TOP NEWS
Cm siddaramaiah about building stadium

CM Siddaramaiah: 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ರಾಜ್ಯ ಸಜ್ಜು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (CM Siddaramaiah) ಅವರು ನುಡಿದರು. ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ,…

Read More
kpcc president and dcm dk shivakumar big action

DK Shivakumar: ಬಿಡದಿ ಟೌನ್‌ಶಿಪ್ ವಿವಾದ: ಕುಮಾರಸ್ವಾಮಿ ಸವಾಲು ಸ್ವೀಕರಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ರಾಜಕೀಯ ಜಟಾಪಟಿ ಈಗ ಮತ್ತಷ್ಟು ರೋಚಕ ತಿರುವು ಪಡೆದುಕೊಂಡಿದೆ. “ಕುಮಾರಸ್ವಾಮಿ ಅವರ ಬಹಿರಂಗ ಚರ್ಚೆಯ ಪಂಥಾಹ್ವಾನವನ್ನು ನಾನು ಮುಕ್ತವಾಗಿ ಸ್ವೀಕರಿಸಿದ್ದೇನೆ. ಅವರು ಹೇಳುವ ಸ್ಥಳಕ್ಕೇ ಬಂದು ಮುಖಾಮುಖಿ ಚರ್ಚೆ ನಡೆಸಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ನೇರ ಸವಾಲು ಎಸೆದಿದ್ದಾರೆ. ಸ್ಥಳ, ಸಮಯ ನಿಗದಿಪಡಿಸಲು ಆಫರ್: ಬಿಡದಿ…

Read More
one nation one election concept is not good for country says dk shivakumar

DK Shivakumar: ಒಂದು ದೇಶ, ಒಂದು ಚುನಾವಣೆ ಒಕ್ಕೂಟ ವ್ಯವಸ್ಥೆಗೆ ಮಾರಕ: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ!

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಒಂದು ದೇಶ, ಒಂದು ಚುನಾವಣೆ’ (ಒನ್‌ ನೇಷನ್‌, ಒನ್‌ ಎಲೆಕ್ಷನ್‌) ನೀತಿಯನ್ನು ಕರ್ನಾಟಕ ಸರ್ಕಾರ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತೀವ್ರವಾಗಿ ವಿರೋಧಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜಂಟಿ ಸಂಸದೀಯ ಅಧ್ಯಯನ ಸಮಿತಿ ನಡೆಸಿದ ವಿಶೇಷ ಸಂವಾದ ಸಭೆಯಲ್ಲಿ ಪಾಲ್ಗೊಂಡು ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ವಿರುದ್ಧ ಡಿಕೆಶಿ ಆರೋಪ ದೇಶದ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ…

Read More
Dcm dk shivakumar and cm siddaramaiah to visit delhi cm change row

CM Change: ರಾಜಕೀಯ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ಅಂಗಳಕ್ಕೆ ಸಿದ್ದರಾಮಯ್ಯ-ಡಿಕೆಶಿ ಜೋಡಿ: ಮೇ ಅಂತ್ಯಕ್ಕೆ ದೆಹಲಿ ಪ್ರವಾಸ

ಬೆಂಗಳೂರು: ಮೇ 20ಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಮೂರು ವರ್ಷಗಳ ಆಡಳಿತವನ್ನು ಪೂರೈಸುತ್ತಿದ್ದು, ಇದೇ ಹೊತ್ತಿನಲ್ಲಿ ಸಂಪುಟ ಪುನರಚನೆ ಹಾಗೂ ಮುಖಂಡತ್ವದ (CM Change) ಬದಲಾವಣೆಯ ಕಸರತ್ತುಗಳು ವೇಗ ಪಡೆದುಕೊಂಡಿವೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳಿಗೆ ಹೈಕಮಾಂಡ್ ಮಟ್ಟದಲ್ಲಿ ತಾರ್ಕಿಕ ಅಂತ್ಯ ಹಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇ ತಿಂಗಳ ಕೊನೆಯ ವಾರದಲ್ಲಿ ದೆಹಲಿಗೆ ತೆರಳಲಿದ್ದಾರೆ. ಡಿಕೆಶಿ ಬಣದ ಒತ್ತಡ ಮತ್ತು ದೆಹಲಿ ನಾಯಕರ ಭೇಟಿ: ಇತ್ತೀಚೆಗಷ್ಟೇ ಉಪಮುಖ್ಯಮಂತ್ರಿ ಡಿ.ಕೆ….

