High Court ordered to Remove DK Shivakumar Cut Outs

DK Shivakumar: ಹೈಕೋರ್ಟ್ ಆವರಣದಲ್ಲಿದ್ದ ಬೃಹತ್ ಕಟೌಟ್‌ಗಳನ್ನು ಕಿತ್ತೆಸೆದ ಪೊಲೀಸರು!

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸುವ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಬೆಂಗಳೂರಿನ ಹೈಕೋರ್ಟ್ ಅನಧಿಕೃತ ಫ್ಲೆಕ್ಸ್ ಹಾವಳಿ ವಿರುದ್ಧ ತೀವ್ರ ಕೆಂಗಣ್ಣು ಬೀರಿದೆ. ಜೂನ್ 3ರಂದು ನಡೆಯಲಿರುವ ಈ ಪಟ್ಟಾಭಿಷೇಕದ ಸಡಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೈಕೋರ್ಟ್ ಮತ್ತು ವಿಧಾನಸೌಧದ ಸುತ್ತಮುತ್ತ ಅಳವಡಿಸಿದ್ದ ಸಾಲು ಸಾಲು ದೈತ್ಯ ಕಟೌಟ್‌ಗಳು ಹಾಗೂ ಬ್ಯಾನರ್‌ಗಳನ್ನು ನ್ಯಾಯಾಧೀಶರ ಖಡಕ್ ಆದೇಶದ ಮೇರೆಗೆ ಅಧಿಕಾರಿಗಳು ಜಾಗದಲ್ಲೇ ತೆರವುಗೊಳಿಸಿದ್ದಾರೆ. ಕೊನೆಗೂ ಪಟ್ಟ ಗಿಟ್ಟಿಸಿಕೊಂಡ…

Read More
DK Shivakumar invited many swamijis

DK Shivakumar: ಧರ್ಮಗುರುಗಳ ಸಮ್ಮುಖದಲ್ಲಿ ಪೂರ್ವಾಭಿಮುಖವಾಗಿ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಗಾಜಿನಮನೆಯಲ್ಲಿ ಸೌಹಾರ್ದತೆಯ ಸಂದೇಶ!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರ ಅಚಲ ದೈವಭಕ್ತಿ ಹಾಗೂ ಜ್ಯೋತಿಷ್ಯ ಶಾಸ್ತ್ರದ ಮೇಲಿನ ನಂಬಿಕೆ ರಾಜಕೀಯ ವಲಯದಲ್ಲಿ ಜಗಜ್ಜಾಹೀರಾಗಿದೆ. ಜೂನ್ 3ರ ಬುಧವಾರ ಸಂಜೆ ಭರ್ಜರಿ ಮುಹೂರ್ತದಲ್ಲಿ ಅಂದರೆ 4:05 ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ನೆರವೇರಲಿರುವ ಐತಿಹಾಸಿಕ ಸಮಾರಂಭದಲ್ಲಿ ಅವರು ಸಿಎಂ ಆಗಿ ಸತ್ಯಪ್ರತಿಜ್ಞೆ ಮಾಡಲಿದ್ದಾರೆ. ಈ ಮಹತ್ವದ ಕ್ಷಣಕ್ಕೆ ದೇಶದ ವಿವಿಧ ಧರ್ಮಗಳ ಪೂಜ್ಯ ಸ್ವಾಮೀಜಿಗಳು ಮತ್ತು ಧರ್ಮಗುರುಗಳು ಸಾಕ್ಷಿಯಾಗಲಿದ್ದು, ಇಡೀ ಭಾರತಕ್ಕೆ ಸರ್ವಧರ್ಮ ಸಹಿಷ್ಣುತೆ,…

Read More
dk shivakumar facing new problem GBA portfolio

DK Shivakumar: ಸಿಎಂ ಆದ ಮೇಲೂ ಬೆಂಗಳೂರು ಅಭಿವೃದ್ಧಿ ಖಾತೆ ಉಳಿಸಿಕೊಳ್ಳುತ್ತಾರಾ ಡಿಕೆಶಿ? ಸಚಿವ ಸ್ಥಾನದ ಮೇಲ ಕಣ್ಣಿಟ್ಟ ಕೈ ನಾಯಕರು!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರು ಈ ಹಿಂದೆ ಉಪಮುಖ್ಯಮಂತ್ರಿಯಾಗಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ‘ಬ್ರ್ಯಾಂಡ್ ಬೆಂಗಳೂರು’ ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಘೋಷಿಸಿದ್ದರು. ಕಳೆದ ಮೂರು ವರ್ಷಗಳಿಂದ ರಾಜಧಾನಿಯ ಉಸ್ತುವಾರಿಯನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬಂದಿರುವ ಅವರ ಅದೇ ಸಚಿವ ಖಾತೆಯ ಮೇಲೆ ಈಗ ಸ್ವಪಕ್ಷದ ಹಿರಿಯ ನಾಯಕರ ಕಣ್ಣು ಬಿದ್ದಿದೆ. ಡಿಕೆಶಿ ಅವರು ಮುಖ್ಯಮಂತ್ರಿಯಾದ ಮೇಲೂ ಈ ಪ್ರಭಾವಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡರೆ, ಅದನ್ನು ಪಕ್ಷದ…

Read More
DK Shivakumar fans put flex and banners all over the bengaluru

Bengaluru: ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸಡಗರ: ಸ್ವಪಕ್ಷದವರಿಂದಲೇ ನಿಯಮಗಳ ಉಲ್ಲಂಘನೆ, ಇಡೀ ಸಿಟಿ ಫ್ಲೆಕ್ಸ್‌ಮಯ!

