ನೀಡುವ…

Read More