TOP NEWS
Cauvery Row Sparks Tension Theatrical Screening of Thalapathy Vijays Jana Nayagan Halted in Karnataka

Jana Nayagan: ಕಾವೇರಿ ವಿವಾದದ ಬಿಸಿ: ಕರ್ನಾಟಕದಲ್ಲಿ ದಳಪತಿ ವಿಜಯ್ ನಟನೆಯ ‘ಜನನಾಯಗನ್’ ಪ್ರದರ್ಶನ ದಿಢೀರ್ ಸ್ಥಗಿತ!

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ ಬೆಂಕಿ ಈಗ ಸಿನಿರಂಗಕ್ಕೂ ವ್ಯಾಪಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (ದಳಪತಿ ವಿಜಯ್) ಅಭಿನಯದ ಜಾಗತಿಕ ಬಾಕ್ಸ್ ಆಫೀಸ್ ಸೂಪರ್ ಹಿಟ್ ಸಿನಿಮಾ ‘ಜನನಾಯಗನ್’ (Jana Nayagan) ಚಿತ್ರದ ಪ್ರದರ್ಶನವನ್ನು ಕರ್ನಾಟಕದ ಚಿತ್ರಮಂದಿರಗಳಲ್ಲಿ ದಿಢೀರ್ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಉದ್ವಿಗ್ನ ವಾತಾವರಣ ಇರುವುದರಿಂದ ಚಿತ್ರ ಪ್ರದರ್ಶನವನ್ನು ನಿಲ್ಲಿಸಲು ಥಿಯೇಟರ್ ಮಾಲೀಕರು ತೀರ್ಮಾನಿಸಿದ್ದಾರೆ. ಮತ್ತೊಂದೆಡೆ, ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಅವರೊಂದಿಗೆ ನಿಗದಿಯಾಗಿದ್ದ ಸಭೆಯನ್ನು ಸದ್ಯದ…

Read More
TN CM Vijay s Bengaluru Visit Likely Deferred DK shivakumar Cites Karnataka Bandh and Rising Tensions

DK Shivakumar: ಕರ್ನಾಟಕ ಬಂದ್ ಎಫೆಕ್ಟ್: ತಮಿಳುನಾಡು ಸಿಎಂ ವಿಜಯ್ ಬೆಂಗಳೂರು ಪ್ರವಾಸ ಮುಂದೂಡುವಂತೆ ಡಿಕೆಶಿ ಮನವಿ!

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಕರ್ನಾಟಕ ಪ್ರವಾಸ ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಆಗಸ್ಟ್ 13 ರಂದು ರಾಜ್ಯಾದ್ಯಂತ ‘ಕರ್ನಾಟಕ ಬಂದ್‌’ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ಉದ್ವಿಗ್ನ ವಾತಾವರಣದಲ್ಲಿ ಬೆಂಗಳೂರಿಗೆ ಬರುವುದು ಬೇಡ ಎಂದು ತಮಿಳುನಾಡು ಸಿಎಮ್‌ಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಮನವಿ ಮಾಡಿದ್ದಾರೆ. ಪ್ರವಾಸ ಮುಂದೂಡಿಕೆಗೆ ಡಿಕೆಶಿ ಸಲಹೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾವೇರಿ ವಿವಾದದ ಕಿಚ್ಚು…

Read More
From Screen Chemistry to Political Fuel Vijay and Trishas Equation Ignites Intense War of Words in Tamil Nadu

Tamil Nadu: ವಿಜಯ್ ಭೇಟಿಯಾಗಿ ಕೇಕ್ ಕತ್ತರಿಸೋದು ತ್ರಿಷಾ ಮಾತ್ರ! ಮುಂದೊಂದು ದಿನ ಅವರೇ ಡಿಸಿಎಂ ಆದ್ರೂ ಅಚ್ಚರಿಯಿಲ್ಲ: ಮಾಜಿ ಸಚಿವ ಉದಯಕುಮಾರ್ ವ್ಯಂಗ್ಯ

ಚೆನ್ನೈ: ತಮಿಳುನಾಡು ಚಿತ್ರರಂಗದ ಸ್ಟಾರ್ ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಮತ್ತು ನಟಿ ತ್ರಿಷಾ (Tamil Nadu) ಅವರ ನಡುವಿನ ಆಪ್ತತೆ ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದಾಗಿನಿಂದಲೂ ಇವರಿಬ್ಬರ ಸಂಬಂಧದ ಕುರಿತು ಹಲವು ವದಂತಿಗಳು ಹರಿದಾಡುತ್ತಿದ್ದು, ಇದೀಗ ರಾಜಕೀಯ ವೇದಿಕೆಯಲ್ಲೇ ಇವರ ಹೆಸರು ಬಹಿರಂಗವಾಗಿ ಪ್ರಸ್ತಾಪವಾಗಿರುವುದು ತಮಿಳುನಾಡಿನಲ್ಲಿ ಹೊಸ ಬಿರುಗಾಳಿ ಎಬ್ಬಿಸಿದೆ. ಎಐಎಡಿಎಂಕೆ (AIADMK) ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ಬಿ. ಉದಯಕುಮಾರ್ ಇವರಿಬ್ಬರ ಆಪ್ತತೆಯನ್ನು…

Read More
CM Joseph Vijay Push for Cauvery Talks Sparks Political Storm in Tamil Nadu

Cauvery: ಕಾವೇರಿ ಸಂಧಾನಕ್ಕೆ ಮುಂದಾದ ಸಿಎಂ ಜೋಸೆಫ್ ವಿಜಯ್; ತಮಿಳುನಾಡಿನಲ್ಲಿ ಎದ್ದ ರಾಜಕೀಯ ಬಿರುಗಾಳಿ!

