TOP NEWS
Congress government sadhana samavesha date changed

Congress: ಸರ್ಕಾರದ ‘ಸಾಧನಾ ಸಮಾವೇಶ’ ಒಂದು ದಿನ ಮುಂಚಿತವಾಗಿ; ನಾನೇ ಸಿಎಂ ಎಂದು ಮತ್ತೆ ಗುಡುಗಿದ ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವಸಂತಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ‘ಸಾಧನಾ ಸಮಾವೇಶ’ದ ಕಾರ್ಯಕ್ರಮದಲ್ಲಿ(Congress) ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಮೇ 20 ರಂದು ನಿಗದಿಯಾಗಿದ್ದ ಬೃಹತ್ ಸಮಾವೇಶವನ್ನು ಈಗ ಒಂದು ದಿನ ಮುಂಚಿತವಾಗಿ ಅಂದರೆ, ಮೇ 19 ರಂದೇ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಮಾವೇಶದ ತಯಾರಿ ಹಾಗೂ ದಿನಾಂಕ ಬದಲಾವಣೆ: ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಈ ಮೆಗಾ ಕಾರ್ಯಕ್ರಮದ ಸಿದ್ಧತೆಗಳನ್ನು ಅವಲೋಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಡಳಿತಾತ್ಮಕ ಹಿತದೃಷ್ಟಿಯಿಂದ ಒಂದು ದಿನ…

Read More
kerala vd satheesan selected as cm from congress high command

Kerala: ಕೇರಳ ಸಿಎಂ ಪಟ್ಟ ವಿ.ಡಿ. ಸತೀಶನ್ ಪಾಲು: ರೇಸ್‌ನಿಂದ ಹಿಂದೆ ಸರಿದ ವೇಣುಗೋಪಾಲ್‌ಗೆ ಎಐಸಿಸಿ ಅಧ್ಯಕ್ಷ ಸ್ಥಾನದ ಆಫರ್?

ತಿರುವನಂತಪುರಂ: ಕೇರಳದ (Kerala) ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಮೂಲಕ ಸಿಎಂ ರೇಸ್‌ನಲ್ಲಿದ್ದ ಕೆ.ಸಿ. ವೇಣುಗೋಪಾಲ್ ಅವರು ಅಂತಿಮ ಕ್ಷಣದಲ್ಲಿ ಹಿಂದೆ ಸರಿದಿದ್ದು, ಅವರಿಗೆ ರಾಷ್ಟ್ರಮಟ್ಟದ ಪ್ರಮುಖ ಜವಾಬ್ದಾರಿಯ ಆಫರ್ ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ವೇಣುಗೋಪಾಲ್‌ಗೆ ಎಐಸಿಸಿ ಅಧ್ಯಕ್ಷ ಪಟ್ಟ? ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಸಿ. ವೇಣುಗೋಪಾಲ್ ಅವರನ್ನು ಸಮಾಧಾನಪಡಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ರೂಪಿಸಿದೆ. ಪ್ರಸ್ತುತ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿ…

Read More
NEET UG Paper Leak CBI Arrests BJP Leader Dinesh Biwal

NEET-UG: ನೀಟ್ ಹಗರಣ, ರಾಜಸ್ಥಾನದಲ್ಲಿ ಬಿಜೆಪಿ ನಾಯಕನ ಬಂಧನ

ಜೈಪುರ: ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ನೀಟ್ (NEET-UG) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ರಾಜಸ್ಥಾನದ ಜಮ್ವಾ ರಾಮಗಢದ ಬಿಜೆಪಿ ಕಾರ್ಯಕರ್ತ ದಿನೇಶ್ ಬಿವಾಲ್ ಮತ್ತು ಆತನ ಸಹೋದರ ಮಾಂಗಿಲಾಲ್ ಬಿವಾಲ್ ಎಂಬುವವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ಈ ಬೆಳವಣಿಗೆಯು ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ. ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡವು (SOG) ಮೊದಲು ಇವರನ್ನು ವಶಕ್ಕೆ ಪಡೆದಿತ್ತು, ನಂತರ ಪ್ರಕರಣದ…

Read More
kerala congress poster against priyanka and rahul gandhi in Wayanad

Kerala: ರಾಹುಲ್-ಪ್ರಿಯಾಂಕಾ ವಿರುದ್ಧ ತಿರುಗಿ ಬಿದ್ದ ವಯನಾಡು ಜನ

ಕೇರಳ: ಚುನಾವಣಾ ಫಲಿತಾಂಶ ಬಂದು ಹತ್ತು ದಿನ ಕಳೆದರೂ ಮುಖ್ಯಮಂತ್ರಿ ಯಾರಾಗಬೇಕು ಎಂಬ ಗೊಂದಲ ಮುಂದುವರಿದಿದ್ದು, ಈ ನಡುವೆ ವಯನಾಡ್‌ನಲ್ಲಿ (Kerala) ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಿರುದ್ಧ ಆಕ್ರೋಶದ ಪೋಸ್ಟರ್‌ಗಳು ಪ್ರತ್ಯಕ್ಷವಾಗಿವೆ. ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬೆಂಬಲಿಸಿದರೆ ಅದರ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಈ ಪೋಸ್ಟರ್‌ಗಳ ಮೂಲಕ ಹೈಕಮಾಂಡ್‌ಗೆ ಎಚ್ಚರಿಕೆ ನೀಡಲಾಗಿದೆ. ವಯನಾಡ್‌ನ ಜಿಲ್ಲಾ ಕಾಂಗ್ರೆಸ್ ಕಚೇರಿ ಮತ್ತು ಮುಕ್ಕಂನಲ್ಲಿರುವ ಪ್ರಿಯಾಂಕಾ ಗಾಂಧಿ ಅವರ ಸಂಸದರ ಕಚೇರಿಯ ಮುಂದೆ…

Read More
Who is going to be next kerala cm UDF decided

Kerala: ಕೇರಳ ರಾಜಕೀಯದ ಕುತೂಹಲಕ್ಕೆ ತೆರೆ! ಯಾರು ಏರಲಿದ್ದಾರೆ ಮುಖ್ಯಮಂತ್ರಿ ಸಿಂಹಾಸನ?