ಬೆಂಗಳೂರು: ನಗರದ ಸೌಂದರ್ಯ ಹಾಳುಗೆಡವಿ ಎಲ್ಲಾದರೂ ಅನಧಿಕೃತ ಬ್ಯಾನರ್ ಅಥವಾ ಫ್ಲೆಕ್ಸ್ ಹಾಕಿದರೆ ನಾನೇ ಖುದ್ದಾಗಿ ಕೇಸ್ ದಾಖಲಿಸಲು ಸೂಚಿಸುತ್ತೇನೆ” ಎಂದು ಹಿಂದೆ ಉಪಮುಖ್ಯಮಂತ್ರಿಯಾಗಿದ್ದ, ಪ್ರಸ್ತುತ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ನೀಡಿದ್ದರು. ಆದರೆ, ಜೂನ್ 3ರಂದು ನೆರವೇರಲಿರುವ ಅವರದೇ ಐತಿಹಾಸಿಕ ಪ್ರಮಾಣವಚನ ಸ್ವೀಕಾರ ಸಮಾರಂಭದ ಜೋಶ್‌ನಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ತಮ್ಮದೇ ನಾಯಕನ ಆದೇಶಕ್ಕೆ ಕವಡೆ ಕಾಸಿನ ಕೀಮ್ಮತ್ತು ನೀಡಿಲ್ಲ. ವರಿಷ್ಠರ ಸೂಚನೆ ಹಾಗೂ ಡಿಕೆಶಿಯವರ ಕಡಕ್ ಆದೇಶಗಳನ್ನು…

Read More
R Ashok accuse congress for Zameer viral audio

R Ashok: ಕಾಂಗ್ರೆಸ್‌ ಒಳಜಗಳಕ್ಕೆ ಡಿಕೆಶಿ ಬಲಿ, ಸಿದ್ದರಾಮಯ್ಯ ಕೊಟ್ಟ ಹಳೇ ಬಸ್ಸಿಗೆ ಡೀಸೆಲ್‌ ಕೂಡ ಇಲ್ಲ: ಆರ್. ಅಶೋಕ್ ಲೇವಡಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ದಿಢೀರ್ ಬದಲಾವಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನದ ಬೆನ್ನಲ್ಲೇ, ಹೊಸದಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಕುರಿತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ತೀವ್ರ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರಿಗೆ ನೀಡಿರುವ ಅಧಿಕಾರ ಒಂಥರಾ ‘ಭಸ್ಮಾಸುರನ ಆಶೀರ್ವಾದ’ ಇದ್ದಂತೆ ಎಂದು ಲೇವಡಿ ಮಾಡಿರುವ ಅವರು, ಭಸ್ಮಾಸುರನಿಗೆ ಸಿಕ್ಕ ವರವೇ ಅವನಿಗೆ ಮುಳುವಾದಂತೆ ಈ ಮುಖ್ಯಮಂತ್ರಿ ಕುರ್ಚಿ ಡಿಕೆಶಿಯವರ…

Read More
New cm dk shivakumar message to students for new school year

DK Shivakumar: ವಿದ್ಯಾರ್ಥಿಗಳಿಗೆ ಹೊಸ ಸಿಎಂ ಶುಭ ಹಾರೈಕೆ

ಬೆಂಗಳೂರು: “ಇಂದಿನಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭವಾಗಲಿ, ಯಶಸ್ಸು ಸಿಗಲಿ ಎಂದು ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಹಾರೈಸುತ್ತೇನೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. “ನಮ್ಮಲ್ಲಿ ಓದಿರುವ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಅತ್ಯಮೂಲ್ಯ ಮಾನವ ಸಂಪನ್ಮೂಲವಾಗಿ ತಮ್ಮದೇ ಆದ ಕೊಡುಗೆ ನೀಡಿದ್ದು, ಇಡೀ ವಿಶ್ವ ಇದಕ್ಕೆ ಸಾಕ್ಷಿಯಾಗಿದೆ. ನಮ್ಮ…

Read More
karnataka politics dk shivakumar to become 5th cm from ramanagar

DK Shivakumar: ರಾಮನಗರಕ್ಕೆ ಒಲಿದ ಸಿಎಂ ಗದ್ದುಗೆ: ರಾಮಕೃಷ್ಣ ಹೆಗಡೆ, ದೇವೇಗೌಡರ ಸಾಲಿಗೆ 5ನೇ ನಾಯಕನಾಗಿ ಡಿ.ಕೆ. ಶಿವಕುಮಾರ್ ಸೇರ್ಪಡೆ!

ರಾಮನಗರ: ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಿ ಜಿಲ್ಲೆಗಳಲ್ಲಿ ಒಂದಾದ ರಾಮನಗರಕ್ಕೆ ಈಗ ಮತ್ತೊಮ್ಮೆ ಮುಖ್ಯಮಂತ್ರಿ ಹುದ್ದೆಯ ಸೌಭಾಗ್ಯ ಸಿಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರದಂತೆ ಕನಕಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಈಗ ಬಹುತೇಕ ಖಚಿತವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದು ಡಿ.ಕೆ. ಶಿವಕುಮಾರ್ ಅವರು ಸಿಎಂ ಪೀಠ ಅಲಂಕರಿಸಿದರೆ, ರಾಮನಗರ ಜಿಲ್ಲೆಯ ಇತಿಹಾಸದಲ್ಲಿ ಈ ಅತ್ಯುನ್ನತ ಹುದ್ದೆಗೇರಿದ ಐದನೇ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಅವರು…

Read More