BY Vijayendra: ಇಂಧನ ದರ ಏರಿಕೆ: ತೆರಿಗೆ ಕಡಿತಕ್ಕೆ ವಿಜಯೇಂದ್ರ ಒತ್ತಾಯ
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸತತವಾಗಿ ಹೆಚ್ಚುತ್ತಿರುವುದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ನೆರವಾಗಲು ರಾಜ್ಯ ಸರ್ಕಾರವು ತನ್ನ ಪಾಲಿನ ವ್ಯಾಟ್ (ತೆರಿಗೆ) ಅನ್ನು ತಕ್ಷಣವೇ ಕಡಿತಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಹೆಚ್ಚುತ್ತಿರುವುದು ನಿಜವಾದರೂ, ರಾಜ್ಯ ಸರ್ಕಾರ ತೆರಿಗೆ ತಗ್ಗಿಸುವ ಮೂಲಕ ಬೆಲೆ ನಿಯಂತ್ರಣಕ್ಕೆ ಮುಂದಾಗಬೇಕು ಎಂದಿದ್ದಾರೆ….