ತಿರುವನಂತಪುರಂ: ಕೇರಳ (Kerala) ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟ ಸ್ಪಷ್ಟ ಬಹುಮತ ಗಳಿಸಿ ವಾರ ಕಳೆದರೂ ಬಾಕಿ ಉಳಿದಿದ್ದ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಈಗ ಅಂತಿಮ ಹಂತಕ್ಕೆ ತಲುಪಿದೆ. ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್ ನಡೆಸಿದ ಸುದೀರ್ಘ ಸಮಾಲೋಚನೆಗಳ ನಂತರ, ಹೊಸ ಮುಖ್ಯಮಂತ್ರಿಯ ಹೆಸರು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ದೆಹಲಿಯಲ್ಲಿ ನಡೆದ ನಿರ್ಣಾಯಕ ಚರ್ಚೆ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹೈವೋಲ್ಟೇಜ್ ಸಭೆಯ ನಂತರ ಮಾತನಾಡಿದ ಹಿರಿಯ ನಾಯಕರು, ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆ…

Read More
Tamil Nadu congress leader mani shankar aiyar statement about alliance

Tamil Nadu: ಕಾಂಗ್ರೆಸ್-ಟಿವಿಕೆ ಮೈತ್ರಿಗೆ ಮಣಿಶಂಕರ್ ಅಯ್ಯರ್ ಗರಂ: ‘ಇದು ದ್ರಾವಿಡ ರಾಜಕೀಯದ ಸೆಲ್ಫ್ ಗೋಲ್’ ಎಂದು ಕಿಡಿ!

ನವದೆಹಲಿ: ತಮಿಳುನಾಡಿನಲ್ಲಿ (Tamil Nadu) ನಟ ವಿಜಯ್ ಅವರ ಟಿವಿಕೆ ಪಕ್ಷದೊಂದಿಗೆ ಕೈಜೋಡಿಸಿರುವ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮೈತ್ರಿಯನ್ನು ‘ಅವಕಾಶವಾದಿ ರಾಜಕೀಯ’ ಎಂದು ಕರೆದಿರುವ ಅವರು, ಪಕ್ಷದ ನಿಲುವನ್ನು ಕಟುವಾಗಿ ಟೀಕಿಸಿದ್ದಾರೆ. ತತ್ವ ಸಿದ್ಧಾಂತಗಳ ಬಲಿ: ತಮಿಳು ಪತ್ರಿಕೆಯೊಂದರಲ್ಲಿ ಲೇಖನ ಬರೆದಿರುವ ಅಯ್ಯರ್, “ಮಹಾತ್ಮ ಗಾಂಧಿಯವರು ಪ್ರತಿಪಾದಿಸಿದ ನೈತಿಕ ರಾಜಕಾರಣಕ್ಕೆ ಈ ಮೈತ್ರಿ ವಿರುದ್ಧವಾಗಿದೆ. ಇಂಡಿಯಾ ಮೈತ್ರಿಕೂಟದಲ್ಲಿ ರಾಹುಲ್ ಗಾಂಧಿಯವರನ್ನು ಬೆಂಬಲಿಸಿದ ಡಿಎಂಕೆಯನ್ನು ಬಿಟ್ಟು, ಈಗ…

Read More
Keralam assembly election who is going to be next cm

Keralam: ಕೇರಳದ ಮುಂದಿನ ಸಿಎಂ ಯಾರು? ಮೂವರು ನಾಯಕರ ನಡುವೆ ತೀವ್ರ ಪೈಪೋಟಿ

ತಿರುವನಂತಪುರ: ಕೇರಳದ (Keralam) ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಈಗ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಬಿರುಸುಗೊಂಡಿದೆ. ಶಾಸಕಾಂಗ ಪಕ್ಷದ ಸಭೆ ನಡೆದಿದ್ದರೂ ಸಹ, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಎಐಸಿಸಿ ವರಿಷ್ಠರಿಗೆ ಬಿಡಲಾಗಿದೆ. ದೆಹಲಿ ಮಟ್ಟದಲ್ಲಿ ನಡೆಯುವ ಚರ್ಚೆಯ ನಂತರ ಭಾನುವಾರದೊಳಗೆ ಹೊಸ ನಾಯಕನ ಹೆಸರು ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆಯಿದೆ. ಹೈಕಮಾಂಡ್ ಅಂಗಳಕ್ಕೆ ಚೆಂಡು: ಚುನಾವಣೆಯಲ್ಲಿ 63 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಾಸಕರು ತಮ್ಮ ವೈಯಕ್ತಿಕ ಒಲವನ್ನು ಕೇಂದ್ರದಿಂದ ಬಂದಿರುವ…

Read More