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ದಶಕಗಳ ಬಳಿಕ ಮಹತ್ವದ (Cauvery) ರಾಜತಾಂತ್ರಿಕ ಬೆಳವಣಿಗೆಯೊಂದು ಆರಂಭವಾಗಿದ್ದು, ಇದು ತಮಿಳುನಾಡು ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಆಗಸ್ಟ್ 3 ರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಕಾವೇರಿ ವಿಚಾರವಾಗಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕಳೆದ 16 ವರ್ಷಗಳಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಆದರೆ,…

Read More
TVK Demands NEET Abolition Actor Vijays Party Launches Scathing Attack on Centre and DMK

TVK: ನೀಟ್ ಪರೀಕ್ಷೆ ರದ್ದತಿಗೆ ತಮಿಳುನಾಡಿನ ಟಿವಿ ಕೆ ಆಗ್ರಹ: ಕೇಂದ್ರ ಮತ್ತು ಡಿಎಂಕೆ ವಿರುದ್ಧ ನಟ ವಿಜಯ್ ಪಕ್ಷ ವಾಗ್ದಾಳಿ

ಚೆನ್ನೈ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ತಮಿಳುನಾಡಿನ ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ನೀಟ್ ವಿರುದ್ಧ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ನಟ, ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ನೇತೃತ್ವದ ಟಿವಿ ಕೆ ಪಕ್ಷವು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸುವುದು ಮಾತ್ರವಲ್ಲದೆ, ಈ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಮಂಗಳವಾರ ಪಟ್ಟು ಹಿಡಿದಿದೆ. ಟಿವಿಕೆ ಹೇಳಿದ್ದೇನು? ದೆಹಲಿಯಲ್ಲಿ ನೀಟ್ ವಿರುದ್ಧ ವಿದ್ಯಾರ್ಥಿಗಳ…

Read More
Fierce in Khaki Thalapathy Vijays Much Awaited Jana Nayagan Sets July Release

Jana Nayagan: ಖಾಕಿ ಉಡುಪಿನಲ್ಲಿ ದಳಪತಿ ವಿಜಯ್ ಖಡಕ್ ಲುಕ್: ಕೊನೆಗೂ ರಿಲೀಸ್ ಡೇಟ್ ಘೋಷಿಸಿದ ‘ಜನನಾಯಗನ್’!

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಹಾಗೂ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ಹಾಗೂ ಅವರ ನಟನೆಯ ಕೊನೆಯ ಚಿತ್ರ ‘ಜನನಾಯಗನ್’ (Jana Nayagan) ಜಾಗತಿಕವಾಗಿ ಬಿಡುಗಡೆಯಾಗುವ ದಿನಾಂಕ ಕೊನೆಗೂ ಅಧಿಕೃತಗೊಂಡಿದೆ. ಚಿತ್ರಮಂದಿರಗಳಲ್ಲಿ ಈ ಸಿನಿಮಾ ಯಾವಾಗ ತೆರೆಕಾಣಬಹುದು ಎಂಬ ಹಲವು ವಾರಗಳ ಊಹಾಪೋಹಗಳಿಗೆ ಚಿತ್ರತಂಡ ಈಗ ತೆರೆ ಎಳೆದಿದೆ. ಜುಲೈ‌ 23ಕ್ಕೆ ಸಿನಿಮಾ ರಿಲೀಸ್ ಸ್ವತಃ ನಟ ಹಾಗೂ ರಾಜಕಾರಣಿಯಾಗಿರುವ ವಿಜಯ್ ಅವರು ಬುಧವಾರದಂದು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಪೋಸ್ಟರ್ ಹಂಚಿಕೊಳ್ಳುವ ಮೂಲಕ, ಚಿತ್ರವು ಜುಲೈ 23,…

Read More
Madras High Court Issues Notice to Tamil Nadu CM Vijay Over Election Petitions Alleging Child Exploitation

CM Vijay: ಸಿಎಂ ವಿಜಯ್ ಗೆಲುವಿಗೆ ಕುತ್ತು?: ಮಕ್ಕಳ ದುರ್ಬಳಕೆ, ಅಫಿಡವಿಟ್ ಸುಳ್ಳು ಮಾಹಿತಿ ಆರೋಪದಡಿ ಮದ್ರಾಸ್ ಹೈಕೋರ್ಟ್‌ನಿಂದ ನೋಟಿಸ್!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ನಾಯಕ ಸಿ. ಜೋಸೆಫ್ ವಿಜಯ್ (CM Vijay) ಅವರ ಚುನಾವಣಾ ಗೆಲುವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರು ಜಯಗಳಿಸಿದ್ದ ಪೆರಂಬೂರ್ ಮತ್ತು ತಿರುಚಿ ಈಸ್ಟ್ ಕ್ಷೇತ್ರಗಳ ಫಲಿತಾಂಶವನ್ನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸರಣಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯಮಂತ್ರಿ ವಿಜಯ್ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ (ECI) ನೋಟಿಸ್…

Read More