CT Ravi: ಧರ್ಮಸ್ಥಳದ ವಿರುದ್ಧ ₹200 ಕೋಟಿ ಷಡ್ಯಂತ್ರ ಆರೋಪ: ತನಿಖೆಯನ್ನು ತಕ್ಷಣವೇ ಸಿಬಿಐಗೆ ವಹಿಸಲು ಸಿ.ಟಿ. ರವಿ ಬಹಿರಂಗ ಪತ್ರ!
ಚಿಕ್ಕಮಗಳೂರು: ಕರ್ನಾಟಕದ ಅತ್ಯಂತ ಪವಿತ್ರ ಹಾಗೂ ಪ್ರತಿಷ್ಠಿತ ಧಾರ್ಮಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ತೇಜೋವಧೆ ಮಾಡಲು ಬರೋಬ್ಬರಿ 200 ಕೋಟಿ ರೂಪಾಯಿ ವೆಚ್ಚದ ಬೃಹತ್ ಷಡ್ಯಂತ್ರ ನಡೆದಿದೆ ಎಂಬ ಆಘಾತಕಾರಿ ಆರೋಪ ಕೇಳಿಬಂದಿದೆ. ಈ ಸಂಚಿನ ಆಳ ಮತ್ತು ವ್ಯಾಪ್ತಿ ಅತ್ಯಂತ ವಿಸ್ತಾರವಾಗಿರುವುದರಿಂದ, ಪ್ರಕರಣದ ಸಮಗ್ರ ತನಿಖೆಯನ್ನು ತಕ್ಷಣವೇ ಕೇಂದ್ರ ತನಿಖಾ ಸಂಸ್ಥೆಯಾದ ಸಿಬಿಐಗೆ (CBI) ಒಪ್ಪಿಸಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಹಾಗೂ ಹಾಲಿ…
