TOP NEWS
Crime Man who went for swimming in sharavati river lost life in sigandhuru

Crime: ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಬಂದಿದ್ದ ಆಂಧ್ರ ಮೂಲದ ಯುವಕ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು!

ಸಾಗರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆಂದು ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಬಂದಿದ್ದ ಆಂಧ್ರಪ್ರದೇಶ ಮೂಲದ (Crime)ಯುವಕನೊಬ್ಬ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬುಧವಾರ ಸಂಭವಿಸಿದೆ. ಆಂಧ್ರಪ್ರದೇಶದ ರಾಯದುರ್ಗ ನಿವಾಸಿಯಾದ ಉಮೇಶ್ (೩೦) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಸೆಳೆತಕ್ಕೆ ಸಿಲುಕಿ ನಾಪತ್ತೆ ಆಗಿದ್ದ ಯುವಕ ಬುಧವಾರ ಮಧ್ಯಾಹ್ನ ಸಿಗಂದೂರು ಸೇತುವೆಯ ಕೆಳಭಾಗದ ಮುಳುಗಡೆ ಪ್ರದೇಶದಲ್ಲಿ ಈಜಲೆಂದು ನೀರಿನಲ್ಲಿ ಇಳಿದಿದ್ದ ಉಮೇಶ್, ದಿಢೀರನೆ ನೀರಿನ ಸೆಳತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಯುವಕ ನೀರಿನಲ್ಲಿ ಮುಳುಗುತ್ತಿದ್ದಂತೆ…

Read More
Crime groom family asked extra dowry on wedding day

Crime: ವರದಕ್ಷಿಣೆ ದುರಾಸೆಗೆ ಮದುವೆ ಮಂಟಪದಲ್ಲೇ ಬೀಗರ ಜಗಳ, ಕಲ್ಯಾಣ ಮಂಟಪವೇ ರಣರಂಗ

ಉತ್ತರ ಪ್ರದೇಶ: ವರದಕ್ಷಿಣೆ ಎಂಬ ಸಾಮಾಜಿಕ (Crime) ಪಿಡುಗು ಇಂದಿನ ಆಧುನಿಕ ಜಗತ್ತಿನಲ್ಲೂ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವರನ ಕಡೆಯವರು ಮದುವೆ ಮಂಟಪದಲ್ಲೇ ದಿಢೀರನೆ ಹೆಚ್ಚುವರಿ ಹಣಕ್ಕಾಗಿ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಭೀಕರ ಹೊಡೆದಾಟ ನಡೆದಿದ್ದು, ಸುಂದರ ಮದುವೆ ಮನೆ ನೋಡನೋಡುತ್ತಿದ್ದಂತೆಯೇ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಹಾರ ಬದಲಾಯಿಸುವ ಹಣಕ್ಕೆ ಬೇಡಿಕೆ ಇಟ್ಟ ವರನ ಕುಟುಂಬ ಝಾನ್ಸಿಯ ಪ್ರೇಮನಗರ ಪೊಲೀಸ್ ಠಾಣಾ…

Read More
crime women assaulted in Shivamogga and Hyderabad police arrested one

Crime: ಶಿವಮೊಗ್ಗ ಮತ್ತು ಹೈದರಾಬಾದ್‌ನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ: ಇಬ್ಬರು ಆರೋಪಿಗಳ ವಿರುದ್ಧ ಪೊಲೀಸ್ ಕ್ರಮ

ಭದ್ರಾವತಿ: ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ (Crime) ಎರಡು ಪ್ರತ್ಯೇಕ ಘಟನೆಗಳು ಶಿವಮೊಗ್ಗ ಜಿಲ್ಲೆ ಮತ್ತು ಹೈದರಾಬಾದ್‌ನಲ್ಲಿ ವರದಿಯಾಗಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ವಕೀಲ ಭರತ್ ವಿರುದ್ಧ ದೂರು; ಪತ್ತೆಗೆ ಜಾಲ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ವಕೀಲ ಹಾಗೂ ಬಿಜೆಪಿ ಮುಖಂಡನಾಗಿ ಗುರುತಿಸಿಕೊಂಡಿರುವ ಭರತ್ ಎಂಬಾತನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರದ ಗಂಭೀರ ಆರೋಪ ಮಾಡಿದ್ದಾರೆ. ಸಂತ್ರಸ್ತೆಯ ಪತಿಯ ಸ್ನೇಹಿತನೆಂದು ಹೇಳಿಕೊಂಡು ಪರಿಚಯ ಬೆಳೆಸಿದ್ದ ಈತ, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ…

Read More
crime tamil nadu 10 years old girl Abducted Murdered In Coimbatore

Crime: ಕೋಯಮತ್ತೂರು ಬಾಲಕಿ ಅಪಹರಣ, ಕೊಲೆ ಪ್ರಕರಣ: ತಮಿಳುನಾಡಿನಲ್ಲಿ ಭಾರಿ ಆಕ್ರೋಶ, ಹೊಸ ಸರ್ಕಾರಕ್ಕೆ ಪ್ರತಿಪಕ್ಷ ಡಿಎಂಕೆ ಕೌಂಟರ್

