TOP NEWS
Lokayukta Complaint Against MLA Suresh Kumar BJP Leader Denies Corruption Allegations

Suresh Kumar: ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು: ರಾಜಕೀಯ ದುರುದ್ದೇಶದ ಸುಳ್ಳು ಆರೋಪ ಎಂದು ಬಿಜೆಪಿ ಹಿರಿಯ ನಾಯಕ ಕಿಡಿ!

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಹಿರಿಯ ಬಿಜೆಪಿ ಮುಖಂಡ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ (Suresh Kumar) ಅವರ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ಭ್ರಷ್ಟಾಚಾರ ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿರುವ ಕುರಿತು ಗಂಭೀರ ದೂರು ಸಲ್ಲಿಕೆಯಾಗಿದೆ. ಈ ಬೆಳವಣಿಗೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸುರೇಶ್ ಕುಮಾರ್, ತಮ್ಮ ಮೇಲಿನ ಆರೋಪಗಳು ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ರಾಜಕೀಯವಾಗಿ ಮಸಿ ಬಳಿಯುವ ಪ್ರಯತ್ನ ಎಂದು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಲೋಕಾಯುಕ್ತ ಕಚೇರಿಯಿಂದ ತಮಗೆ ನೋಟಿಸ್ ಬರುವ ಮುನ್ನವೇ, ಮುಂದಿನ…

Read More
Kalburgi court denied bail to PSI and his co workers Corruption

Corruption: 20 ಸಾವಿರ ಕಿಕ್‌ಬ್ಯಾಕ್ ಪಡೆದು ಸಿಕ್ಕಿಬಿದ್ದಿದ್ದ ಯಡ್ರಾಮಿ ಪೊಲೀಸರಿಗೆ ಇಲ್ಲ ಬಿಡುಗಡೆ; ಜಾಮೀನು ತಳ್ಳಿಹಾಕಿದ ನ್ಯಾಯಾಲಯ

ಕಲಬುರಗಿ:ಯಡ್ರಾಮಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ವಿಶ್ವನಾಥ ಮುದರೆಡ್ಡಿ ಹಾಗೂ ಅವರ ಇಲಾಖೆಯ ಸಿಬ್ಬಂದಿ ಸಿದ್ದಣ್ಣ ಬಿರಾದಾರ ಅವರ (Corruption) ಜೈಲು ಮುಕ್ತಿ ಸದ್ಯಕ್ಕಿಲ್ಲ. ಲಂಚದ ಹಣದೊಂದಿಗೆ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದ ಈ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸ್ಥಳೀಯ ನ್ಯಾಯಾಲಯವು ವಜಾಗೊಳಿಸಿದೆ. ಇದರಿಂದಾಗಿ ಇಬ್ಬರೂ ಭ್ರಷ್ಟ ಸಿಬ್ಬಂದಿ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸಿಬ್ಬಂದಿ ಕಳೆದ ಗುರುವಾರ ದೂರುದಾರರೊಬ್ಬರಿಂದ ಇಪ್ಪತ್ತು ಸಾವಿರ ರೂಪಾಯಿ ಲಂಚದ ಹಣವನ್ನು…

Read More
priyank kharge slams amit shah for not controlling migrants

Priyank Kharge: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು: ಅಕ್ರಮ ವಲಸೆ ತಡೆಯದ ಅಮಿತ್ ಶಾ ಅಸಮರ್ಥ

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗಾಗಿ ರಾಜಸ್ಥಾನಕ್ಕೆ ತೆರಳಿದ್ದ ಬೆಂಗಳೂರಿನ ಎಚ್‌ಎಎಲ್ ಠಾಣೆಯ ಮೂವರು ಪೊಲೀಸರು ಲಂಚ ಪಡೆಯುವಾಗ ಅಲ್ಲಿನ ಎಸಿಬಿ ಬಲೆಗೆ ಬಿದ್ದಿರುವುದು ಇಡೀ ಇಲಾಖೆಗೆ ಮುಜುಗರ ತಂದಿದೆ. ಈ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಆರೋಪಿ ಪೊಲೀಸರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ. ಇದೇ ವೇಳೆ ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಗ್ಯಾರಂಟಿ ಯೋಜನೆಗಳ ವಿಚಾರವಾಗಿ ವಿಪಕ್ಷ ಬಿಜೆಪಿ ನಡೆಸುತ್ತಿರುವ ಮುನಿಸಿಗೆ ಹಾಗೂ ಕೇಂದ್ರ ಸರ್ಕಾರದ…

Read More
Lokayukta raid on bengaluru RTO office and haveri sand mining handle

Lokayukta: ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ: ಬೆಂಗಳೂರು ದಕ್ಷಿಣ ಆರ್‌ಟಿಒ ಅಧಿಕಾರಿಗಳಿಗೆ ಕ್ಲಾಸ್; ಹಾವೇರಿಯಲ್ಲಿ ಅಕ್ರಮ ಮರಳು ದಂಧೆಕೋರರು ಉಡೀಸ್!

