TOP NEWS
crime belagavi police arrested 3 accused

Crime: ಅಡ್ವಾನ್ಸ್ ಹಣದ ಕಿರಿಕ್: ವ್ಯಕ್ತಿಯ ಭೀಕರ ಕೊ*ಲೆ, ಮೂವರು ಆರೋಪಿಗಳು ಲಾಕ್!

ಬೆಳಗಾವಿ: ಕುರಿ ಕಾಯುವ ಕೆಲಸಕ್ಕೆಂದು ಮುಂಗಡವಾಗಿ ಪಡೆದಿದ್ದ ಹಣದ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ (Crime) ದೊಡವಾಡ ಗ್ರಾಮದಲ್ಲಿ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಘಟನೆ ನಡೆದು ಕೆಲವೇ ದಿನಗಳಲ್ಲಿ ಮೂವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಹಾಲಪ್ಪ, ಮಂಜುನಾಥ ಹಾಗೂ ಅರ್ಜುನ ಬಂಧಿತ ಕಿಡಿಗೇಡಿಗಳು. ಜಮೀನಿನಲ್ಲಿ ಪತ್ತೆಯಾಗಿತ್ತು ನಿಗೂಢ ಶವ ದೊಡವಾಡ ಗ್ರಾಮದ ನಿವಾಸಿ ಫಕ್ಕೀರಪ್ಪ ಕಿರಕಸಾಲಿ (38) ಕೊಲೆಯಾದ ವ್ಯಕ್ತಿ. ಕಳೆದ ಕೆಲವು ದಿನಗಳ ಹಿಂದೆ…

Read More
crime vijayapura pan shop blast 3 injured

Crime: ಪಾನ್ ಶಾಪ್‌ನಲ್ಲಿ ಭೀಕರ ಸ್ಫೋಟ: ಮೂವರಿಗೆ ಗಂಭೀರ ಗಾಯ

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದ ನಿಗೂಢ ಸ್ಫೋಟ ಇಡೀ ಹಳ್ಳಿಯನ್ನೇ (Crime) ನಡುಗಿಸಿದೆ. ಇಲ್ಲಿನ ಪಾನ್ ಶಾಪ್ ಒಂದರಲ್ಲಿ ನಡೆದ ಈ ಧಗಧಗನೆ ಹೊತ್ತಿ ಉರಿದ ಘಟನೆಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಜನರಲ್ಲಿ ಭೀತಿ ಆವರಿಸಿದೆ. ನುಜ್ಜುಗುಜ್ಜಾದ ಅಂಗಡಿ; ಆಸ್ಪತ್ರೆಗೆ ಸೇರಿದ ಗಾಯಾಳುಗಳು ರವಿಕಿರಣ ಎಂಬುವವರಿಗೆ ಸೇರಿದ ಶೆಡ್ ಮಾದರಿಯ ಪಾನ್ ಶಾಪ್ ಈ ಭೀಕರ ಸ್ಫೋಟದ ತೀವ್ರತೆಗೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಅಂಗಡಿಯ ಮಾಲೀಕ ರವಿಕಿರಣ ಸೇರಿದಂತೆ ಅಲ್ಲೇ…

Read More
Dayananada reddy kidnap case police arrested 4 people crime

Crime: ಮಾಜಿ ಎಂಎಲ್‌ಸಿ ದಯಾನಂದ ರೆಡ್ಡಿ ಕಿಡ್ನಾಪ್ ಕೇಸ್: ಗನ್ ತೋರಿಸಿ ಅಡ್ಡಗಟ್ಟಿದ್ದ ನಾಲ್ವರು ಕೇರಳದ ಕದೀಮರು ಪೊಲೀಸರ ಬಲೆಗೆ!

ಬೆಂಗಳೂರು: ರಾಜಧಾನಿಯ ಹೊರವಲಯದಲ್ಲಿ ತಡರಾತ್ರಿ ಭಾರಿ ಸಂಚಲನ ಮೂಡಿಸಿದ್ದ ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ (Crime) ಅವರ ಸಿನೆಮಾ ಶೈಲಿಯ ಅಪಹರಣ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸೂರ್ಯನಗರ ಠಾಣೆ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡೆಸಿ, ಈ ಕೃತ್ಯ ಎಸಗಿದ್ದ ಕೇರಳ ಮೂಲದ ಪ್ರವೀಣ್, ಅಶಿಕ್, ಆದರ್ಶ ಹಾಗೂ ರೋಮಿಯೋ ಎಂಬ ನಾಲ್ವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ ಕಿಡ್ನಾಪ್ ಮಾಡಲು…

Read More
crime 1 and half year old kid body tortured by stepfather in kerala

Crime: ಕೇರಳದಲ್ಲಿ ಒಂದೂವರೆ ವರ್ಷದ ಕಂದಮ್ಮನ ಭೀಕರ ಕೊಲೆ: ಆಹಾರ ಸಿಲುಕಿ ಸಾವು ಎಂದಿದ್ದ ಪ್ರಕರಣದ ಹಿಂದೆ ಬಯಲಾಯ್ತು ಹೆತ್ತ ತಾಯಿ, ಪ್ರಿಯಕರನ ಕ್ರೌರ್ಯ!