ಕೋಯಮತ್ತೂರು: ತಮಿಳುನಾಡಿನ ಕೋಯಮತ್ತೂರು ಜಿಲ್ಲೆಯ ಸುಲೂರು ಸಮೀಪದ ಕಣ್ಣಂಪಾಳಯಂ ಕೆರೆಯ ಬಳಿ 10 ವರ್ಷದ ಬಾಲಕಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ (Crime) ಪತ್ತೆಯಾಗಿರುವ ಭೀಕರ ಘಟನೆ ಇಡೀ ರಾಜ್ಯವನ್ನು ನಡುಗಿಸಿದೆ. ಗುರುವಾರ ಸಂಜೆ ಮನೆಯ ಬಳಿ ಕಿರಾಣಿ ಸಾಮಗ್ರಿ ಖರೀದಿಸಲು ಹೊರಟಿದ್ದ ಬಾಲಕಿಯನ್ನು ಅಪಹರಿಸಿ, ಬಳಿಕ ಹತ್ಯೆ ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಮತ್ತು ಮೋಹನ್ ರಾಜ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಬಾಲಕಿಯ ಪೋಷಕರು ಮತ್ತು ನೂರಾರು ಸಾರ್ವಜನಿಕರು ಸುಲೂರು…

Read More
crime road mishap biker missed speed breaker pillion injured

Road Mishap: ಸ್ಪೀಡ್ ಬ್ರೇಕರ್ ಗಮನಿಸದೇ ಬೈಕ್ ಸವಾರನ ಅತಿವೇಗ: ಹಿಂಬದಿ ಸವಾರ ರಸ್ತೆಗೆ ಬಿದ್ದು ಬೆನ್ನೆಲುಬು ಮುರಿತ

ಬೆಂಗಳೂರು: ರಾಜಧಾನಿಯ ಜನನಿಬಿಡ ರಸ್ತೆಯೊಂದರಲ್ಲಿ (Road Mishap) ಬೈಕ್ ಸವಾರನೊಬ್ಬನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಗೆ ಹಿಂಬದಿ ಸವಾರ ಬಲಿಯಾಗಿದ್ದು, ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿದ್ದ ಸ್ಪೀಡ್ ಬ್ರೇಕರ್ ಅನ್ನು ಗಮನಿಸದೆ ಸವಾರ ಬೈಕನ್ನು ಅತಿವೇಗವಾಗಿ ಚಲಾಯಿಸಿದ್ದಾನೆ. ಇದರ ಪರಿಣಾಮವಾಗಿ ಬೈಕ್ ಜೋರಾಗಿ ಜಂಪ್ ಆಗಿದ್ದು, ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ಗಾಳಿಯಲ್ಲಿ ಹಾರಿ ರಸ್ತೆಗೆ ಅಪ್ಪಳಿಸಿದ್ದಾರೆ. ಬಿದ್ದ ರಭಸಕ್ಕೆ ಆತನ ಬೆನ್ನೆಲುಬು ಸಂಪೂರ್ಣವಾಗಿ ಮುರಿದಿದ್ದು, ಸದ್ಯ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ…

Read More
crime kolar woman harmed herself due to blackmailing

Crime: ಬ್ಲ್ಯಾಕ್‌ಮೇಲ್‌ ಕಿರುಕುಳಕ್ಕೆ ಯುವತಿ ಬಲಿ: ಫೋಟೋ ವೈರಲ್ ಬೆದರಿಕೆಗೆ ಹೆದರಿ ಕೋಲಾರದಲ್ಲಿ ಆತ್ಮಹತ್ಯೆ

ಕೋಲಾರ: ಖಾಸಗಿ ಚಿತ್ರ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಪೀಡನೆಗೆ ಬೇಸತ್ತು ಯುವತಿಯೊಬ್ಬರು ಆತ್ಮಹತ್ಯೆ (Crime) ಮಾಡಿಕೊಂಡಿರುವ ದಾರುಣ ಘಟನೆ ಕೋಲಾರ ತಾಲ್ಲೂಕಿನ ಛತ್ರಕೋಡಿ ಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ರಜಿನಿ (೨೮) ಎಂಬುವವರೇ ಮಾನಸಿಕ ಒತ್ತಡ ತಾಳಲಾರದೆ ಪ್ರಾಣ ಕಳೆದುಕೊಂಡ ದುರ್ದೈವಿ. ಮಾನಸಿಕವಾಗಿ ಕಂಗಾಲಾಗಿದ್ದ ಮಹಿಳೆ ಬೇಗ್ಲಿಗಣಜೇನಹಳ್ಳಿ ಮೂಲದ ಶ್ರೀಕಾಂತ್ ಎಂಬಾತನೇ ಈ ಆತ್ಮಹತ್ಯೆಗೆ ಕಾರಣನಾದ ಆರೋಪಿ ಎಂದು ಗುರುತಿಸಲಾಗಿದೆ. ಮೃತ ರಜಿನಿಯವರ ವೈಯಕ್ತಿಕ ಫೋಟೋಗಳನ್ನು ಸಾರ್ವಜನಿಕವಾಗಿ…

Read More
crime bengaluru police arrested 8 drug peddlers

Crime: ದೆಹಲಿ-ಬೆಂಗಳೂರು ಅಂತರರಾಜ್ಯ ಡ್ರಗ್ಸ್ ಜಾಲದ 8 ಪೆಡ್ಲರ್‌ಗಳ ಬಂಧನ, 34 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜಧಾನಿಯ ಹೆಬ್ಬಾಳ ಠಾಣೆಯ (Crime) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ಸಾಗಿಸಿ ಮಾರಾಟ ಮಾಡುತ್ತಿದ್ದ ಅಂತರರಾಜ್ಯ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಟ್ಟು 34 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಅತ್ಯಂತ ವ್ಯವಸ್ಥಿತವಾಗಿ ಮೂರು ಹಂತಗಳಲ್ಲಿ (ಲೇಯರ್ಸ್) ಕಾರ್ಯನಿರ್ವಹಿಸುತ್ತಿದ್ದ ಈ ಗ್ಯಾಂಗ್, ಡ್ರಗ್ಸ್ ಸಾಗಾಟಕ್ಕೆ ಕಲ್ಪನಾತೀತ ದಾರಿಗಳನ್ನು ಕಂಡುಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗಿಫ್ಟ್ ಬಾಕ್ಸ್,…

Read More