ರಾಮನಗರ: ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಪ್ರಾದೇಶಿಕ ಸಾರಿಗೆ (RTO) ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ಅವರ ನೇತೃತ್ವದಲ್ಲಿ ಮಿಂಚಿನ (Lokayukta) ದಾಳಿ ನಡೆದಿದೆ. ಕಚೇರಿಯ ಇಂಚಿಂಚೂ ಪರಿಶೀಲನೆ ನಡೆಸಿದ ಅಧಿಕಾರಿಗಳು, ಅಲ್ಲಿನ ಅವ್ಯವಸ್ಥೆ ಕಂಡು ಕಂಗಾಲಾಗಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಈ ಕಚೇರಿ ಮೇಲೆ ನಡೆದಿರುವ ಮೂರನೇ ದಾಳಿ…

Read More
lokayukta raid on 24 gram panchayat offices in dharwad

Lokayukta: ಧಾರವಾಡ ಜಿಲ್ಲೆಯ 24 ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ಹಠಾತ್ ದಾಳಿ

ಧಾರವಾಡ: ಗ್ರಾಮೀಣ ಭಾಗದ ಪಂಚಾಯಿತಿ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ಹಾಗೂ ಸಾರ್ವಜನಿಕರ ಹಣ ಲೂಟಿ ಮಾಡುತ್ತಿದ್ದ ಅಧಿಕಾರಿಗಳ ಕಳ್ಳಾಟಕ್ಕೆ ಲೋಕಾಯುಕ್ತ (Lokayukta) ಪೊಲೀಸರು ಬ್ರೇಕ್ ಹಾಕಿದ್ದಾರೆ. ಜಿಲ್ಲೆಯ ಒಟ್ಟು 24 ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ಮೇಲೆ ಲೋಕಾಯುಕ್ತದ ಪ್ರತ್ಯೇಕ ತಂಡಗಳು ಏಕಕಾಲದಲ್ಲಿ ಸುಂಟರಗಾಳಿಯಂತೆ ಮುಗಿಬಿದ್ದಿದ್ದು, ನಕಲಿ ದಾಖಲೆ ಸೃಷ್ಟಿಸಿ ಹಣ ಎಗರಿಸುತ್ತಿದ್ದ ಸಿಬ್ಬಂದಿ ವರ್ಗ ದಿಕ್ಕೆಟ್ಟು ಕೂರುವಂತೆ ಮಾಡಿದೆ. ಹಠಾತ್ತಾಗಿ ನಡೆದ ಈ ಆಪರೇಷನ್‌ನಿಂದಾಗಿ ಇಡೀ ಧಾರವಾಡ ಜಿಲ್ಲೆಯ ಭ್ರಷ್ಟ ಆಡಳಿತ ಯಂತ್ರ ನಡುಗಿಹೋಗಿದೆ….

Read More
supreme court surprised after bihar police says rats destroyed evidence

Supreme Court: ಲಂಚದ ನೋಟುಗಳನ್ನು ತಿಂದ ಇಲಿಗಳು!: ಬಿಹಾರ ಪೊಲೀಸರ ವಾದಕ್ಕೆ ಸುಪ್ರೀಂ ಕೋರ್ಟ್ ಅಚ್ಚರಿ

ಹೊಸದಿಲ್ಲಿ: ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಸಾಕ್ಷ್ಯವಾಗಿ ಇರಿಸಲಾಗಿದ್ದ ನಗದು ಹಣವನ್ನು ಇಲಿಗಳು ತಿಂದು ಹಾಕಿವೆ ಎಂಬ ಬಿಹಾರ ಪೊಲೀಸರ ಹೇಳಿಕೆಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಮಾಜಿ ಅಧಿಕಾರಿ ಅರುಣಾ ಕುಮಾರಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಮುಖ ಸಾಕ್ಷ್ಯವೇ ನಾಶ: ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಅರುಣಾ ಕುಮಾರಿ ಅವರ ಶಿಕ್ಷೆಯನ್ನು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು…

Read More
minister Timmapura reacts about allegations

Timmapura: ಮೋಸ ಮಾಡಲು ನಮ್ಮ ಹೆಸರು ಬಳಕೆ, ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ತಿಮ್ಮಾಪುರ

ಬಾಗಲಕೋಟೆ: ಯಾರೋ ಒಬ್ಬರು ಆಡಿಯೋವನ್ನ ದುರುಪಯೋಗ ಮಾಡಿಕೊಂಡಿದ್ದು, ನನ್ನ ಹಾಗೂ ಮಗನ ಹೆಸರನ್ನ ಕೆಡಿಸುತ್ತಿದ್ದಾರೆ ಎಂದು ಸಚಿವ ತಿಮ್ಮಾಪುರ (Timmapura) ಅವರು ಹೇಳಿದ್ದಾರೆ. ನಮ್ಮ ಹೆಸರನ್ನ ಸುಮ್ಮನೆ ಬಳಸಲಾಗುತ್ತಿದೆ ಬಾಗಲಕೋಟೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿನ ಅಕ್ರಮ ಆರೋಪ ಹಿನ್ನೆಲೆ ತಮ್ಮ ವಿರುದ್ದ ದೂರು ಬಂದ ಹಿನ್ನೆಲೆ ಸಿಎಂ ವರದಿ ಕೇಳಿದ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಡಿಸಿ ಸುಪರಿಂಡೆಂಟ್ ಒಬ್ಬ ಕಾನ್ಸ್ಟೇಬಲ್ ಅನ್ನು ಲೋಕಾಯುಕ್ತರು ಟ್ರ್ಯಾಕ್ ಮಾಡಿದ್ದಾರೆ. ಅವರನ್ನು ಈಗಾಗಲೇ…

Read More