TOP NEWS
Be aware that people are observing us DK Shivakumar tells party workers and leaders

DK Shivakumar: ಕರ್ನಾಟಕದಲ್ಲಿ ಜಲಕ್ಷಾಮದ ಭೀತಿ: ಜಲಾಶಯದ ನೀರು ನಂಬಿ ಬೆಳೆ ಇಡಬೇಡಿ ಎಂದು ಸಿಎಂ ಡಿಕೆಶಿ ಮನವಿ!

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ತೀವ್ರ ಜಲಕ್ಷಾಮ ಹಾಗೂ ಆತಂಕಕಾರಿ ಬರಗಾಲದ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಉನ್ನತ ಮಟ್ಟದ ಸಂಪುಟ ಸಭೆ ನಡೆಸಿದ ಬಳಿಕ ಹೈ ಅಲರ್ಟ್ ಘೋಷಿಸಿದ್ದಾರೆ. ಇಡೀ ದೇಶದಲ್ಲೇ ಈ ಬಾರಿ ಭೀಕರ ಬರಗಾಲ ಆವರಿಸುವ ಲಕ್ಷಣಗಳಿದ್ದು, ಕರ್ನಾಟಕದ ಬಹುತೇಕ ಪ್ರಮುಖ ಜಲಾಶಯಗಳಿಗೆ ಬರುತ್ತಿದ್ದ ನೀರಿನ ಒಳಹರಿವು ಸಂಪೂರ್ಣವಾಗಿ ನಿಂತುಹೋಗಿದೆ ಎಂದು ಸಿಎಂ ಆತಂಕ ವ್ಯಕ್ತಪಡಿಸಿದ್ದಾರೆ. ಜಲಾಶಯಗಳಲ್ಲಿ ಒಣಗಿದ ಒಳಹರಿವು ರಾಜ್ಯದ ಬರ ಪರಿಸ್ಥಿತಿಯ ಕುರಿತು ಕಂದಾಯ ವಿಭಾಗಗಳ…

Read More
cm dk shivakumar about privatizing power department and OC for apartments

DK Shivakumar: ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ಸರ್ಕಾರ ಬ್ರೇಕ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ವಿತರಣೆಯನ್ನು ಖಾಸಗೀಕರಣಗೊಳಿಸುವ ಪ್ರಸ್ತಾಪ ಹಾಗೂ ರಾಜಧಾನಿಯ ಅಪಾರ್ಟ್‌ಮೆಂಟ್‌ಗಳಿಗೆ ಓಸಿ ನಿಯಮ ಸಡಿಲಿಕೆ ಮಾಡುವ ಕುರಿತಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಇಂದು ಬೆಂಗಳೂರಿನಲ್ಲಿ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂಧನ ಇಲಾಖೆ ಹಾಗೂ ಎಸ್ಕಾಂಗಳಿಗೆ ಈ ನಿಟ್ಟಿನಲ್ಲಿ ಮಹತ್ವದ ಆದೇಶಗಳನ್ನು ನೀಡಿದ್ದಾರೆ. ವಿದ್ಯುತ್ ಸರಬರಾಜು ಖಾಸಗೀಕರಣಕ್ಕೆ ಸರ್ಕಾರದ ಆಕ್ಷೇಪ ರಾಜ್ಯದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಸರ್ಕಾರ ಮುಂದಾಗಿದೆ…

Read More
Monsoon Session of Parliament to Begin After Completion of SIR Process

DK Shivakumar: ಕಲ್ಲು ಕ್ವಾರಿ ದುರಂತ: ವರದಿ ಬಂದ ತಕ್ಷಣ ಕಠಿಣ ಕ್ರಮ, ಸಂತ್ರಸ್ತರಿಗೆ ಸೂಕ್ತ ಪರಿಹಾರದ ಭರವಸೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಗಡಿ ರಸ್ತೆ ಸಮೀಪ ನಡೆದ ಕಲ್ಲು ಕ್ವಾರಿ ಅಪಘಾತದಲ್ಲಿ ಏಳು ಮಂದಿ ಕಾರ್ಮಿಕರು ಜೀವ ಕಳೆದುಕೊಂಡಿರುವ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಭೀಕರ ದುರಂತಕ್ಕೆ ಕಾರಣ ಏನೆಂಬುದರ ಬಗ್ಗೆ ವಿವಿಧ ಇಲಾಖೆಗಳಿಂದ ಅಧಿಕೃತ ಮಾಹಿತಿಗಳನ್ನು ಕಲೆಹಾಕಲಾಗುತ್ತಿದ್ದು, ವರದಿ ಕೈಸೇರಿದ ತಕ್ಷಣವೇ ಬೇಜವಾಬ್ದಾರಿತನ ತೋರಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಹೇಳಿದ್ದೇನು? ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಗಣಿ…

