Panchamasali: ಪಂಚಮಸಾಲಿ ಪೀಠದಲ್ಲಿ ಲೆಕ್ಕದ ಸಂಘರ್ಷ: ಜಿಲ್ಲಾಡಳಿತದಿಂದ ನಿಷೇಧಾಜ್ಞೆ
ದಾವಣಗೆರೆ: ಹರಿಹರದ ಪಂಚಮಸಾಲಿ (Panchamasali) ಮಠದಲ್ಲಿ ವಚನಾನಂದ ಶ್ರೀಗಳ ಬೆಂಬಲಿಗರು ಹಾಗೂ ಟ್ರಸ್ಟ್ ಪದಾಧಿಕಾರಿಗಳ ನಡುವಿನ ಭಿನ್ನಮತ ತಾರಕಕ್ಕೇರಿದೆ. ಮಠದ ಒಳಜಗಳ ಬೀದಿ ರಂಪಾಟವಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಮಠದ ಆವರಣದಲ್ಲಿ ಒಂದು ತಿಂಗಳ ಕಾಲ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿ ಮಾಡಿದೆ. ಸಭೆ-ಸಮಾರಂಭಗಳಿಗೆ ಬ್ರೇಕ್: ಮಾರ್ಚ್ ತಿಂಗಳಿನಿಂದಲೂ ಮಠದ ಎರಡು ಬಣಗಳ ನಡುವೆ ಸಂಘರ್ಷ ನಡೆಯುತ್ತಿದ್ದು, ಪರಸ್ಪರ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗಿವೆ. ಮಠದ ಆವರಣದಲ್ಲಿ ನಡೆಯುವ ಸಭೆಗಳು ಸಾರ್ವಜನಿಕ ಶಾಂತಿಗೆ ಧಕ್ಕೆ ತರುತ್ತಿರುವುದರಿಂದ, ಮೇ 1 ರಿಂದ…