ಕೇರಳ: ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ ಮಗು ಸಾವನ್ನಪ್ಪಿದೆ ಎಂದು ನಂಬಿಸಲು ಯತ್ನಿಸಿದ್ದ ಪ್ರಕರಣವೊಂದರಲ್ಲಿ, ಮಗುವಿನ ಮೇಲೆ ನಡೆದಿರುವ (Crime) ಸಾಲು ಸಾಲು ದೌರ್ಜನ್ಯ ಮತ್ತು ಕೊಲೆ ಸಂಚಿನ ರೋಮಾಂಚನಕಾರಿ ಸತ್ಯ ಬಯಲಾಗಿದೆ. ಕೇರಳದ ರಾಜಧಾನಿ ತಿರುವನಂತಪುರಂನಿಂದ ಕೇವಲ 20 ಕಿಲೋಮೀಟರ್ ದೂರದಲ್ಲಿರುವ ನೆಡುಮಂಗಾಡ್‌ನ ಪಾನವೂರಿನಲ್ಲಿ ಈ ಘೋರ ಕೃತ್ಯ ನಡೆದಿದ್ದು, ಇಡೀ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಕೇವಲ ಒಂದೂವರೆ ವರ್ಷದ ಮಗು ಆರ್ಶಿದ್‌ನನ್ನು ಆತನ ತಾಯಿಯ ಲಿವ್-ಇನ್ ಪಾರ್ಟ್‌ನರ್ (ಸಾಕುತಂದೆ) ಹೊಡೆದು ಕೊಂದಿದ್ದು, ಹೆತ್ತ…

Read More
Crime Man who went for swimming in sharavati river lost life in sigandhuru

Crime: ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಬಂದಿದ್ದ ಆಂಧ್ರ ಮೂಲದ ಯುವಕ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು!

ಸಾಗರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆಂದು ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಬಂದಿದ್ದ ಆಂಧ್ರಪ್ರದೇಶ ಮೂಲದ (Crime)ಯುವಕನೊಬ್ಬ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬುಧವಾರ ಸಂಭವಿಸಿದೆ. ಆಂಧ್ರಪ್ರದೇಶದ ರಾಯದುರ್ಗ ನಿವಾಸಿಯಾದ ಉಮೇಶ್ (೩೦) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಸೆಳೆತಕ್ಕೆ ಸಿಲುಕಿ ನಾಪತ್ತೆ ಆಗಿದ್ದ ಯುವಕ ಬುಧವಾರ ಮಧ್ಯಾಹ್ನ ಸಿಗಂದೂರು ಸೇತುವೆಯ ಕೆಳಭಾಗದ ಮುಳುಗಡೆ ಪ್ರದೇಶದಲ್ಲಿ ಈಜಲೆಂದು ನೀರಿನಲ್ಲಿ ಇಳಿದಿದ್ದ ಉಮೇಶ್, ದಿಢೀರನೆ ನೀರಿನ ಸೆಳತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಯುವಕ ನೀರಿನಲ್ಲಿ ಮುಳುಗುತ್ತಿದ್ದಂತೆ…

Read More
Crime groom family asked extra dowry on wedding day

Crime: ವರದಕ್ಷಿಣೆ ದುರಾಸೆಗೆ ಮದುವೆ ಮಂಟಪದಲ್ಲೇ ಬೀಗರ ಜಗಳ, ಕಲ್ಯಾಣ ಮಂಟಪವೇ ರಣರಂಗ

ಉತ್ತರ ಪ್ರದೇಶ: ವರದಕ್ಷಿಣೆ ಎಂಬ ಸಾಮಾಜಿಕ (Crime) ಪಿಡುಗು ಇಂದಿನ ಆಧುನಿಕ ಜಗತ್ತಿನಲ್ಲೂ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವರನ ಕಡೆಯವರು ಮದುವೆ ಮಂಟಪದಲ್ಲೇ ದಿಢೀರನೆ ಹೆಚ್ಚುವರಿ ಹಣಕ್ಕಾಗಿ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಭೀಕರ ಹೊಡೆದಾಟ ನಡೆದಿದ್ದು, ಸುಂದರ ಮದುವೆ ಮನೆ ನೋಡನೋಡುತ್ತಿದ್ದಂತೆಯೇ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಹಾರ ಬದಲಾಯಿಸುವ ಹಣಕ್ಕೆ ಬೇಡಿಕೆ ಇಟ್ಟ ವರನ ಕುಟುಂಬ ಝಾನ್ಸಿಯ ಪ್ರೇಮನಗರ ಪೊಲೀಸ್ ಠಾಣಾ…

Read More
crime women assaulted in Shivamogga and Hyderabad police arrested one

Crime: ಶಿವಮೊಗ್ಗ ಮತ್ತು ಹೈದರಾಬಾದ್‌ನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ: ಇಬ್ಬರು ಆರೋಪಿಗಳ ವಿರುದ್ಧ ಪೊಲೀಸ್ ಕ್ರಮ

ಭದ್ರಾವತಿ: ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ (Crime) ಎರಡು ಪ್ರತ್ಯೇಕ ಘಟನೆಗಳು ಶಿವಮೊಗ್ಗ ಜಿಲ್ಲೆ ಮತ್ತು ಹೈದರಾಬಾದ್‌ನಲ್ಲಿ ವರದಿಯಾಗಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ವಕೀಲ ಭರತ್ ವಿರುದ್ಧ ದೂರು; ಪತ್ತೆಗೆ ಜಾಲ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ವಕೀಲ ಹಾಗೂ ಬಿಜೆಪಿ ಮುಖಂಡನಾಗಿ ಗುರುತಿಸಿಕೊಂಡಿರುವ ಭರತ್ ಎಂಬಾತನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರದ ಗಂಭೀರ ಆರೋಪ ಮಾಡಿದ್ದಾರೆ. ಸಂತ್ರಸ್ತೆಯ ಪತಿಯ ಸ್ನೇಹಿತನೆಂದು ಹೇಳಿಕೊಂಡು ಪರಿಚಯ ಬೆಳೆಸಿದ್ದ ಈತ, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ…

Read More