Read More
Dk shivakumar statement about cabinet expansion

DK Shivakumar: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: 20 ಸ್ಥಾನಗಳಿಗಾಗಿ 50ಕ್ಕೂ ಹೆಚ್ಚು ಶಾಸಕರ ಭಾರಿ ಪೈಪೋಟಿ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತುಗಳು ಮತ್ತಷ್ಟು ವೇಗ ಪಡೆದುಕೊಂಡಿವೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್‌ನಿಂದ ಇದಕ್ಕೆ ಹಸಿರು ನಿಶಾನೆ ಸಿಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟಪಡಿಸಿದ್ದಾರೆ. ರಾಮನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸ ಮುಗಿಸಿ ಹಿಂತಿರುಗಿದ ತಕ್ಷಣವೇ ಸಂಪುಟ ವಿಸ್ತರಣೆಯ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ತಮಗೆ ಮುಖ್ಯಮಂತ್ರಿ ಸ್ಥಾನಕ್ಕಿಂತ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ…

Read More
cm dk shivakumar promises to help in development of sandalwood

Sandalwood: ಕನ್ನಡ ಚಿತ್ರರಂಗ ಉಳಿವಿಗೆ ಸರ್ಕಾರದ ನೆರವಿನ ಭರವಸೆ ನೀಡಿದ ಸಿಎಂ ಡಿ‌ ಕೆ ಶಿವಕುಮಾರ್

ಬೆಂಗಳೂರು,: “ಕನ್ನಡ ಚಿತ್ರರಂಗ ಉಳಿವಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ ಸೇರಿದಂತೆ ಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳ, ಸರ್ಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ, ಏಕಪರದೆ ಚಿತ್ರಮಂದಿರಗಳ ನವೀಕರಣ, ಆಧುನೀಕರಣಕ್ಕೆ ವಿಶೇಷ ನೆರವು, ಚಿತ್ರರಂಗದವರಿಗೆ ಫ್ಲಾಟ್ ನಿರ್ಮಾಣಕ್ಕೆ (Sandalwood) ಬಿಡಿಎಯಿಂದ ಐದು ಎಕರೆ ಭೂಮಿ” ನೀಡುವಂತೆ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲ ಅವರ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು. ಚಲನಚಿತ್ರ ವಾಣಿಜ್ಯ ಮಂಡಳಿಯವರ ಮನವಿಗಳಿಗೆ…

Read More
Do not give fake news cm dk shivakumar gives suggestions to all media

DK Shivakumar: ಸುಳ್ಳು ಸುದ್ದಿಗಳ ಪರಿಣಾಮ ಏನು ಎನ್ನುವ ಎಚ್ವರಿಕೆ ಮಾಧ್ಯಮಗಳಿಗೆ ಇರಬೇಕು ಎಂದ ಸಿಎಂ

ಬೆಂಗಳೂರು: ನಿರ್ಭೀತಿಯ ಪತ್ರಿಕಾ ವೃತ್ತಿ ಇಂದಿನ ಸಂದರ್ಭದಲ್ಲಿ ಅತ್ಯಂತ ಸವಾಲಿನ ಕೆಲಸವಾಗಿದ್ದು, ತತ್ವಬದ್ಧ ವೃತ್ತಿಪರತೆ ಇಂದಿನ ಅಗತ್ಯವಾಗಿದೆ. ಇದರಿಂದ ಆ ಸವಾಲನ್ನು ಗೆಲ್ಲಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದರು. ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆಯಿಂದ ಕೆಲಸ ಮಾಡಬೇಕು ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆ ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ…

Read More
cm dk shivakumar gave green signal to start safari

DK Shivakumar: ಬಂಡಿಪುರ, ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಚಾಲನೆ ನೀಡುವ ಜೊತೆಗೆ ವನ್ಯಜೀವಿಗಳ ಸಂರಕ್ಷಣೆ ಮತ್ತು ನಾಗರಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ’ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಬಂಡಿಪುರ-ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸೂಚನೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಬಂಡಿಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

Read More