Read More
There is no change in cm Siddaramaiah post basaraja rayareddy confirms

Congress: “2028ರ ತನಕ ಸಿದ್ದರಾಮಯ್ಯ ಅವರೇ ಸಿಎಂ”: ನಾಯಕತ್ವ ಬದಲಾವಣೆ ಚರ್ಚೆಗೆ ಬಸವರಾಜ ರಾಯರೆಡ್ಡಿ ಬ್ರೇಕ್!

ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಗೊಂದಲಗಳಿಗೆ ಶಾಸಕ ಬಸವರಾಜ ರಾಯರೆಡ್ಡಿ ತೆರೆ ಎಳೆದಿದ್ದಾರೆ. ಪ್ರಸ್ತುತ ಅವಧಿ ಮುಗಿಯುವವರೆಗೂ, ಅಂದರೆ 2028ರ ತನಕ ಸಿದ್ದರಾಮಯ್ಯ (Congress) ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿಎಲ್‌ಪಿ ಸಭೆ ನಡೆದಿಲ್ಲ: ಕೊಪ್ಪಳದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರಾಯರೆಡ್ಡಿ, ಮುಂಬರುವ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಆಡಳಿತ ನಡೆಯಲಿದೆ. ಒಂದು ವೇಳೆ ಹೈಕಮಾಂಡ್ ನಾಯಕತ್ವ ಬದಲಾವಣೆಯ ನಿರ್ಧಾರ ಕೈಗೊಳ್ಳಬೇಕಿದ್ದರೆ, ಮೊದಲು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ…

Read More
Congress government sadhana samavesha date changed

Congress: ಸರ್ಕಾರದ ‘ಸಾಧನಾ ಸಮಾವೇಶ’ ಒಂದು ದಿನ ಮುಂಚಿತವಾಗಿ; ನಾನೇ ಸಿಎಂ ಎಂದು ಮತ್ತೆ ಗುಡುಗಿದ ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವಸಂತಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ‘ಸಾಧನಾ ಸಮಾವೇಶ’ದ ಕಾರ್ಯಕ್ರಮದಲ್ಲಿ(Congress) ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಮೇ 20 ರಂದು ನಿಗದಿಯಾಗಿದ್ದ ಬೃಹತ್ ಸಮಾವೇಶವನ್ನು ಈಗ ಒಂದು ದಿನ ಮುಂಚಿತವಾಗಿ ಅಂದರೆ, ಮೇ 19 ರಂದೇ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಮಾವೇಶದ ತಯಾರಿ ಹಾಗೂ ದಿನಾಂಕ ಬದಲಾವಣೆ: ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಈ ಮೆಗಾ ಕಾರ್ಯಕ್ರಮದ ಸಿದ್ಧತೆಗಳನ್ನು ಅವಲೋಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಡಳಿತಾತ್ಮಕ ಹಿತದೃಷ್ಟಿಯಿಂದ ಒಂದು ದಿನ…

Read More
DK Shivakumar about GBA election it will happen soon

DK Shivakumar: ಶೀಘ್ರದಲ್ಲಿ ಜಿಬಿಎ ಚುನಾವಣೆ: ಡಿಕೆ ಶಿವಕುಮಾರ್

ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. ಈ ವರ್ಷ ಜಿಬಿಎ ಆದಾಯದ ನಿರೀಕ್ಷೆ ಏನಿದೆ ಎಂದು ಕೇಳಿದಾಗ, “ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ…

Read More